Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 1.31 ಕೋಟಿ ಮಹಿಳೆಯರ ಖಾತೆಗೆ ತಲಾ 5000 ರೂ. ಜಮಾ : ಸರ್ಕಾರದಿಂದ ಬಿಗ್ ಗಿಫ್ಟ್ !

13/02/2026 10:52 AM

SHOCKING : ಭಾರತದಲ್ಲಿ `ಬೊಜ್ಜು ಪ್ರಮಾಣ’ ಹೆಚ್ಚಾಗಲಿದೆ : ದೆಹಲಿ ಏಮ್ಸ್ ಅಧ್ಯಯನ

13/02/2026 10:46 AM

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಮದ್ದೂರಿನಲ್ಲಿ ಆಪರೇಷನ್ ಹಸ್ತ ; ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಯುವ ಮುಖಂಡರು
KARNATAKA

ಮಂಡ್ಯದ ಮದ್ದೂರಿನಲ್ಲಿ ಆಪರೇಷನ್ ಹಸ್ತ ; ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಯುವ ಮುಖಂಡರು

By kannadanewsnow0919/01/2026 6:00 PM

ಮಂಡ್ಯ :- ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಅನ್ಯಪಕ್ಷದ ಮುಖಂಡರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಮದ್ದೂರು ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು, ಬೂದಗುಪ್ಪೆ, ಚುಂಚಗಳ್ಳಿ, ಆಲೂರು ದೊಡ್ಡಿ, ನೀಲಕಂಠನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಯುವ ಮುಖಂಡರು ಆಲೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಉದಯ್ ಶಂಕರ್ ಅವರ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಭಾನುವಾರ ಮಾತನಾಡಿದರು.

ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯುವ ಪಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಅಭಿವೃದ್ಧಿ ಮಾಡಲು ಮತ್ತಷ್ಟು ಉತ್ಸಾಹ ನೀಡಿದೆ. ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮತ ಕೊಟ್ಟು ನನಗೆ ಆಶೀರ್ವಾದ ಮಾಡಿದ್ದಿರಿ. ನಿಮ್ಮ ನಂಬಿಕೆಗೆ ನಾನು ದ್ರೋಹ ಮಾಡಲ್ಲ. ನಿರೀಕ್ಷೆಗೂ ಮೀರಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಗ್ರಾಮಗಳಲ್ಲಿ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ನೀವು ನನಗೆ ಆಶೀರ್ವಾದ ಮಾಡಿರೋದು ಗ್ರಾಮಗಳ ಅಭಿವೃದ್ಧಿ ಮಾಡುವುದಕ್ಕೆ ಅದು ಬಿಟ್ಟು ರಾಜಕೀಯ ಬೆರೆಸಿ ಗುಂಪುಗಾರಿಕೆ ಮಾಡುವ ವ್ಯಕ್ತಿ ನಾನಲ್ಲ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಉದಯ್ ಶಂಕರ್ ಮಾತನಾಡಿ, ಆಲೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆಯೇ ಹೊರತು ಯಾವುದೇ ವೈಯಕ್ತಿಕ ಆಮೀಷಕ್ಕೆ ಒಳಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಯುವ ಮುಖಂಡ ಮಧುಸೂದನ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಕೇವಲ ಎರಡುವರೇ ವರ್ಷಗಳಲ್ಲಿ 1800 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರ ದೂರದೃಷ್ಟಿ, ಅಭಿವೃದ್ಧಿಗಾಗಿ ಅವರ ಕೈ ಬಲ ಪಡಿಸಲು ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಲೂರು ಗ್ರಾಮದ ಶಿವಣ್ಣ, ನಟರಾಜು, ವಿವೇಕ್, ಶಿವಲಿಂಗಣ್ಣ, ಜಗ್ಗಿ, ಉಮೇಶ್, ಅರಕೇಶ್, ಬೀರೇಶ್, ಚುಂಚಗಳ್ಳಿ ಗ್ರಾಮದ ಮಧು, ಶಿವಣ್ಣ, ಬೂದುಗುಪ್ಪೆ ಗ್ರಾಮದ ನಂದೀಶ್, ಮಹದೇವು, ವಿಜಿ, ರಾಜಣ್ಣ ಸೇರಿದಂತೆ ಹಲವಾರು ಮುಖಂಡರು ಜೆಡಿಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ನಗರಕೆರೆ ಸಂದೀಪ್ ಮುಖಂಡರಾದ ಉಮೇಶ್, ಕುಮಾರ್ ಇತರರಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM1 Min Read

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM2 Mins Read

SHOCKING : ತುಮಕೂರಲ್ಲಿ ಶಿಕ್ಷಕರ ನಿರ್ಲಕ್ಷಕ್ಕೆ 1ನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳು ಕಟ್!

13/02/2026 10:30 AM1 Min Read
Recent News

BREAKING : 1.31 ಕೋಟಿ ಮಹಿಳೆಯರ ಖಾತೆಗೆ ತಲಾ 5000 ರೂ. ಜಮಾ : ಸರ್ಕಾರದಿಂದ ಬಿಗ್ ಗಿಫ್ಟ್ !

13/02/2026 10:52 AM

SHOCKING : ಭಾರತದಲ್ಲಿ `ಬೊಜ್ಜು ಪ್ರಮಾಣ’ ಹೆಚ್ಚಾಗಲಿದೆ : ದೆಹಲಿ ಏಮ್ಸ್ ಅಧ್ಯಯನ

13/02/2026 10:46 AM

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM
State News
KARNATAKA

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

By kannadanewsnow0513/02/2026 10:33 AM KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಬೆಳ್ಳಂ ಬೆಳಗ್ಗೆ ಕೊಟ್ಟಿಗೆಗೆ ನುಗ್ಗಿ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ.…

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM

SHOCKING : ತುಮಕೂರಲ್ಲಿ ಶಿಕ್ಷಕರ ನಿರ್ಲಕ್ಷಕ್ಕೆ 1ನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳು ಕಟ್!

13/02/2026 10:30 AM

ಮೃತರ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಹಿನ್ನೆಲೆ : ಹಾಸನದಲ್ಲಿ 2 ಸರ್ಕಾರಿ ಬಸ್ ಜಪ್ತಿ ಮಾಡಿದ ಕೋರ್ಟ್!

13/02/2026 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.