ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ವೇಳಾಪಟ್ಟಿ ಸುಳ್ಳು ಎಂಬುದಾಗಿ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ. ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದಿದೆ.
ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣಾ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗೆ ಕಿವಿಗೊಡಬಾರದು ಎಂಬುದಾಗಿ ಮನವಿ ಮಾಡಿದೆ.
GBA ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್
ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್