Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ನವೆಂಬರ್ 28 ರವರೆಗೆ ಅವಕಾಶ
KARNATAKA

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ನವೆಂಬರ್ 28 ರವರೆಗೆ ಅವಕಾಶ

By kannadanewsnow5717/11/2024 7:11 AM

ಭಾರತ ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ  ನವಂಬರ್ 28 ರೊಳಗಾಗಿ ಸಲ್ಲಿಸಲು ಅವಕಾಶ ಇದೆ ಎಂದು ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಮತ್ತು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು. 

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ಮಾಹಿತಿ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಅಕ್ಟೋಬರ್ 29 ರಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ನವೆಂಬರ್ 28 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ನವೆಂಬರ್ 23 ನಾಲ್ಕನೇ ಶನಿವಾರ ಹಾಗೂ 24 ರ ಭಾನುವಾರ ರಜಾ ದಿನಗಳಂದು ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ. ಸಾರ್ವಜನಿಕರು ತಮ್ಮ ಮತಗಟ್ಟೆ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದರು.

ಸಾರ್ವಜನಿಕರು ಮತದಾರರ ಪಟ್ಟಿಗೆ ಆಕ್ಷೇಪಣೆಗಳನ್ನು ತಹಶೀಲ್ದಾರರ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಪಾಲಿಕೆ ವ್ಯಾಪ್ತಿಯಲ್ಲಿ ಸಂಬಂಧಿಸಿದ ಕಾರ್ಯಾಲಯಗಳಿಗೆ ಹಾಗೂ ಬಿ.ಎಲ್.ಓ.ಗಳಿಗೆ ನೀಡಬಹುದಾಗಿದೆ. ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಡಿಸೆಂಬರ್ 24 ರೊಳಗಾಗಿ ಇತ್ಯರ್ಥಪಡಿಸಿ 2025 ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಮಾತನಾಡಿ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1693 ಮತಗಟ್ಟೆಗಳಿದ್ದು ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದರಲ್ಲಿ 1048 ಶಿಕ್ಷಕರು, 501 ಅಂಗನವಾಡಿ ಕಾರ್ಯಕರ್ತೆಯರು, 61 ಆಶಾ ಕಾರ್ಯಕರ್ತೆಯರು, 38 ಬಿಲ್ ಕಲೆಕ್ಟರ್, 15 ಗ್ರಾಮ ಆಡಳಿತಾಧಿಕಾರಿಗಳು, 16 ದ್ವಿತೀಯ ದರ್ಜೆ ಸಹಾಯಕರು, 14 ಪ್ರಥಮ ದರ್ಜೆ ಸಹಾಯಕರು ಬಿಎಲ್‍ಓಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಕರಡು ಮತದಾರರ ಪಟ್ಟಿಯನ್ವಯ 2025 ರ ಜನವರಿಗೆ 1 ಕ್ಕೆ ನಿರೀಕ್ಷಿತ 19,143,379 ಜನಸಂಖ್ಯೆ ನಿರೀಕ್ಷಿಸಲಾಗಿದೆ. ಪ್ರಸ್ತುತ 743476 ಪುರುಷ, 751277 ಮಹಿಳೆ ಸೇರಿ 1494753 ಮತದಾರರಿದ್ದಾರೆ. ಇದು ಜನಗಣತಿ ಅಂಕಿ ಅಂಶಕ್ಕೆ ಹೋಲಿಕೆ ಮಾಡಿದಲ್ಲಿ ಶೇ 78.08 ಮತದಾರರಿದ್ದಾರೆ.

ವಯೋಮಾನದ್ವಯ 18 ರಿಂದ 19 ವರ್ಷ 43805 ಮತದಾರರಿದ್ದು ಜನಸಂಖ್ಯೆಗೆ ಶೇ 2.28%, 20-29 ವರ್ಷದವರೆಗೆ 298110 ಮತದಾರರು ಜನಸಂಖ್ಯೆಗೆ ಶೇ 15.57%, 30-39 ರವರೆಗೆ 340012 ಮತದಾರರು ಜನಸಂಖ್ಯೆಗೆ ಶೇ 17.76, 40-49 ರ ಮಧ್ಯದಲ್ಲಿ 325916 ಮತದಾರರು ಜನಸಂಖ್ಯೆಗೆ ಶೇ 17.02, 50-59 ರಲ್ಲಿ 238269 ಮತದಾರರು ಜನಸಂಖ್ಯೆಗೆ ಶೇ 12.44, 60-69 ರ ವಯಸ್ಸಿನವರು 148982 ಮತದಾರರು ಜನಸಂಖ್ಯೆಗೆ ಶೇ 7.78, 70-79 ರ ವಯೋಮಾನ 72742 ಮತದಾರರು ಜನಸಂಖ್ಯೆಗೆ ಶೇ 3.79 ಮತ್ತು 80-89 ವರ್ಷದ ಅವಧಿಯಲ್ಲಿ 22976 ಮತದಾರರಿದ್ದಾರೆ, ಜನಸಂಖ್ಯೆಗೆ ಹೋಲಿಕೆ ಮಾಡಿದಲ್ಲಿ ಶೇ 1.20 ಮತದಾರರಿದ್ದಾರೆ. ಈ ಅವಧಿಯಲ್ಲಿ ಹೊಸದಾಗಿ ಯುವ ಮತದಾರರಾಗಿ 43805 ಮತದಾರರು ಸೇರ್ಪಡೆಯಾಗಿದ್ದಾರೆ.

correction till November 28 Note : Allowance for addition of name in voter list ಗಮನಿಸಿ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಅಂತ ಆನ್ ಲೈನ್ ನಲ್ಲಿ ಈ ರೀತಿ ಚೆಕ್‌ ಮಾಡಿಕೊಳ್ಳಿ ತಿದ್ದುಪಡಿಗೆ ನವೆಂಬರ್ 28 ರವರೆಗೆ ಅವಕಾಶ
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.