Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ! ಮಲಗುವ ಮುನ್ನ ನೀವು ಸೇವಿಸುವ ಈ ಪಾನೀಯಗಳು ಆರೋಗ್ಯಕ್ಕೆ ಕುತ್ತು ತರಬಹುದು- ತಜ್ಞರು

16/03/2026 9:42 PM

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ತವ್ಯಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೆ’ : ಸಾರಿಗೆ ಸಿಬ್ಬಂದಿಗಳಿಗೆ ‘KSRTC’ ಖಡಕ್ ಎಚ್ಚರಿಕೆ !
KARNATAKA

BREAKING : ಕರ್ತವ್ಯಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೆ’ : ಸಾರಿಗೆ ಸಿಬ್ಬಂದಿಗಳಿಗೆ ‘KSRTC’ ಖಡಕ್ ಎಚ್ಚರಿಕೆ !

By kannadanewsnow5718/02/2026 8:08 AM

ಬೆಂಗಳೂರು :  ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ.19.02.2026 ರಂದು “ಬೆಂಗಳೂರು ಚಲೋ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ತತ್ಸಂಬಂಧ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಕುರಿತು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ರವರು ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ದಿನಾಂಕ: 01.01.2020 ರಿಂದ 28.02.2023 ರ ವರೆಗಿನ ವೇತನ ಪರಿಷ್ಕರಣೆಯ 38 ತಿಂಗಳ ವೇತನ ಹಿಂಬಾಕಿ ಮತ್ತು 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದದ ಹಾಗೂ ಇತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ.19.02.2026 ರಂದು “ಬೆಂಗಳೂರು ಚಲೋ” ಕಾರ್ಯಕ್ರಮಕ್ಕೆ ಕರೆ ನೀಡಿರುತ್ತಾರೆ.

ಈ ಸಂಬಂಧ ಈ ಕೆಳಕಂಡ ಅಂಶಗಳನ್ನು ನಿಗಮದ ನೌಕರರ ಗಮನಕ್ಕೆ ತರಲಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳು ರಾಜ್ಯದ ಜನಸಾಮಾನ್ಯರಿಗೆ ಸಮರ್ಪಕವಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಅದಕ್ಕನುಗುಣವಾಗಿ ಘನ ಕರ್ನಾಟಕ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆಯನ್ನು ಕರ್ನಾಟಕ ಅಗತ್ಯ -2013 (Karnataka Act No-25/2015) ໖ ಅಧಿಸೂಚನೆಯನ್ನು ಹೊರಡಿಸಿದ್ದು, ಅದರನ್ವಯ ರಸ್ತೆ ಸಾರಿಗೆ ನಿಗಮಗಳ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ ಮತ್ತು ಇತರೆ ಯಾವುದೇ ಸಂಘ ಸಂಸ್ಥೆ ಅಥವಾ ವ್ಯಕ್ತಿಗಳು ನಿಗಮದ ನೌಕರರು ಮುಷ್ಕರ ಹೂಡುವಂತೆ ಪ್ರಚೋದಿಸುವಂತಿಲ್ಲ ಹಾಗೂ ಬೆಂಬಲವನ್ನು ಸಹ ವ್ಯಕ್ತಪಡಿಸುವಂತಿಲ್ಲ.

ಘನ ಕರ್ನಾಟಕ ಸರ್ಕಾರವು ಎಲ್ಲಾ ನಾಲ್ಕೂ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆಯನ್ನು “ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ” ಎಂಬುದಾಗಿ ಘೋಷಿಸಿದ್ದು, ಅದರನ್ವಯ ಜನಸಾಮಾನ್ಯರಿಗೆ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ನಿಗಮದ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರ ಆದ್ಯ ಕರ್ತವ್ಯವಾಗಿರುತ್ತದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ನಿಗಮದ ನೌಕರರು ಯಾವುದೇ ಕಾರಣಕ್ಕೂ ದಿನಾಂಕ:19.02.2026 ರಂದು “ಬೆಂಗಳೂರು ಚಲೋ” ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಮತ್ತು ತಮ್ಮ ದೈನಂದಿನ ಕರ್ತವ್ಯಕ್ಕೆ ಅವಶ್ಯ ಹಾಜರಾಗಿ, ರಾಜ್ಯದ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕಾಗಿ ಮನವಿ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಕೆಳಕಂಡ ನಿರ್ದೇಶನಗಳನ್ನು ನೀಡಲಾಗಿದೆ.

ದಿನಾಂಕ.19.02.2026 ರಂದು ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು.

ದಿನಾಂಕ.19.02.2026 ರಂದು ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು.

ದಿನಾಂಕ.19.02.2026 ರಂದು ನಿಗಮದ ಅನುಸೂಚಿಗಳ ಆಚರಣೆಯು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ “ಕೆಲಸ ಮಾಡದಿದ್ದಾಗ ವೇತನವಿಲ್ಲ” ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳುವುದು.

ಈ ಸೂಚನೆಗಳು ವಾರದ ರಜೆ ಮತ್ತು ಧೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಆದರೆ, ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವುದು.

ದಿನಾಂಕ.19.02.2026 ರಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯನ್ನು ಘಟಕವಾರು/ವರ್ಗಾವಾರು ಸಿದ್ಧಪಡಿಸಿ, ಮೇಲೆ ತಿಳಿಸಿರುವಂತೆ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ತತ್ವದನ್ವಯ ಕ್ರಮಕೈಗೊಳ್ಳುವುದು.

ವಿಶೇಷ ಸೂಚನೆ:

ರಾಜ್ಯದ ಉಚ್ಚ ನ್ಯಾಯಾಲಯದ ವಿಭಾಗೀಯ ನ್ಯಾಯಪೀಠವು ದಿನಾಂಕ.29.01.2004 ರಂದು Writ Appeal No.6347 of 2000(LK) C/W Writ Appeal No.1005 and 1006 of 20010 ಇಂತಹ ಸಂದರ್ಭಗಳಲ್ಲಿ ನೌಕರರು ತಮ್ಮ ದೈನಂದಿನ ಕರ್ತವ್ಯಕ್ಕೆ ಗೈರು ಹಾಜರಾದ ಪಕ್ಷದಲ್ಲಿ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ಸಾಮಾನ್ಯ ತತ್ವದನ್ವಯ ದಿನದ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ಆಡಳಿತವರ್ಗವು ಅನಧಿಕೃತವಾಗಿ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬಹುದಾಗಿದೆ ಎಂಬುದಾಗಿ ಆದೇಶಿಸಿದ್ದು, ಈ ವಿಷಯವನ್ನು ನಿಗಮದ ನೌಕರರ ಗಮನಕ್ಕೆ ಅವಶ್ಯ ತರುವುದು.

'No work no pay' if you don't report for duty: KSRTC warns transport staff
Share. Facebook Twitter LinkedIn WhatsApp Email

Related Posts

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM2 Mins Read

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM2 Mins Read

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM1 Min Read
Recent News

ಎಚ್ಚರ! ಮಲಗುವ ಮುನ್ನ ನೀವು ಸೇವಿಸುವ ಈ ಪಾನೀಯಗಳು ಆರೋಗ್ಯಕ್ಕೆ ಕುತ್ತು ತರಬಹುದು- ತಜ್ಞರು

16/03/2026 9:42 PM

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM
State News
KARNATAKA

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

By kannadanewsnow0916/03/2026 9:23 PM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಇಂಧನ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ ತಿಂಗಳಿನಿಂದ ವಿದ್ಯುತ್ ದರ ಏರಿಕೆ ಮಾಡುವ ಯಾವುದೇ…

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.