Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ವಜಾ

27/01/2026 6:44 AM

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
KARNATAKA

BIG NEWS: ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

By kannadanewsnow0926/06/2024 3:47 PM

ಬೆಂಗಳೂರು: “ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.

ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು

ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ ಎಂದರು.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗು ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ” ಎಂದು ತಿಳಿಸಿದರು.

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ” ಎಂದು ತಿಳಿಸಿದರು.

ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ

BREAKING: ಹೊಳೆನರಸೀಪುರ ಠಾಣೆ ಮೊದಲ ಕೇಸ್: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ಕೋರ್ಟ್ ವಜಾ | Prajwal Revanna

Share. Facebook Twitter LinkedIn WhatsApp Email

Related Posts

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM1 Min Read

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM1 Min Read

ವಾಹನ ಸವಾರರೇ ಎಚ್ಚರ : 5 ಸಲ ಸಂಚಾರ ಉಲ್ಲಂಘನೆ ಮಾಡಿದ್ರೆ `DL’ ರದ್ದು.!

27/01/2026 6:24 AM3 Mins Read
Recent News

BREAKING: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ವಜಾ

27/01/2026 6:44 AM

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM

ವಾಹನ ಸವಾರರೇ ಎಚ್ಚರ : 5 ಸಲ ಸಂಚಾರ ಉಲ್ಲಂಘನೆ ಮಾಡಿದ್ರೆ `DL’ ರದ್ದು.!

27/01/2026 6:24 AM
State News
KARNATAKA

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

By kannadanewsnow0927/01/2026 6:41 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ…

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM

ವಾಹನ ಸವಾರರೇ ಎಚ್ಚರ : 5 ಸಲ ಸಂಚಾರ ಉಲ್ಲಂಘನೆ ಮಾಡಿದ್ರೆ `DL’ ರದ್ದು.!

27/01/2026 6:24 AM

BIG NEWS : ರಾಜ್ಯದ ಅನಧಿಕೃತ ಬಡಾವಣೆಗಳಲ್ಲಿ ರಚಿಸಿರುವ ಬಿ-ಖಾತಾ ಕಟ್ಟಡ-ಅಪಾರ್ಟ್ ಮೆಂಟ್ ಗಳಿಗೆ `ಎ-ಖಾತಾ’ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

27/01/2026 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.