ಮೈಸೂರು: ಜಿಲ್ಲೆಯ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿದ್ದರು. ಮೃತ ಕುಟುಂಬಸ್ಥರನ್ನು ಭೇಟಿಯಾದಂತ ಸಿಎಂ ಸಿದ್ಧರಾಮಯ್ಯ ಅವರು, ಸಾಂತ್ವಾನ ಹೇಳಿದರು. ಅಲ್ಲದೇ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ತಾಲ್ಲೂಕಿನ ಜಯಪುರದ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿನೀಟಿ ಕಲುಷಿತ ನೀರು ಕುಡಿದು ಮೃತಪಟ್ಟ ಕನಕರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಮೃತ ಕಾಂತರಾಜು ಅವರ ಸಹೋದರ ರವಿಗೆ ಕೆಲಸ ಕೊಡಿಸುವ ಭರವಸೆ ನೀಡಿದರು.
Update Breaking: ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಆರು ಮಂದಿ ಸಾವು, 25 ಜನರಿಗೆ ಗಾಯ
ರಾಜ್ಯದ ಜನ ಶೀಘ್ರದಲ್ಲಿಯೇ ‘CD ಶಿವು ಎಲ್ಲಿದ್ದಿಯಪ್ಪ?’ ಎಂದು ಕೇಳುವ ದಿನವೂ ದೂರವಿಲ್ಲ: JDS