Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

09/01/2026 5:53 PM

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ತೆರಿಗೆ ಪಾವತಿಗೆ ಜುಲೈ.31ರವರೆಗೆ ಮಾತ್ರ ‘OTS’ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಆಸ್ತಿ ತೆರಿಗೆ ಪಾವತಿಗೆ ಜುಲೈ.31ರವರೆಗೆ ಮಾತ್ರ ‘OTS’ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0911/06/2024 4:16 PM

ಬೆಂಗಳೂರು: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಹೇಳಿದ್ದಿಷ್ಟು:

“ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ. ನಾಗರಿಕರು ಈ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

20 ಲಕ್ಷ ಕಟ್ಟಡಗಳು ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿದ್ದು, ಅನೇಕರು ಹೊರಗಿದ್ದಾರೆ. ತೆರಿಗೆ ಪಾವತಿಸಲು ಅವರಿಗೂ ಅವಕಾಶ ಕಲ್ಪಿಸಲಾಗಿದೆ. ಅವರು ತೆರಿಗೆ ಪಾವತಿಸಿ 90 ದಿನದೊಳಗೆ ಸೂಕ್ತ ದಾಖಲೆ ಕೊಟ್ಟರೆ ಅವರಿಗೆ ಸೂಕ್ತ ಖಾತೆ ನೀಡಲಾಗುವುದು. ಇನ್ನು 4 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಈಗಾಗಲೇ 50 ಸಾವಿರ ಮಂದಿ ಈ ಅವಕಾಶ ಬಳಸಿಕೊಂಡು ಆಸ್ತಿ ತೆರಿಗೆ ಪಾವತಿಸಿದ್ದಾರೆ. ಆಗಸ್ಟ್ 1ರಿಂದ ತೆರಿಗೆ ಪಾವತಿಸದಿದ್ದರೆ ಡೀಫಾಲ್ಟರ್ ಪಟ್ಟಿಗೆ ಸೇರುತ್ತಾರೆ. ಹೀಗಾಗಿ ಜುಲೈ 31ರ ಒಳಗೆ ಆಸ್ತಿ ತೆರಿಗೆ ಪಾವತಿ ಮಾಡಿ. ಸದ್ಯದ ಲೆಕ್ಕಾಚಾರದ ಪ್ರಕಾರ 5200 ಕೋಟಿಯಷ್ಟು ತೆರಿಗೆ ಸಂಗ್ರಹವಾಗಬೇಕಿತ್ತು. ಆದರೆ ನಮಗೆ 1300 ಕೋಟಿ ಮಾತ್ರ ಸಂಗ್ರಹವಾಗಿದೆ ಎಂದರು.

‘ಬೆಂಗಳೂರಿನ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ‘BBMP ಪಾರ್ಕ್ ಓಪನ್’

ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!

Share. Facebook Twitter LinkedIn WhatsApp Email

Related Posts

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM2 Mins Read

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

09/01/2026 5:53 PM2 Mins Read

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM1 Min Read
Recent News

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

09/01/2026 5:53 PM

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM

BREAKING: ‘ದಳಪತಿ ವಿಜಯ್’ಗೆ ಮದ್ರಾಸ್ ಹೈಕೋರ್ಟ್ ಶಾಕ್: ‘ಜನ ನಾಯಗನ್’ ಚಿತ್ರ ಬಿಡುಗಡೆಗೆ ಮತ್ತೆ ತಡೆ

09/01/2026 5:31 PM
State News
KARNATAKA

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

By kannadanewsnow0909/01/2026 6:38 PM KARNATAKA 2 Mins Read

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯರಾದ ಡಾ. ಜಿ. ಪರಮೇಶ್ವರ್ ಅವರು ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ…

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

09/01/2026 5:53 PM

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

09/01/2026 5:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.