Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ವಯಾಗ್ರ’ ಬಳಸುವ ಮುನ್ನ ಎಚ್ಚರ: ಯಾರಿಗೆ ಇದು ವರದಾನ? ಯಾರಿಗೆ ಪ್ರಾಣಾಪಾಯ?

15/03/2026 8:56 AM

ಇಸ್ರೇಲ್ ಪ್ರಧಾನಿ ನೆತನ್ಯಾಹು ನಿಧನ ವದಂತಿ: ಪುತ್ರ ಯಾಯರ್ ಪೋಸ್ಟ್ ಮಾಡದಿರುವುದು ಅನುಮಾನಕ್ಕೆ ಕಾರಣವಾಯಿತೇ?

15/03/2026 8:49 AM

ಯುದ್ಧದ ಕಾರ್ಮೋಡ: ಏಪ್ರಿಲ್ ತಿಂಗಳ ಅಂತರಾಷ್ಟ್ರೀಯ ಪ್ರವಾಸ ಬುಕಿಂಗ್‌ನಲ್ಲಿ ಶೇ. 50 ರಷ್ಟು ಕುಸಿತ!

15/03/2026 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ
KARNATAKA

ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

By kannadanewsnow0916/01/2025 4:17 PM

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ಕೆಪಿಎಸ್ಸಿ ಪರೀಕ್ಷೆಯಲ್ಲಾಗಿರುವ ಎಡವಟ್ಟುಗಳು, ಅದರಲ್ಲೂ ಮುಖ್ಯವಾಗಿ ಭಾಷಾಂತರದಲ್ಲಿ ಆಗಿರುವ ಲೋಪದೋಷಗಳ ದುಷ್ಪರಿಣಾಮವನ್ನು ಗ್ರಾಮೀಣ ಭಾಗದ ಯುವಕ ಯುವತಿಯರು ಎದುರಿಸಬೇಕಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕನ್ನಡ ಮಾಧ್ಯಮದಲ್ಲಿ ಶಾಲಾ, ಕಾಲೇಜು ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಗ್ರಾಮೀಣ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ. ಸರ್ಕಾರಿ ಅಧಿಕಾರಿಗಳಾಗಿ ಗ್ರಾಮೀಣ ಭಾಗದ ಜನರ ಸೇವೆ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ತಯಾರಿ ನಡೆಸಿದ ಅಭ್ಯರ್ಥಿಗಳ ಭವಿಷ್ಯ, ಕಾಂಗ್ರೆಸ್ ಸರ್ಕಾರದ ಎಡವಟ್ಟಿನಿಂದ ಕತ್ತಲೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳು ಬೇರೆ ದಾರಿ ಇಲ್ಲದೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರ ಮತ್ತೊಮ್ಮೆ ದೋಷರಹಿತವಾಗಿ ಮರುಪರೀಕ್ಷೆ ನಡೆಸಬೇಕು ಅಥವಾ ಮುಖ್ಯಪರೀಕ್ಷೆಗೆ ಹಾಲಿ ಇರುವ 1:15 ಅನುಪಾತದ ಬದಲು 1:50 ಅನುಪಾತದಲ್ಲಿ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಅಭ್ಯರ್ಥಿಗಳನ್ನು ಕರೆಸಿ ಮಾತನಾಡಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿತ್ತು. ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುತ್ತೇವೆ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಕೈ ಬಿಡುವುದಿಲ್ಲ ಎಂದು ಆಶ್ವಾಸನೆ ಕೊಟ್ಟು ಮನವೊಲಿಸಬೇಕಾಗಿತ್ತು. ಆದರೆ ಸರ್ಕಾರ ಇವ್ಯಾವುದನ್ನೂ ಮಾಡಿಲ್ಲ. ಎರಡೆರಡು ಬಾರಿ ಎಡವಟ್ಟು ಮಾಡಿದ್ದರೂ ತಪ್ಪೇ ನಡೆದಿಲ್ಲ ಎನ್ನುವ ಧೋರಣೆಯನ್ನು ಕಾಂಗ್ರೆಸ್ ಸರ್ಕಾರ ತೋರಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಣೆಗಾರಿಕೆಯ ಪ್ರಶ್ನೆ

ಒಂದು ಕಡೆ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯಾದರೆ ಮತ್ತೊಂದು ಹೊಣೆಗಾರಿಕೆಯ ಪ್ರಶ್ನೆ. ಎರಡೆರಡು ಬಾರಿ ಪರೀಕ್ಷೆ ನಡೆಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ 25 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚವಾಗಿದೆ. ಆದರೂ ಪರೀಕ್ಷೆ ದೋಷಮುಕ್ತವಾಗಿಲ್ಲವೆಂದರೆ ಇದಕ್ಕೆ ಯಾರು ಹೊಣೆ? ಇದಕ್ಕೆ ಹೊಣೆಯಾದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕಿತ್ತಲ್ಲವೇ? ಇದಕ್ಕೆ ಪ್ರಮುಖ ಕಾರಣರಾದ ಪರೀಕ್ಷಾ ನಿಯಂತ್ರಕರನ್ನು ಮುಂದುವರಿಸಲಾಗಿದೆ. ಮೊದಲ ಬಾರಿ ಎಡವಟ್ಟಾದ ನಂತರ ಅಕ್ಟೋಬರ್‌ 23 ರಂದು ಅವರಿಗಿಂತ ಹಿರಿಯರಾದ ಅಧಿಕಾರಿಯನ್ನು ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಿಸಲಾಗಿತ್ತು. ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿಲ್ಲ. ನಿನ್ನೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಸರ್ಕಾರಕ್ಕೆ ಕೆಪಿಎಸ್ಸಿ ನೇಮಕಾತಿ ಬಗ್ಗೆ ಇರುವ ಕಾಳಜಿ ಎಂದು ಆರ್‌.ಅಶೋಕ ಕಿಡಿಕಾರಿದ್ದಾರೆ.

ಒಟ್ಟು 384 ಹುದ್ದೆಗಳ ಪೈಕಿ 40 ಎಸಿ ಹುದ್ದೆ ಇದೆ. ಇದು ಇದುವರೆಗಿನ ಅತಿ ಹೆಚ್ಚು ಎಂಬ ದಾಖಲೆಯಿದೆ. ಆಡಳಿತದ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಪ್ರಕ್ರಿಯೆಯಲ್ಲಿ ಇರಬೇಕಾದ ಗಂಭೀರತೆಯಾಗಲೀ, ಜವಾಬ್ದಾರಿಯಾಗಲೀ, ಈ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿಲ್ಲ. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯ ಒಟ್ಟಾರೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ನ್ಯಾಯ ಸಮ್ಮತವಾಗಿರಬೇಕು ಮತ್ತು ಅರ್ಹರಿಗೆ ಮಾತ್ರ ಅವಕಾಶ ಸಿಗುವಂತಿರಬೇಕು ಎನ್ನುವುದು ನಮ್ಮ ಆಗ್ರಹ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

BIG NEWS: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವ ಸೂಚನೆ

2024-25ನೇ ಸಾಲಿನ ‘GDP’ ಬೆಳವಣಿಗೆ ದರ ಶೇ.6.4ಕ್ಕೆ ಏರಿಕೆ : ‘FICCI’ ಆರ್ಥಿಕ ಮುನ್ನೋಟ ಸಮೀಕ್ಷೆ

Share. Facebook Twitter LinkedIn WhatsApp Email

Related Posts

ALERT : `ವಯಾಗ್ರ’ ಬಳಸುವ ಮುನ್ನ ಎಚ್ಚರ: ಯಾರಿಗೆ ಇದು ವರದಾನ? ಯಾರಿಗೆ ಪ್ರಾಣಾಪಾಯ?

15/03/2026 8:56 AM1 Min Read

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

15/03/2026 8:38 AM1 Min Read

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM2 Mins Read
Recent News

ALERT : `ವಯಾಗ್ರ’ ಬಳಸುವ ಮುನ್ನ ಎಚ್ಚರ: ಯಾರಿಗೆ ಇದು ವರದಾನ? ಯಾರಿಗೆ ಪ್ರಾಣಾಪಾಯ?

15/03/2026 8:56 AM

ಇಸ್ರೇಲ್ ಪ್ರಧಾನಿ ನೆತನ್ಯಾಹು ನಿಧನ ವದಂತಿ: ಪುತ್ರ ಯಾಯರ್ ಪೋಸ್ಟ್ ಮಾಡದಿರುವುದು ಅನುಮಾನಕ್ಕೆ ಕಾರಣವಾಯಿತೇ?

15/03/2026 8:49 AM

ಯುದ್ಧದ ಕಾರ್ಮೋಡ: ಏಪ್ರಿಲ್ ತಿಂಗಳ ಅಂತರಾಷ್ಟ್ರೀಯ ಪ್ರವಾಸ ಬುಕಿಂಗ್‌ನಲ್ಲಿ ಶೇ. 50 ರಷ್ಟು ಕುಸಿತ!

15/03/2026 8:42 AM

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

15/03/2026 8:38 AM
State News
KARNATAKA

ALERT : `ವಯಾಗ್ರ’ ಬಳಸುವ ಮುನ್ನ ಎಚ್ಚರ: ಯಾರಿಗೆ ಇದು ವರದಾನ? ಯಾರಿಗೆ ಪ್ರಾಣಾಪಾಯ?

By kannadanewsnow5715/03/2026 8:56 AM KARNATAKA 1 Min Read

ಬೆಂಗಳೂರು: ಇಂದಿನ ಒತ್ತಡದ ಜೀವನಶೈಲಿಯಲ್ಲಿ ಲೈಂಗಿಕ ಸಮಸ್ಯೆಗಳಿಗೆ ಪರಿಹಾರವಾಗಿ ವಯಾಗ್ರ (Viagra) ಮಾತ್ರೆಗಳ ಬಳಕೆ ಹೆಚ್ಚುತ್ತಿದೆ. ಆದರೆ, ಈ ಮಾತ್ರೆಯನ್ನು…

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ

15/03/2026 8:38 AM

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.