Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಜೀವನಾಂಶ’ ಪಾವತಿಸುವಲ್ಲಿ ವಿಳಂಬವು ಮಾನವ ಘನತೆಗೆ ಮಾಡಿದ ಅವಮಾನ : ಹೈಕೋರ್ಟ್ ಮಹತ್ವದ ತೀರ್ಪು

03/07/2025 10:44 AM

SHOCKING : ಮನೆ ಕೆಲಸದನಿಂದಲೇ ತಾಯಿ,ಮಗನ ಕತ್ತು ಕೊಯ್ದು ಬರ್ಬರ ಹತ್ಯೆ.!

03/07/2025 10:36 AM

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

03/07/2025 10:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಆ.17 ರಿಂದ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

ಗಮನಿಸಿ : ಆ.17 ರಿಂದ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5713/08/2024 10:56 AM

ಬೆಂಗಳೂರು :  ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ದಿನಾಂಕ:17-08-2024 ರಿಂದ 19-08-2024 ರವರೆಗೆ (ಮೂರು ದಿನ) ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘವು ತೀರ್ಮಾನಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನ ಸಂಬಂಧ ದಿನಾಂಕ:03-06-2024ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಕ್ರೀಡಾಕೂಟವನ್ನು ಶಿವಮೊಗ್ಗ ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಸದರಿ ಕ್ರೀಡಾಕೂಟವನ್ನು ಬೆಂಗಳೂರು ನಗರದಲ್ಲಿ ದಿನಾಂಕ:17-08-2024 ರಿಂದ 19-08-2024 ರವರೆಗೆ (ಮೂರು ದಿನ) ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘವು ತೀರ್ಮಾನಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ. ಅದರಂತೆ ಸದರಿ ಕ್ರೀಡಾಕೂಟವನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಆಯೋಜಿಸಲು ಈ ಕೆಳಕಂಡಂತೆ ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು:

  1. ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ.
  1. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  1. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  1. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  1. ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಖಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  1. , ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ, ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಛೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
  1. ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾ ಕೋಟಾದಡಿ ನೇಮಕವಾದ ನೌಕರರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  1. 1 ಟ್ರ್ಯಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು.
  1. 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  1. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.
  1. ಏಕಕಾಲದಲ್ಲಿ ಸ್ಪರ್ಧೆಗಳನ್ನು ನಡೆಸಲಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧಿಗಳನ್ನು ಕಾಯುವುದಿಲ್ಲ.
  1. ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಾಗಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
  1. ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ.
  1. ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕುವುದಲ್ಲದೆ. ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಥ ಕ್ರೀಡಾಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾರಸ್ಸು ಮಾಡಲಾಗುವುದು.
  1. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗಧಿತ ಸಮಯಕ್ಕೆ ಕನಿಷ್ಠ 1.00 ಗಂಟೆ ಮುಂಚಿತವಾಗಿ ಹಾಜರಿದ್ದು, ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.
  1. ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ತಮ್ಮದೇ ಆದ ಸಲಕರಣೆಗಳನ್ನು ತರತಕ್ಕದ್ದು.
  1. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು ಇತ್ಯಾದಿಗಳಿಗೆ ಅವಕಾಶವಿಲ್ಲ.(ಫಿಲಂಟ್ಯೂನ್)
  1. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ.
  1. ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
  1. ಸರ್ಕಾರಿ ಆದೇಶ ಸಂ:ಎಫ್‌ಡಿ2/ಎಸ್‌ಆರ್‌ಎಸ್/2002, ಬೆಂಗಳೂರು, ದಿನಾಂಕ:27-11-2002ರಂತೆ ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿದೆ.
  1. ಒಬ್ಬ ಸರ್ಕಾರಿ ನೌಕರನು ಹಲವು ಕ್ರೀಡೆಗಳಲ್ಲಿ ಭಾಗವಹಿಸಲು ನೋಂದಾಯಿಸಿದ್ದರು ಸಹ ಒಂದು ಜೊತೆ ಕ್ರೀಡಾ ಸಮವಸ್ತ್ರ/ಟ್ರ್ಯಾಕ್ ಸೂಟ್ ನೀಡಲು ಕ್ರಮವಹಿಸುವುದು.
  1. ಯಾವ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿರುವುದಿಲ್ಲವೋ ಅಂತಹ ಸ್ಪರ್ಧೆಗಳಿಗೆ ಕ್ರೀಡಾಪಟುವಲ್ಲದ ನೌಕರರನ್ನು ಸೇರ್ಪಡೆಗೊಳಿಸುವ ಕ್ರಮವನ್ನು ಕೈಬಿಡುವುದು. ಒಂದು ವೇಳೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಸಹಾಯಕ ನಿರ್ದೇಶಕರು ಹಾಗೂ ನೌಕರರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂಬ ಅಂಶವನ್ನು ಸ್ಪಷ್ಟಪಡಿಸುವುದು

Note: 'State Level State Government Employees' Games' to be held from August 17: Adherence to these rules is mandatory ಗಮನಿಸಿ : ಆ.17 ರಿಂದ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ಈ ನಿಯಮಗಳ ಪಾಲನೆ ಕಡ್ಡಾಯ
Share. Facebook Twitter LinkedIn WhatsApp Email

Related Posts

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

03/07/2025 10:33 AM1 Min Read

BIG NEWS : ಬೆಂಗಳೂರಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ : ನಂದಿನಿ ಬೂತ್ ನಲ್ಲಿ ಗ್ಲಾಸ್ ಒಡೆದು ರಂಪಾಟ

03/07/2025 10:21 AM1 Min Read

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

03/07/2025 10:15 AM1 Min Read
Recent News

BIG NEWS : `ಜೀವನಾಂಶ’ ಪಾವತಿಸುವಲ್ಲಿ ವಿಳಂಬವು ಮಾನವ ಘನತೆಗೆ ಮಾಡಿದ ಅವಮಾನ : ಹೈಕೋರ್ಟ್ ಮಹತ್ವದ ತೀರ್ಪು

03/07/2025 10:44 AM

SHOCKING : ಮನೆ ಕೆಲಸದನಿಂದಲೇ ತಾಯಿ,ಮಗನ ಕತ್ತು ಕೊಯ್ದು ಬರ್ಬರ ಹತ್ಯೆ.!

03/07/2025 10:36 AM

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

03/07/2025 10:33 AM

BIG NEWS : ಬೆಂಗಳೂರಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ : ನಂದಿನಿ ಬೂತ್ ನಲ್ಲಿ ಗ್ಲಾಸ್ ಒಡೆದು ರಂಪಾಟ

03/07/2025 10:21 AM
State News
KARNATAKA

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

By kannadanewsnow0503/07/2025 10:33 AM KARNATAKA 1 Min Read

ಬೀದರ್ : ಬೀದರ್ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾವಿಗೆ ಗೂಡ್ಸ್ ವಾಹನ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರ್…

BIG NEWS : ಬೆಂಗಳೂರಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ : ನಂದಿನಿ ಬೂತ್ ನಲ್ಲಿ ಗ್ಲಾಸ್ ಒಡೆದು ರಂಪಾಟ

03/07/2025 10:21 AM

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

03/07/2025 10:15 AM

BREAKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಪ್ರಕರಣ : ಯಾದಗಿರಿ ಕಲಬುರ್ಗಿಯಲ್ಲಿ ಹಾರ್ಟ್ ಅಟ್ಯಾಕ್ ಗೆ ಇಬ್ಬರು ಸಾವು

03/07/2025 10:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.