Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಸಿವೆ ಎಣ್ಣೆ, ಕಡಲೆಕಾಯಿ ಎಣ್ಣೆ ಮತ್ತು ಸಂಸ್ಕರಿಸಿದ ಎಣ್ಣೆಯಲ್ಲಿ ಯಾವುದು ಬೆಸ್ಟ್ ? ಇಲ್ಲಿದೆ `AIIMS’ ವೈದ್ಯ ಸಲಹೆ

24/01/2026 11:54 AM

BREAKING: ಅತ್ಯಾಚಾರ ಪ್ರಕರಣ: ಕ್ರಿಕೆಟಿಗ ಯಶ್ ದಯಾಳ್‌ಗೆ ಬಿಗ್ ರಿಲೀಫ್: ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್!

24/01/2026 11:52 AM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಲವರ್ ಜೊತೆ ಸೇರಿ ಪತಿಯನ್ನು ಕೊಂದು ಡ್ರಮ್ ನಲ್ಲಿ ಶವ ಮುಚ್ಚಿಟ್ಟ ಪತ್ನಿ.!

24/01/2026 11:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ
KARNATAKA

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

By kannadanewsnow0913/01/2025 4:20 PM

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ. ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ. ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

ಬೆಂಗಳೂರು ಜನತೆ ಗಮನಕ್ಕೆ: ಜ.16ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ

Share. Facebook Twitter LinkedIn WhatsApp Email

Related Posts

ಸಾಸಿವೆ ಎಣ್ಣೆ, ಕಡಲೆಕಾಯಿ ಎಣ್ಣೆ ಮತ್ತು ಸಂಸ್ಕರಿಸಿದ ಎಣ್ಣೆಯಲ್ಲಿ ಯಾವುದು ಬೆಸ್ಟ್ ? ಇಲ್ಲಿದೆ `AIIMS’ ವೈದ್ಯ ಸಲಹೆ

24/01/2026 11:54 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸರ್ಕಾರಿ ಕಾರ್ಯಕ್ರಮ’ಗಳ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

24/01/2026 11:40 AM3 Mins Read

ಗಮನಿಸಿ : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಒಂದು ರೂಪಾಯಿ ಇಲ್ಲದಿದ್ದರೂ ಸಹ `UPI’ ಪಾವತಿ ಮಾಡಬಹುದು, ಇಲ್ಲಿದೆ ಟ್ರಿಕ್ಸ್

24/01/2026 11:33 AM2 Mins Read
Recent News

ಸಾಸಿವೆ ಎಣ್ಣೆ, ಕಡಲೆಕಾಯಿ ಎಣ್ಣೆ ಮತ್ತು ಸಂಸ್ಕರಿಸಿದ ಎಣ್ಣೆಯಲ್ಲಿ ಯಾವುದು ಬೆಸ್ಟ್ ? ಇಲ್ಲಿದೆ `AIIMS’ ವೈದ್ಯ ಸಲಹೆ

24/01/2026 11:54 AM

BREAKING: ಅತ್ಯಾಚಾರ ಪ್ರಕರಣ: ಕ್ರಿಕೆಟಿಗ ಯಶ್ ದಯಾಳ್‌ಗೆ ಬಿಗ್ ರಿಲೀಫ್: ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್!

24/01/2026 11:52 AM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಲವರ್ ಜೊತೆ ಸೇರಿ ಪತಿಯನ್ನು ಕೊಂದು ಡ್ರಮ್ ನಲ್ಲಿ ಶವ ಮುಚ್ಚಿಟ್ಟ ಪತ್ನಿ.!

24/01/2026 11:45 AM

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸರ್ಕಾರಿ ಕಾರ್ಯಕ್ರಮ’ಗಳ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

24/01/2026 11:40 AM
State News
KARNATAKA

ಸಾಸಿವೆ ಎಣ್ಣೆ, ಕಡಲೆಕಾಯಿ ಎಣ್ಣೆ ಮತ್ತು ಸಂಸ್ಕರಿಸಿದ ಎಣ್ಣೆಯಲ್ಲಿ ಯಾವುದು ಬೆಸ್ಟ್ ? ಇಲ್ಲಿದೆ `AIIMS’ ವೈದ್ಯ ಸಲಹೆ

By kannadanewsnow5724/01/2026 11:54 AM KARNATAKA 2 Mins Read

ನಾವೆಲ್ಲರೂ ನಮ್ಮ ಆಹಾರದಲ್ಲಿ ಒಂದಲ್ಲ ಒಂದು ರೂಪದಲ್ಲಿ ಎಣ್ಣೆಯನ್ನು ಸೇರಿಸಿಕೊಳ್ಳುತ್ತೇವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು…

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸರ್ಕಾರಿ ಕಾರ್ಯಕ್ರಮ’ಗಳ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

24/01/2026 11:40 AM

ಗಮನಿಸಿ : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಒಂದು ರೂಪಾಯಿ ಇಲ್ಲದಿದ್ದರೂ ಸಹ `UPI’ ಪಾವತಿ ಮಾಡಬಹುದು, ಇಲ್ಲಿದೆ ಟ್ರಿಕ್ಸ್

24/01/2026 11:33 AM

`ಮಟನ್ ಪ್ರಿಯರೇ’ ಗಮನಿಸಿ : `ಬೋಟಿ’ ಸೇವನೆಯಿಂದ ಸಿಗಲಿವೆ ಈ ಅದ್ಭುತ ಪ್ರಯೋಜನಗಳು.!

24/01/2026 11:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.