ಬೆಂಗಳೂರು: ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ RSS ಬಗ್ಗೆ ಭಯ ಇದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ಗುಡುಗಿದ್ದಾರೆ.
ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ @RSSorg ಬಗ್ಗೆ ಭಯ ಇದೆ. 4/8#AryanRSS
— Siddaramaiah (@siddaramaiah) June 2, 2022
ಅವರು ಇಂದು ಸರಣಿ ಟ್ವಿಟ್ ( Twitter ) ಮಾಡಿದ್ದು, ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ( DV Sadanandagowdha ) ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ ಇದೆ ಎಂದು ಹೇಳಿದ್ದಾರೆ.
ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ @DVSadanandGowda ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ @RSSorg ಕಂಡರೆ ಭಯ ಇದೆ. 1/8#AryanRSS pic.twitter.com/lwLfyE1tJa
— Siddaramaiah (@siddaramaiah) June 2, 2022
ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿವಿ ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಎಂದಿದ್ದಾರೆ.
ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. @DVSadanandGowda ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. 2/8#AryanRSS pic.twitter.com/O2QcpMkxiN
— Siddaramaiah (@siddaramaiah) June 2, 2022
ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್ ಎಸ್ ಎಸ್ ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂಬುದಾಗಿ ಗುಡುಗಿದ್ದಾರೆ.
ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ @RSSorg ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. 3/8#AryanRSS
— Siddaramaiah (@siddaramaiah) June 2, 2022
ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್ ಎಸ್ ಎಸ್ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ @RSSorg ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? 5/8#AryanRSS pic.twitter.com/0UE6abuwlQ
— Siddaramaiah (@siddaramaiah) June 2, 2022
ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್ ಎಸ್ ಎಸ್ ಬಗ್ಗೆ ಭಯ ಸಹಜ ಅಲ್ಲವೇ ಡಿವಿ ಸದಾನಂದಗೌಡ ಅವರೇ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ @RSSorg ಬಗ್ಗೆ ಭಯ ಸಹಜ ಅಲ್ಲವೇ @DVSadanandGowda ಅವರೇ? 6/8#AryanRSS pic.twitter.com/p2FpKv6W8D
— Siddaramaiah (@siddaramaiah) June 2, 2022
ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ ಎಂದು ತಿಳಿಸಿದ್ದಾರೆ.
ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ. 7/8#AryanRSS pic.twitter.com/Ww80OGo2rj
— Siddaramaiah (@siddaramaiah) June 2, 2022
ಆರ್.ಎಸ್.ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ತಿಳಿಸಿದ್ದಾರೆ.
ಆರ್.ಎಸ್.ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ
ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? 8/8#AryanRSS— Siddaramaiah (@siddaramaiah) June 2, 2022