Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

UPI ಹೇಗೆ ಕಾರ್ಯನಿರ್ವಹಿಸುತ್ತದೆ: ಭಾರತದಲ್ಲಿ ಡಿಜಿಟಲ್ ಪಾವತಿ ಕ್ರಾಂತಿಯ ಹಿಂದಿನ ಅಸಲಿ ಕಥೆ!

ಬ್ಯಾಂಕ್ ಲಾಕರ್‌ ನಲ್ಲಿಟ್ಟ ಚಿನ್ನ ಕಳುವಾದರೆ ನಷ್ಟ ಪರಿಹಾರ ಸಿಗುತ್ತಾ? RBI ನಿಯಮಗಳು ಇಲ್ಲಿವೆ!

SHOCKING : ಪತ್ನಿಗೆ ಮನಬಂದಂತೆ ಥಳಿಸಿ, ತಲೆಬೋಳಿಸಿದ ಪಾಪಿಪತಿ : ಆಘಾತಕಾರಿ ವೀಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇಕೆದಾಟು ಯೋಜನೆಯ ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
KARNATAKA

ಮೇಕೆದಾಟು ಯೋಜನೆಯ ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, “ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ ನೀಡಲಿದೆ. ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಬಿಡಲು ನಾವು ಸಿದ್ಧವಾಗಿದ್ದೇವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವೂ ಇದೆ. ಈ ಯೋಜನೆ ತೀರ್ಮಾನವನ್ನು ಕೇಂದ್ರ ಜಲ ಆಯೋಗ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ” ಎಂದು ತಿಳಿಸಿದರು.

ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸುವುದಿಲ್ಲ

“ನಾವು ತಮಿಳುನಾಡಿನ ರೈತರ ಹಿತವನ್ನೂ ಕಾಪಾಡಬೇಕು. ಇದು ಸಮತೋಲಿತ ಜಲಾನಯನ. ಇಲ್ಲಿ ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸುವುದಿಲ್ಲ. ಬೆಂಗಳೂರು ನಗರದ ಕುಡಿಯುವ ನೀರು ಪೂರೈಕೆಗೆ ಮಾತ್ರ ಬಳಸಲಾಗುವುದು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ನಾವು ಕೃಷ್ಣಾದಿಂದ ನೀರನ್ನು ತರಲು ಸಾಧ್ಯವಿಲ್ಲ. ಹೀಗಾಗಿ ಕಾವೇರಿ ನಮ್ಮ ಮುಂದಿರುವ ಏಕೈಕ ಆಯ್ಕೆ” ಎಂದು ತಿಳಿಸಿದರು.

ಮೇಕೆದಾಟು ಯೋಜನೆ ರದ್ದುಗೊಳಿಸಲು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ತಮಿಳುನಾಡಿನವರು ಕಳೆದ 40 ವರ್ಷಗಳಿಂದ ರಾಜಕೀಯ ಅಜೆಂಡಾ ಇಟ್ಟುಕೊಂಡಿದ್ದಾರೆ. ಅವರ ರಾಜಕೀಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರದ ಬಗ್ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ಹೆಚ್ಚುವರಿ ನೀರು ಸಮುದ್ರ ಸೇರಿದೆ. ಅವರು ಕೆಳ ಹಂತದಲ್ಲಿ ಸಾಕಷ್ಟು ಅಣೆಕಟ್ಟು ನಿರ್ಮಾಣ ಮಾಡುತ್ತಿದ್ದು, ನಾವು ಯಾವುದಕ್ಕೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಅವರ ನೆಲದಲ್ಲಿ ಅವರು ನಿರ್ಮಿಸಿಕೊಳ್ಳುತ್ತಿದ್ದಾರೆ. ಇದೇ ವಿಚಾರ ಸುಪ್ರೀಂ ಕೋರ್ಟ್ ನಲ್ಲೂ ಚರ್ಚೆಯಾಗಿದೆ. ಈ ಯೋಜನೆಗೆ ನಾವು ಯಾವುದೇ ಆರ್ಥಿಕ ನೆರವಾಗಲಿ ಇತರೆ ವಿಚಾರವನ್ನು ಕೇಳುತ್ತಿಲ್ಲ. ಈ ಯೋಜನೆಯಿಂದ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವುದು ಇಂಧನ ಕ್ಷೇತ್ರದಲ್ಲಿ ನಮಗೆ ಅನುಕೂಲ ಮಾಡಿಕೊಡಲಿದೆ” ಎಂದರು.

ತಮಿಳುನಾಡು ಜೊತೆ ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧ

ಈ ವಿಚಾರವಾಗಿ ತಮಿಳುನಾಡು ಜೊತೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಯಾವಾಗ ಬೇಕಾದರೂ ಅವರ ಜೊತೆ ಮಾತನಾಡಲು ಸಿದ್ಧನಿದ್ದೇನೆ, ತಮಿಳುನಾಡು, ಕರ್ನಾಟಕದವರು ಭಾರತೀಯರು. ನಾವು ಕಾವೇರಿ ನೀರು ಕುಡಿಯಬೇಕು. ತಮಿಳುನಾಡಿನಿಂದ ಇಲ್ಲಿಗೆ ಬಂದು ವೃತ್ತಿ ಮಾಡುತ್ತಿರುವ ಅನೇಕ ಜನರಿದ್ದಾರೆ. ಇಲ್ಲಿಂದ ಹೋಗಿ ಅಲ್ಲಿ ಕೆಲಸ ಮಾಡುತ್ತಿರುವವರೂ ಇದ್ದಾರೆ. ನಾವು ಅವರನ್ನು ಪ್ರತ್ಯೇಕಿಸುವುದಿಲ್ಲ. ಸಮತೋಲಿತ ಜಲಾನಯನ ನಿರ್ಮಾಣದಿಂದ ಕಷ್ಟ ಕಾಲದಲ್ಲಿ ತಮಿಳುನಾಡಿನ ಪಾಲಿನ ನೀರನ್ನು ಹರಿಸಲು ನೆರವಾಗುತ್ತದೆ. ಅತಿ ಕಡಿಮೆ ವೆಚ್ಚದಲ್ಲಿ ಯೋಜನೆ ಆಗುವ ವಿಶ್ವಾಸವಿದೆ” ಎಂದು ತಿಳಿಸಿದರು.

ನಮ್ಮ ಎಲ್ಲಾ ಸಂಸದರು ಒಗ್ಗಟ್ಟಾಗಿ ಹೋರಾಡುವ ವಿಶ್ವಾಸವಿದೆ

ತಮಿಳುನಾಡು ಅನಗತ್ಯ ಕ್ಯಾತೆ ತೆಗೆಯುತ್ತಿಲ್ಲವೇ ಎಂದು ಕೇಳಿದಾಗ, “ಅವರು ರಾಜಕೀಯ ಉಳಿವಿಗಾಗಿ ಧ್ವನಿ ಎತ್ತುತ್ತಿದ್ದಾರೆ. ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಬಂದ ಬಳಿಕ ಮತ್ತೇನಿದೆ? ಕರ್ನಾಟಕ 177 ಟಿಎಂಸಿ ನೀರು ಬಿಡಬೇಕು ಎಂದು ನೀಡಿದ ನಿರ್ದೇಶನವನ್ನು ನಾವು ಒಪ್ಪಿಕೊಳ್ಳಲಿಲ್ಲವೇ?” ಎಂದು ತಿಳಿಸಿದರು.

ರಾಜ್ಯದ ಬಿಜೆಪಿ ಸಂಸದರು ಇದರ ಬಗ್ಗೆ ಹೋರಾಟ ಮಾಡಬೇಕಲ್ಲವೇ ಎಂದಾಗ, “ಅವರು ಹೋರಾಟ ಮಾಡುತ್ತಾರೆ. ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್, ಬಿಜೆಪಿ, ದಳ ಎಲ್ಲಾ ಸಂಸದರು ಒಗ್ಗಟ್ಟಾಗಿ ನಮ್ಮ ರಾಜ್ಯದ ಹಿತ ಕಾಪಾಡುತ್ತಾರೆ ಎಂಬ ವಿಶ್ವಾಸ ನಮಗಿದೆ” ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ನಿಮ್ಮ ಮೈತ್ರಿ ಇದೆ ಎಂದು ಕೇಳಿದಾಗ, “ನಾವು ಅವರಿಗೆ ಏನು ಮನವಿ ಮಾಡಬೇಕೋ ಮನವಿ ಮಾಡುತ್ತೇವೆ. ಇಲ್ಲಿ ರಾಜಕಾರಣ ಏನಿಲ್ಲ. ಎರಡು ರಾಜ್ಯಗಳ ಜನರ ಹಿತ ಕಾಪಾಡಿಕೊಂಡು ಹೋಗೋಣ” ಎಂದರು.

ಪರಿಷತ್ ಚುನಾವಣೆ ಅಡ್ಡಮತದಾನದ ಅಗತ್ಯವಿಲ್ಲ

ಪರಿಷತ್ ಚುನಾವಣೆಯಲ್ಲಿ ಬಹಳಷ್ಟು ತಂತ್ರಗಾರಿಕೆ ಮಾಡಲಾಗಿದೆ ಎಂದು ಕೇಳಿದಾಗ, “ನಾವು ಯಾವುದೇ ತಂತ್ರಗಾರಿಕೆ ಮಾಡಿಲ್ಲ. ಅದರ ಅವಶ್ಯಕತೆ ಇಲ್ಲ. ಎಲ್ಲರೂ ಪ್ರಜ್ಞಾವಂತರು, ಬುದ್ಧಿವಂತರಿದ್ದು, ಜನರ ಪ್ರತಿನಿಧಿಗಳಾಗಿದ್ದಾರೆ. ಅವರು ತಮ್ಮ ಸ್ವಇಚ್ಛೇ ಮೇಲೆ ಯಾರಿಗೆ ಮತ ಹಾಕಬೇಕೋ ಹಾಕಿದ್ದಾರೆ. ನಾನು ನಮ್ಮ ಶಾಸಕರ ಜೊತೆ ಎರಡು ದಿನ ಕಾಲ ಕಳೆದಿದ್ದೇನೆ ಹೊರತು, ಬೇರೆ ಯಾವ ತಂತ್ರಗಾರಿಕೆ ಮಾಡಿಲ್ಲ” ಎಂದು ತಿಳಿಸಿದರು.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ನಡೆದಿದೆ ಎಂಬ ವಿಚಾರವಾಗಿ ಕೇಳಿದಾಗ, “ನಾವು ಯಾವುದೇ ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ, ಅದರ ಬಗ್ಗೆ ಮಾಹಿತಿಯೂ ಇಲ್ಲ. ಇದು ರಹಸ್ಯ ಮತವಾಗಿದ್ದು, ಫಲಿತಾಂಶ ಬರುವವರೆಗೂ ಕಾಯೋಣ. ಅಡ್ಡಮತದಾನ ಯಾವ ಕಾರಣಕ್ಕೆ ಆಗುತ್ತದೆ? ನಮ್ಮ ಶಾಸಕರ ಮತವನ್ನು ನಮ್ಮ ಅಭ್ಯರ್ಥಿಗೆ ಹಾಕುವಂತೆ ಕೇಳಿಕೊಂಡಿದ್ದೇವೆ. ಅಭ್ಯರ್ಥಿಗಳು ಏನೇನು ಮಾಡಿಕೊಂಡಿದ್ದಾರೋ ಗೊತ್ತಿಲ್ಲ” ಎಂದರು.

ರೆಸಾರ್ಟ್ ಸೇರಿದ್ದರ ಬಗ್ಗೆ ಕೇಳಿದಾಗ, “ಪರಿಷತ್ ಚುನಾವಣೆಯಲ್ಲಿ ಹೇಗೆ ಮತದಾನ ಮಾಡಬೇಕು ಎಂದು ಮಾರ್ಗದರ್ಶನ ಹಾಗೂ ತರಬೇತಿ ನೀಡಿದ್ದೇವೆ. ಇಲ್ಲಿ ಆದ್ಯತೆ ಮತ ಚಲಾವಣೆಯಲ್ಲಿ ಗುರುತು ಮಾಡುವಾಗ ಅನೇಕ ವ್ಯತ್ಯಾಸಗಳಾಗುತ್ತವೆ. ನಮ್ಮಲ್ಲಿ 60-70 ಶಾಸಕರು ಹೊಸಬರಾಗಿದ್ದು, ಅವರಿಗೆ ಆದ್ಯತೆ ಮತದ ಬಗ್ಗೆ ಅರಿವು ಮೂಡಿಸಿದ್ದೇವೆ. ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸುಮಾರು 7-8 ಸಾವಿರ ಮತಗಳು ತಿರಸ್ಕೃತಗೊಳ್ಳುತ್ತವೆ” ಎಂದು ತಿಳಿಸಿದರು.

ಬಿಜೆಪಿ ಉಚ್ಛಾಟಿತ ಶಾಸಕರು ನಿಮ್ಮ ಜೊತೆ ಕಾಣಿಸಿಕೊಂಡಿದ್ದಾರೆ ಎಂದು ಕೇಳಿದಾಗ, “ರಾಜ್ಯದ 224 ಶಾಸಕರೂ ನನ್ನ ಜೊತೆ ಆತ್ಮೀಯರಾಗಿದ್ದಾರೆ. ನಾನು 224 ಶಾಸಕರಿಗೂ ಮುಖ್ಯಮಂತ್ರಿ. ನಾನು ಒಂದು ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ಎಲ್ಲರೂ ನಮ್ಮ ಸಹೋದರರೇ” ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಇದ್ದೇವೆ ಎಂದು ತಿಳಿಸಿದ್ದಾರೆ ಎಂದು ಕೇಳಿದಾಗ, “ಇದು ಗೌಪ್ಯ ಮತದಾನವಾಗಿರುವುದರಿಂದ ಅವರು ಯಾರಿಗೆ ಮತ ಹಾಕಿದ್ದಾರೆ ಎಂದು ನಮಗೆ ಗೊತ್ತಿಲ್ಲ. ನಾನು ದುರ್ಬಿನು ಹಾಕಿ ನೋಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಅಸೂಯೆಗೆ ಮದ್ದಿಲ್ಲ

ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಅಸಂಬದ್ಧ ಹೇಳಿಕೆಗಳಿಗೆಲ್ಲ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ರೀತಿ ಮಾತನಾಡುವುದು ಅವರ ಮಟ್ಟಕ್ಕೆ ಸರಿಯಲ್ಲ ಅಥವಾ ಈ ಮಟ್ಟಕ್ಕೆ ಇಳಿದು ಅವರು ಮಾತನಾಡಬಾರದು. ಈ ಮಾತುಗಳು ಅವರ ಘನತೆಗೆ ಸೂಕ್ತವಾದುದಲ್ಲ. ಅವರು ತಮ್ಮ ಹಿರಿತನ ಕಾಪಾಡಿಕೊಂಡು ಹೋದರೆ ಒಳ್ಳೆಯದು. ಅಸೂಯೆಗೆ ಮದ್ದಿಲ್ಲ ಎಂದಷ್ಟೇ ನಾನು ಹೇಳಬಹುದು” ಎಂದು ತಿಳಿಸಿದರು.

ದೆಹಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದಾಗ, “ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಿದ್ದೇನೆ” ಎಂದು ತಿಳಿಸಿದರು.

Telegram: ಕಾನೂನುಬಾಹಿರ ಚಟುವಟಿಕೆಗಳಿಗೆ ಟೆಲಿಗ್ರಾಮ್ ದುರ್ಬಳಕೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

Share. Facebook Twitter LinkedIn WhatsApp Email

Related Posts

ಕರುನಾಡಿಗೆ ಬರದ ಆತಂಕ: ಕೈಕೊಟ್ಟ ಮುಂಗಾರು, ಅನ್ನದಾತ ಕಂಗಾಲು!

1 Min Read

BREAKING : ನಟಿ ರುಕ್ಮಿಣಿ ವಸಂತ ಫೋಟೋ ಡೀಪ್‌ ಫೇಕ್ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

1 Min Read

ರಾಜ್ಯದ ಪೂರ್ವಪ್ರಾಥಮಿಕ ಶಾಲೆಗಳಲ್ಲಿ `LKG-UKG’ ದಾಖಲಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

1 Min Read
Recent News

UPI ಹೇಗೆ ಕಾರ್ಯನಿರ್ವಹಿಸುತ್ತದೆ: ಭಾರತದಲ್ಲಿ ಡಿಜಿಟಲ್ ಪಾವತಿ ಕ್ರಾಂತಿಯ ಹಿಂದಿನ ಅಸಲಿ ಕಥೆ!

ಬ್ಯಾಂಕ್ ಲಾಕರ್‌ ನಲ್ಲಿಟ್ಟ ಚಿನ್ನ ಕಳುವಾದರೆ ನಷ್ಟ ಪರಿಹಾರ ಸಿಗುತ್ತಾ? RBI ನಿಯಮಗಳು ಇಲ್ಲಿವೆ!

SHOCKING : ಪತ್ನಿಗೆ ಮನಬಂದಂತೆ ಥಳಿಸಿ, ತಲೆಬೋಳಿಸಿದ ಪಾಪಿಪತಿ : ಆಘಾತಕಾರಿ ವೀಡಿಯೋ ವೈರಲ್ | WATCH VIDEO

BREAKING : 2026ರ `ಕಾಮನ್‌ ವೆಲ್ತ್’ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ `ನೀರಜ್ ಚೋಪ್ರಾ’ ; ನಾಲ್ಕನೇ ಸ್ಥಾನಕ್ಕೆ ತೃಪ್ತಿ

State News
KARNATAKA

ಕರುನಾಡಿಗೆ ಬರದ ಆತಂಕ: ಕೈಕೊಟ್ಟ ಮುಂಗಾರು, ಅನ್ನದಾತ ಕಂಗಾಲು!

By kannadanewsnow57 KARNATAKA 1 Min Read

ಬೆಂಗಳೂರು: ಜೂನ್ ತಿಂಗಳು ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದ ಕಾರಣ ಕರ್ನಾಟಕದ ಹಲವೆಡೆ ತೀವ್ರ…

BREAKING : ನಟಿ ರುಕ್ಮಿಣಿ ವಸಂತ ಫೋಟೋ ಡೀಪ್‌ ಫೇಕ್ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

ರಾಜ್ಯದ ಪೂರ್ವಪ್ರಾಥಮಿಕ ಶಾಲೆಗಳಲ್ಲಿ `LKG-UKG’ ದಾಖಲಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಗ್ರಾಹಕರೇ ಗಮನಿಸಿ : `LPG’ ಗ್ಯಾಸ್ ಸಿಲಿಂಡರ್ ಇ-ಕೆವೈಸಿ ಯಾರಿಗೆ ಕಡ್ಡಾಯ, ಯಾರಿಗೆ ಬೇಡ? ಇಲ್ಲಿದೆ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.