Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

25/06/2025 7:05 PM

ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್

25/06/2025 6:59 PM

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್
KARNATAKA

ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್

By kannadanewsnow0925/06/2025 6:59 PM

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವುದರ ಭಾಗವಾಗಿ ಪ್ರಸಕ್ತ ವರ್ಷದ ಸಿಇಟಿ ಅಭ್ಯರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಜೂನ್ 28ರಂದು ರಾಜ್ಯದ ಎಲ್ಲ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ‘ಯಜಿಸಿಇಟಿ-2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, 8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ 9 ಜಿಲ್ಲೆಗಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೋಷಕರು/ವಿದ್ಯಾರ್ಥಿಗಳ ಎಲ್ಲ ರೀತಿಯ ಅನುಮಾನಗಳಿಗೆ ಪರಿಹಾರ ಲಭ್ಯವಾಗಲಿದೆ. ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಚಿಕ್ಕಮಗಳೂರು, ಹುಬ್ಬಳ್ಳಿ (ಧಾರವಾಡ ಜಿಲ್ಲೆ), ಕೆ.ಜಿ.ಎಫ್ (ಕೋಲಾರ), ಮಂಗಳೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ, ಸುರಪುರ (ಯಾದಗಿರಿ)ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಈ ಮಂಥನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ಕೌನ್ಸೆಲಿಂಗ್ ಹೇಗೆ ನಡೆಯುತ್ತದೆ? ಕಾಲೇಜು ಆಯ್ಕೆ ಹೇಗೆ? ಆಪ್ಷನ್ ಎಂಟ್ರಿ ಯಾವ ರೀತಿ ಮಾಡಬೇಕು?- ಇಂತಹ ಪದೇಪದೇ ಕೇಳಿಬರುವ ಪ್ರಶ್ನೆಗಳಿಗೆ ಈ ಕಾರ್ಯಕ್ರಮದಲ್ಲಿ ಉತ್ತರ ದೊರೆಯಲಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಮುಖ್ಯವಾಗಿ, ಕೆಲವರು ಸೀಟು ಹಂಚಿಕೆ ಪ್ರಕ್ರಿಯೆ ಕಬ್ಬಿಣದ ಕಡಲೆ ಎಂದು ಭಾವಿಸಿದ್ದಾರೆ. ಇದನ್ನೇ ಕೆಲವರು ತಮ್ಮ ಬಂಡವಾಳವನ್ನಾಗಿ ಮಾಡಿಕೊಂಡು ಪೋಷಕರು/ ವಿದ್ಯಾರ್ಥಿಗಳನ್ನು ಸುಲಿಗೆ ಮಾಡಿರುವ ಪ್ರಕರಣಗಳೂ ನಡೆದಿವೆ. ಅಲ್ಲದೆ, ಅಂತಹ ಮೋಸದ ಜಾಲಗಳು ಈಗಲೂ ಸಕ್ರಿಯವಾಗಿರಬಹುದು. ಇದನ್ನು ತಪ್ಪಿಸುವ ದಿಸೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿ ಸಮುದಾಯದಕ್ಕೆ ಸ್ಪಷ್ಟ ಹಾಗೂ ನಿಖರ ಮಾಹಿತಿಯನ್ನು ಕಾರ್ಯಕ್ರಮದ ಮೂಲಕ ನೀಡಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರು ತಮಗೆ ಹತ್ತಿರದಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಸುಧಾಕರ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಮನಮುಟ್ಟುವಂತೆ ವಿವರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ನಮ್ಮ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಶೈಕ್ಷಣಿಕ ಪ್ರಗತಿ ಬಗ್ಗೆಯೂ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಮಾಹಿತಿ ನೀಡಲಿದ್ದಾರೆ. ಪಾರದರ್ಶಕತೆಗೆ ಒತ್ತು ನೀಡುತ್ತಾ ಕಾಲಕಾಲಕ್ಕೆ ಹೊಸ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುತ್ತಾ ಸಾಗಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಯುಜಿಸಿಇಟಿ ಸೀಟು ಹಂಚಿಕೆ ಮಂಥನ ಉಪಕ್ರಮವು ಒಟ್ಟಾರೆ ಸಿಇಟಿ ಪ್ರಕ್ರಿಯೆ ಇನ್ನಷ್ಟು ಸುಗಮಗೊಳಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

Share. Facebook Twitter LinkedIn WhatsApp Email

Related Posts

‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

25/06/2025 7:05 PM2 Mins Read

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM1 Min Read

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM1 Min Read
Recent News

‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

25/06/2025 7:05 PM

ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್

25/06/2025 6:59 PM

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM

BREAKING : ಕೋಲ್ಕತ್ತಾದ ಎರಡು ಪ್ರಸಿದ್ಧ ಶಾಲೆಗಳಿಗೆ ಬಾಂಬ್ ಬೆದರಿಕೆ ; ಸಿಬ್ಬಂದಿ, ಪೋಷಕರಲ್ಲಿ ಆತಂಕ

25/06/2025 6:33 PM
State News
KARNATAKA

‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

By kannadanewsnow0925/06/2025 7:05 PM KARNATAKA 2 Mins Read

ಬೆಂಗಳೂರು: ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು…

ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್

25/06/2025 6:59 PM

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.