Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ `ಶಿಕ್ಷಕರ ವರ್ಗಾವಣೆ ಕಾಯ್ದೆಗೆ’ ಮಹತ್ವದ ತಿದ್ದುಪಡಿ : ವರ್ಗಾವಣೆಗೆ 12 ವರ್ಷಗಳ ಸೇವೆ ಕಡ್ಡಾಯ !

25/03/2026 7:56 AM

​’ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

25/03/2026 7:51 AM

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

25/03/2026 7:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಋತುಚಕ್ರ ರಜೆ’ಗೆ ಅಧಿಕೃತ ಆದೇಶ ಪ್ರಕಟ: ಫಲನೀಡಿದ ‘ಸಚಿವ ಸಂತೋಷ್ ಲಾಡ್’ ಪ್ರಯತ್ನ 
KARNATAKA

‘ಋತುಚಕ್ರ ರಜೆ’ಗೆ ಅಧಿಕೃತ ಆದೇಶ ಪ್ರಕಟ: ಫಲನೀಡಿದ ‘ಸಚಿವ ಸಂತೋಷ್ ಲಾಡ್’ ಪ್ರಯತ್ನ 

By kannadanewsnow0913/11/2025 6:51 PM

ಬೆಂಗಳೂರು: ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಾಯಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಋತುಚಕ್ರ  ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವ ಕಲ್ಪಿಸುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಪ್ರಕಟಸಿದೆ. 

ಋತುಚಕ್ರ ರಜೆ ನೀತಿ – 2025ಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿತ್ತು. ಮಹಿಳೆಯೆರಿಗೆ ಅನುಕೂಲವಾಗುವ ಹಾಗೂ ಅವರ ಸಬಲೀಕರಣಕ್ಕೆ ಬೆಂಬಲ ನೀಡುವ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಇದೀಗ ಇವುಗಳ ಜೊತೆ ಋತುಚಕ್ರ ರಜೆ ಮತ್ತೊಂದು ಸೇರ್ಪಡೆಯಾಗಲಿದೆ.

ಹಿನ್ನೆಲೆ:

ಈ ಹಿಂದೆ ಕಾರ್ಮಿಕ ಇಲಾಖೆಯು ಮಾಸಿಕ ಋತುಸ್ರಾವದ ರಜೆ ನೀತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಆದರೆ ಈ ನೀತಿಯನ್ನು ಸಮಗ್ರವಾಗಿ ಜಾರಿಗೆ ತರಬೇಕು ಎಂದು ಬಯಸಿದ್ದ ಸಚಿವರು, ನಿರಂತರ ಸಭೆ, ಚರ್ಚೆ ಮತ್ತು ಸಂವಾದಗಳಿಗೆ ವೇದಿಕೆ ಒದಗಿಸಿದ್ದರು. ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಸಂಬಂಧ. ಸರ್ಕಾರ  ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ನಾ ಎಸ್ ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿ ನೇಮಿಸಿತ್ತು. ಈ ಸಮಿತಿ ಕೂಡ ವರದಿ ಸಲ್ಲಿಸಿತ್ತು. ಋತುಚಕ್ರದ ಆರೋಗ್ಯವನ್ನು ಮಹಿಳೆಯರ ಹಕ್ಕುಗಳು ಮತ್ತು ಕೆಲಸದ ಸ್ಥಳದ ಕಲ್ಯಾಣದ ಅಂಶವೆಂದು ಪರಿಗಣಿಸಿ, ಅಂತಿಮವಾಗಿ ಸಚಿವ ಸಂಪುಟದ ಅನುಮೋದನೆ ನೀಡಿತ್ತು.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪರಿಶ್ರಮ 

ಋತುಚಕ್ರದ ರಜೆ ಸೌಲಭ್ಯ ಜಾರಿಯಾಗುವುದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಪರಿಶ್ರಮ ಸಾಕಷ್ಟು ಇದೆ‌. ಮಹಿಳಾ ಕಾರ್ಮಿಕರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ  ಸಚಿವ ಸಂತೋಷ್ ಲಾಡ್ ಅವರು ರೂಪಿಸುತ್ತಾ ಬಂದಿದ್ದಾರೆ. ಇದರ ಜೊತೆಗೆ ದೇಶದ ಬೇರೆ ಬೇರೆ ರಾಜ್ಯ ಮತ್ತು ದೇಶಗಳಲ್ಲಿ ಋತುಚಕ್ರ ರಜೆ ನೀತಿಗಳನ್ನೆಲ್ಲ ಕೂಲಂಕಷವಾಗಿ ಅಧ್ಯಯನದ ನಂತರ ರಾಜ್ಯದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದರು.

ಲಾಡ್‌ ಅವರಿಗೆ ಮಹಿಳಾ ಉದ್ಯೋಗಿಗಳ ಧನ್ಯವಾದ 

ಋತುಸ್ರಾವದ ರಜೆಗೆ ಸಚಿವ ಸಂಪುಟ ಅನುಮೋದನೆ ನೀಡಿದಾಗಲೇ ಸಚಿವ ಸಂತೋಷ್ ಲಾಡ್‌ ಅವರಿಗೆ ಮಹಿಳಾ ಉದ್ಯೋಗಿಗಳು ಧನ್ಯವಾದಗಳನ್ನು ತಿಳಿಸಿದ್ದರು. ಕಾರ್ಮಿಕ ಇಲಾಖೆಯ ಈ ವಿಶಿಷ್ಟ ಕೊಡುಗೆ ಬಗ್ಗೆ ರಾಜ್ಯದ ಎಲ್ಲ ಮಹಿಳಾ ವರ್ಗವು ಪ್ರಶಂಸೆ ವ್ಯಕ್ತಪಡಿಸಿತ್ತು. ಮಹಿಳಾ ಉದ್ಯೋಗಿಗಳ ಪಾಲಿನ ಬಹುದಿನದ ಅತ್ಯಗತ್ಯ ಬೇಡಿಕೆಗೆ ಸರ್ಕಾರ, ಮಹಿಳೆಯರ ಆರೋಗ್ಯ ಕುರಿತ ಕಾಳಜಿ ಹಾಗೂ ಸಬಲೀಕರಣದ ನಿಟ್ಟಿನಲ್ಲಿ ಇನ್ನೊಂದು ಮಹತ್ವದ ಮತ್ತು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಕೇವಲ ಮಹಿಳಾ ಉದ್ಯೋಗಿಗಳಿಗೆ ಅಲ್ಲದೆ ಅವರ ಕುಟುಂಬದ ಸದಸ್ಯರಲ್ಲೂ ಸಂತೋಷ ಮೂಡಿಸಿದೆ.

ರಾಜ್ಯದ ಮಹಿಳಾ ಉದ್ಯೋಗಿಗಳ ಆರೋಗ್ಯ ರಕ್ಷಣೆಯ ಜೊತೆಗೆ ಅವರ ಮನೋಸ್ಥೈರ್ಯವನ್ನು ಬಲಗೊಳಿಸುವ ಉದ್ದೇಶದಿಂದ ಋತುಚಕ್ರ ರಜೆ ನೀತಿಯನ್ನು ಜಾರಿಗೊಳಿಸಿ, ಆದೇಶ ಹೊರಡಿಸಲಾಗಿದೆ. ಈ‌ ಮೂಲಕ ಮಹಿಳಾ ಸಬಲೀಕರಣದ ಹಾದಿಯಲ್ಲಿ ನಮ್ಮ ಸರ್ಕಾರ ಇಡೀ ದೇಶಕ್ಕೇ ಮಾದರಿಯಾದ ಹೆಜ್ಜೆ ಇರಿಸಿದಂತಾಗಿದೆ. ಈ ಮಹತ್ವದ ಕ್ರಮ ಜಾರಿಯಾಗುವಲ್ಲಿ ಬೆಂಬಲ ನೀಡಿದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ,  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹಾಗೂ ಸಚಿವ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ `ಶಿಕ್ಷಕರ ವರ್ಗಾವಣೆ ಕಾಯ್ದೆಗೆ’ ಮಹತ್ವದ ತಿದ್ದುಪಡಿ : ವರ್ಗಾವಣೆಗೆ 12 ವರ್ಷಗಳ ಸೇವೆ ಕಡ್ಡಾಯ !

25/03/2026 7:56 AM2 Mins Read

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

25/03/2026 7:44 AM1 Min Read

BREAKING : ರಾಜ್ಯದ ವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ : ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ !

25/03/2026 7:32 AM1 Min Read
Recent News

BIG NEWS : ರಾಜ್ಯ ಸರ್ಕಾರದಿಂದ `ಶಿಕ್ಷಕರ ವರ್ಗಾವಣೆ ಕಾಯ್ದೆಗೆ’ ಮಹತ್ವದ ತಿದ್ದುಪಡಿ : ವರ್ಗಾವಣೆಗೆ 12 ವರ್ಷಗಳ ಸೇವೆ ಕಡ್ಡಾಯ !

25/03/2026 7:56 AM

​’ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

25/03/2026 7:51 AM

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

25/03/2026 7:44 AM

ಲೋಕಸಭೆಯಲ್ಲಿ ತೃತೀಯಲಿಂಗಿಗಳ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆ ಅಂಗೀಕಾರ

25/03/2026 7:33 AM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ `ಶಿಕ್ಷಕರ ವರ್ಗಾವಣೆ ಕಾಯ್ದೆಗೆ’ ಮಹತ್ವದ ತಿದ್ದುಪಡಿ : ವರ್ಗಾವಣೆಗೆ 12 ವರ್ಷಗಳ ಸೇವೆ ಕಡ್ಡಾಯ !

By kannadanewsnow5725/03/2026 7:56 AM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರವು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಶಿಸ್ತು ತರುವ ನಿಟ್ಟಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ…

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

25/03/2026 7:44 AM

BREAKING : ರಾಜ್ಯದ ವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ : ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ !

25/03/2026 7:32 AM

ಮಹಿಳೆಯರೇ ಗಮನಿಸಿ : ಯಾವ ಚರ್ಮದ ಬಣ್ಣಕ್ಕೆ ಯಾವ ಲಿಪ್‌ಸ್ಟಿಕ್ ಸೂಕ್ತ? ಇಲ್ಲಿದೆ ಟಿಪ್ಸ್

25/03/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.