ಮೈಸೂರು : ದಕ್ಷಿಣ ಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 15 ಜನರ ವಿರುದ್ಧ FIR ದಾಖಲಾದ ಬೆನ್ನಲ್ಲೆ, ಅರುಣ್ ಕುಮಾರ್ ಪುತ್ತಿಲ್ ಗೆ ಗಡಿಪಾರು ನೋಟಿಸ್ ನೀಡಲಾಗಿದ್ದು, ಹಾಗೂ ಕಲ್ಲಡ್ಕ ಪ್ರಭಾಕರ ಭಟ್ಟ ಅವರಿಗೂ ಕೂಡ ನೋಟಿಸ್ ನೀಡಲಾಗಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ ಎಂದು ಆಕ್ರೋಶ ಹೊರ ಹಾಕಿದರು.
ಮೈಸೂರಲ್ಲಿ ಮಾತನಾಡಿದ ಅವರು, ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂಗಳಲ್ಲಿ ಅಭದ್ರತೆ ಮತ್ತು ಆತಂಕ ಇದೆ. ಅರುಣ ಪುತ್ತಿಲ್ ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟಿಸ್ ನೀಡಿರುವುದು ತಾಲಿಬಾನಿ ಸರ್ಕಾರದ ಸ್ಥಾಪನೆಗೆ ಇಟ್ಟಿರುವ ಹೆಜ್ಜೆಯಿದು. ಪ್ರವೀಣ್ ನೆಟ್ಟರು ಹತ್ಯೆ ಆಗದಿದ್ದರೆ ಈ ಸರಣಿ ಹತ್ಯೆ ನಡೆಯುತ್ತಿದ್ವ? ಎಂದು ಕಿಡಿ ಕಾರಿದರು.
ಆಗ ಆರೋಪಿಗಳಿಗೆ ಸರಿಯಾದ ಪಾಠ ಕಲಿಸಿದ್ದರೆ, ಈ ಹತ್ಯೆಗಳು ಆಗುತ್ತಿರಲಿಲ್ಲ. ಪಿ ಎಫ್ ಐ ಕೆಎಫ್ಡಿ ಸಂಘಟನೆಯನ್ನು ಮಟ್ಟ ಹಾಕುವುದು ಬಿಟ್ಟು ಹಿಂದೂ ನಾಯಕರಿಗೆ ನೋಟಿಸ್ ಕೊಟ್ಟಿರುವುದು ಎಷ್ಟು ಸರಿ? ಹಿಂದುಗಳ ಧ್ವನಿ ಅಡಗಿಸಲು ಮಾಡಿರುವ ಕೆಲಸ ಇದು ಎಂದು ಮೈಸೂರಿನಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.