Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

28/08/2025 8:25 AM

Karnataka Rains : ಇಂದಿನಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

28/08/2025 8:20 AM

ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನ್ಸೂನ್ ಅಬ್ಬರ: ಸಾವಿನ ಸಂಖ್ಯೆ 41 ಕ್ಕೆ ಏರಿಕೆ | Heavy rains

28/08/2025 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಆಪರೇಷನ್ ಕಮಲದ’ ಮೂಲದಾತರಿಂದ ‘ಒಂದು ದೇಶ ಒಂದು ಚುನಾವಣೆ’ ಹಾಸ್ಯಸ್ಪದ : ಡಿಸಿಎಂ ಡಿಕೆ ಶಿವಕುಮಾರ್
KARNATAKA

‘ಆಪರೇಷನ್ ಕಮಲದ’ ಮೂಲದಾತರಿಂದ ‘ಒಂದು ದೇಶ ಒಂದು ಚುನಾವಣೆ’ ಹಾಸ್ಯಸ್ಪದ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0518/09/2024 6:52 PM

ಬೆಂಗಳೂರು : ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅವರು “ಆಪರೇಷನ್ ಕಮಲಕ್ಕೆ ಮೂಲದಾತರುಗಳಾದ ಬಿಜೆಪಿಯವರೇ ಒಂದು ರಾಷ್ಟ, ಒಂದು ಚುನಾವಣೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕುಮಾರಪಾರ್ಕ್ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, “ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಾದೇಶಿಕ ಪಕ್ಷಗಳು ಬೆಳೆಯುತ್ತಿರುವುದನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ಈ ಹುನ್ನಾರ ಮಾಡಿದೆ ಎಂದರು.

ದೇಶದಲ್ಲಿ ಎಲ್ಲಾ ಪಕ್ಷಗಳಿಗೂ ಅವಕಾಶ ಸಿಗಬೇಕು. ಈ ಹಿಂದೆಯೂ ಒಂದು ರಾಷ್ಡ್ರ, ಒಂದು ಚುನಾವಣೆ ವ್ಯವಸ್ಥೆ ನಮ್ಮಲ್ಲಿತ್ತು. ನಮ್ಮ ರಾಜ್ಯದಲ್ಲಿಯೂ ಒಟ್ಟಿಗೆ ಚುನಾವಣೆ ಮಾಡಲಾಯಿತು. ಆನಂತರ ಸಾಧ್ಯವಾಯಿಯೇ? ಆಗಲಿಲ್ಲ. ಏಕೆಂದರೆ ಒಂದಷ್ಟು ಸರ್ಕಾರಗಳು ಕ್ಯಾಬಿನೆಟ್ ಅಲ್ಲಿ ಆರು ಹಾಗೂ ಮೂರು ತಿಂಗಳು ಮುಂಚಿತವಾಗಿ ಚುನಾವಣೆಗೆ ಹೋಗುತ್ತೇವೆ ಎಂದರು, ಒಂದಷ್ಟು ರಾಜ್ಯಗಳಲ್ಲಿ ಸರ್ಕಾರಗಳೇ ವಿಸರ್ಜನೆಗೊಂಡವು. ಹೀಗಿರುವಾಗ ಈ ವ್ಯವಸ್ಥೆಯನ್ನು ಜಾರಿಗೆ ತರಲು ಹೇಗೆ ಸಾಧ್ಯ? ಎಂದರು.

ಬಿಜೆಪಿ ಮೊದಲು ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಲಿ

ಬಿಜೆಪಿ ಈ ಪ್ರಯತ್ನ ಮಾಡುತ್ತಿರುವುದು ಸರಿಯಿಲ್ಲ. ಅಲ್ಲದೇ ಮೂರನೇ ಒಂದರಷ್ಟು ಬಹುಮತವು ಅವರಿಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಒಮ್ಮತದ ಅಭಿಪ್ರಾಯ ಕೇಳಲಿ. ಇದರ ಹೊರತು ಇಂತಹ ಪ್ರಸ್ತಾವನೆಗಳು ವ್ಯರ್ಥ. ಮೊದಲು ಮಹಿಳಾ ಮೀಸಲಾತಿ ಬಗ್ಗೆ ಕ್ರಮ ತೆಗೆದುಕೊಳ್ಳಲಿ ಎಂದು ತಿಳಿಸಿದರು.

ಕ್ಷೇತ್ರ ವಿಂಗಡಣೆಗೆ ಕ್ರಮ ತೆಗೆದುಕೊಳ್ಳಲಿ. ಒಂದು ಚುನಾವಣೆ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಅರ್ಥಪೂರ್ಣವಾದ ಮಾತಿಗೆ ನಮ್ಮ ಒಮ್ಮತದ ಒಪ್ಪಿಗೆಯಿದೆ ಎಂದರು.

ಗುರುವಾರ ಒಕ್ಕಲಿಗ ನಾಯಕರ ನಿಯೋಗ ಭೇಟಿಗೆ ಸಮಯ

ಮುನಿರತ್ನ ವಿಚಾರವಾಗಿ ಒಕ್ಕಲಿಗ ನಾಯಕರ ನಿಯೋಗದ ಭೇಟಿ ಬಗ್ಗೆ ಕೇಳಿದಾಗ ಒಕ್ಕಲಿಗ ನಾಯಕರ ನಿಯೋಗದ ಭೇಟಿಗೆ ಗುರುವಾರ (ಸೆ.18) ಸಂಜೆ ಸಮಯ ನೀಡಿದ್ದೇನೆ. ಈ ವಿಚಾರವಾಗಿ ಅಶೋಕ್ ಅವರ ಹಾಗೂ ಬೇರೆಯವರ ನುಡಿಮುತ್ತುಗಳನ್ನು ತಾವೆಲ್ಲಾ ಗಮನಿಸಿದ್ದೀರಿ. ಇದರ ಬಗ್ಗೆ ಆನಂತರ ಮಾತನಾಡುತ್ತೇನೆ ಎಂದರು.

ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕರು

ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ “ದೇಶದ ಪ್ರಧಾನಿಗಳಾಗಿದ್ದ ದೇವೇಗೌಡರನ್ನು ಸರ್ವೋಚ್ಚ ನಾಯಕರಲ್ಲ ಎಂದು ನಾವು ಹೇಳಿಲ್ಲ. ಅವರನ್ನು ನಾವು ನಾಯಕರಲ್ಲ ಎಂದು ಹೇಳಲು ಸಾಧ್ಯವೇ? ದೇವೇಗೌಡರನ್ನು ದೇಶದ ಪ್ರಧಾನಿಗಳನ್ನಾಗಿ ಮಾಡಿದ್ದೇ ಕಾಂಗ್ರೆಸ್ ಪಕ್ಷ. ಬಿಜೆಪಿ ಅವರಿಗೆ ಸ್ಥಾನ ನೀಡಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ನೀಡದೇ ಇದ್ದಾಗ ಯಡಿಯೂರಪ್ಪ ಅವರು, ಆರ್. ಅಶೋಕ್ ಅವರು ಏನೇನು ಮಾತನಾಡಿದ್ದರು? ಸುಮ್ಮನೆ ಸಮಯಕ್ಕೆ ತಕ್ಕಂತೆ ಮಾತನಾಡುವುದಲ್ಲ ಎಂದರು.

ಡಿ.ಕೆ.ಸಹೋದರರು ಮುನಿರತ್ನ ವಿರುದ್ದ ಪಿತೂರಿ ಮಾಡುತ್ತಿದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ ಹಾಗಾದರೆ ನಾವು ಹೇಳಿಕ್ಕೊಟ್ಟಂತೆ ಅವರು (ಮುನಿರತ್ನ) ಡೈಲಾಗ್ ಹೊಡೆಯುತ್ತಿದ್ದಾರಾ? ಅವರ ಮಾತುಗಳನ್ನು ನಾನು ನೋಡಿದೆ, ಸ್ವಾಮೀಜಿಗಳು ನೋಡಿದ್ದಾರಂತೆ. ಹೀಗೆ ಮಾತನಾಡು ಎಂದು ನಾವು ಅವರಿಗೆ ಹೇಳಿಕೊಟ್ಟಿದ್ದೇವೆಯೇ? ಇಲ್ಲಿ ಡೈಲಾಗ್ ನಿರ್ದೇಶಕರು, ನಿರ್ಮಾಪಕರು ಯಾರಿದ್ದಾರೆ? ಎಲ್ಲರೂ ಅವರ ಜೊತೆಯಲ್ಲೇ ಇದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

Karnataka Rains : ಇಂದಿನಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

28/08/2025 8:20 AM1 Min Read

ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಅಲರ್ಟ್ : ಮನೆಗೆ ಕನ್ನ ಹಾಕಿದ ಕಳ್ಳರನ್ನು ಅಮೇರಿಕದಿಂದಲೇ ಓಡಿಸಿದ ಪುತ್ರಿ!

28/08/2025 7:55 AM1 Min Read

ನಿನ್ನೆ ಅರಿಶಿನ ಶಾಸ್ತ್ರ, ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಆಂಕರ್ ಅನುಶ್ರೀ-ರೋಷನ್ ಅದ್ದೂರಿ ಮದುವೆ

28/08/2025 7:27 AM1 Min Read
Recent News

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

28/08/2025 8:25 AM

Karnataka Rains : ಇಂದಿನಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

28/08/2025 8:20 AM

ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನ್ಸೂನ್ ಅಬ್ಬರ: ಸಾವಿನ ಸಂಖ್ಯೆ 41 ಕ್ಕೆ ಏರಿಕೆ | Heavy rains

28/08/2025 8:20 AM

Shocking: ಮಲಮಗಳ ಮೇಲೆ ಹಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ, ತಾಯಿ ಮೌನ, ಇಬ್ಬರಿಗೂ ಶಿಕ್ಷೆ

28/08/2025 8:04 AM
State News
KARNATAKA

Karnataka Rains : ಇಂದಿನಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

By kannadanewsnow0528/08/2025 8:20 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ…

ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಅಲರ್ಟ್ : ಮನೆಗೆ ಕನ್ನ ಹಾಕಿದ ಕಳ್ಳರನ್ನು ಅಮೇರಿಕದಿಂದಲೇ ಓಡಿಸಿದ ಪುತ್ರಿ!

28/08/2025 7:55 AM

ನಿನ್ನೆ ಅರಿಶಿನ ಶಾಸ್ತ್ರ, ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಆಂಕರ್ ಅನುಶ್ರೀ-ರೋಷನ್ ಅದ್ದೂರಿ ಮದುವೆ

28/08/2025 7:27 AM

ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿಕೆ

28/08/2025 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.