Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಂಡು ಮಗು ಆಗ್ಲಿಲ್ಲ ಎಂದು, ಈಜು ಕೊಳದಲ್ಲಿ ಮುಳುಗಿಸಿ, ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದ ಪಾಪಿ ಪತಿ!

04/04/2026 5:09 PM

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ

04/04/2026 5:08 PM

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ
KARNATAKA

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ

By kannadanewsnow0904/04/2026 5:08 PM

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಎಲ್ಲಾ ಸಮುದಾಯದವರಿಗೂ ಸೌಲಭ್ಯ ಕಲ್ಪಿಸಿದ್ದಾರೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ‘ಕೈʼ ಹಿಡಿಯಲಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವುದು ನಿಶ್ಚಿತ. ವಿಧಾನಸಭೆಯಲ್ಲಿ ನಮ್ಮ ಶಾಸಕರ ಸಂಖ್ಯೆ 138ರಿಂದ 140ಕ್ಕೆ ಏರಿಕೆಯಾಗಲಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಟೀಕಿಸಿದ್ದರು. ಗ್ಯಾರಂಟಿ ಜಾರಿಗೆ ತರಲು ಅಸಾಧ್ಯ, ರಾಜ್ಯ ದಿವಾಳಿ ಆಗುತ್ತದೆ. ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ ಎಂದರು. ಆದರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತು. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಲಾಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರತಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ವಿವೇಚನೆಯಡಿ 80 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ. ವಿಪಕ್ಷ, ಆಡಳಿತದ ಶಾಸಕರಿಗೂ ಅನುದಾನ ಹಂಚಿಕೆ ಮಾಡಲಾಗಿದ್ದು ಈ ವರ್ಷ ಪ್ರತಿ ಶಾಸಕರಿಗೂ 25 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ವಿವರಿಸಿದರು.

ರಾಜ್ಯದಿಂದ 4.50 ಲಕ್ಷ ಕೋಟಿ ರೂ. ತೆರಿಗೆ ಹಣ ಪಡೆಯುತ್ತಿರುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡುತ್ತಿರುವುದು ಕೇವಲ 50 ಸಾವಿರ ಕೋಟಿ. ಐವರು ಕೇಂದ್ರ ಸಚಿವರಿದ್ದರೂ ರಾಜ್ಯದ ಹಿತಾಸಕ್ತಿ ಬಗ್ಗೆ ಬಾಯಿಬಿಡುತ್ತಿಲ್ಲ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರು ಕೇಂದ್ರ ಸರ್ಕಾರ ಒಪ್ಪಿಗೆ ಕೊಡುತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ಅವರ ಮೌನ ಏಕೆ ಎಂದು ಪ್ರಶ್ನಿಸಿದರು.

ಈ ಉಪಚುನಾವಣೆ ಫಲಿತಾಂಶ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಈ ಉಪಚುನಾವಣೆ ಗೆಲುವು ಮುಂದಿನ ಚುನಾವಣೆ ದಿಕ್ಸೂಚಿ ಎಂಬುದು ಅವರ ವೈಯಕ್ತಿಕ ಅಭಿಪ್ರಾಯ, ರಾಜಕೀಯ ವಿಶ್ಲೇಷಣೆ. ಈ ಹಿಂದೆ ನಡೆದ ಬಳ್ಳಾರಿ, ಚನ್ನಪಟ್ಟಣ, ಹಾವೇರಿ ಉಪಚುನಾವಣೆಯಲ್ಲಿ ಮೂರರಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚನ್ನಪಟ್ಟಣ ಮತ್ತು ಹಾವೇರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರ ಪುತ್ರರನ್ನೇ ಸೋಲಿಸಿ ಕಾಂಗ್ರೆಸ್ ಗೆಲುವು ಸಾದಿಸಿತ್ತು ಎಂದು ಹೇಳಿದರು.

ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ 50 ಸ್ಥಾನ ದಾಟುತ್ತಿಲ್ಲ. ಅವರಿಗೆ ಬೇರೆ ಪಕ್ಷದ ಅನಿವಾರ್ಯತೆ ಇದೆ. ಜೆಡಿಎಸ್ ಮೈತ್ರಿ ವರ್ಕ್ ಔಟ್ ಆಗುವುದಿಲ್ಲ, ದಾವಣಗೆರೆಯಲ್ಲಿ ಜೆಡಿಎಸ್ ಪ್ರಭಾವ ಇಲ್ಲ. ಅಶೋಕ್, ವಿಜಯೇಂದ್ರ, ಕುಮಾರಸ್ವಾಮಿ ಅವರ ಮಾತಿಗೆ ಬೆಲೆ ಇಲ್ಲ. ಅವರದ್ದು ಹಿಟ್ ಅಂಡ್ ರನ್ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ರವಿಕುಮಾರ್ ಗಣಿಗ, ಬಸವರಾಜ್ ಶಿವಗಂಗಾ, ಹರೀಶ್ ಗೌಡ, ಎ.ಸಿ.ಶ್ರೀನಿವಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM3 Mins Read

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM2 Mins Read

ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/04/2026 4:57 PM3 Mins Read
Recent News

ಗಂಡು ಮಗು ಆಗ್ಲಿಲ್ಲ ಎಂದು, ಈಜು ಕೊಳದಲ್ಲಿ ಮುಳುಗಿಸಿ, ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದ ಪಾಪಿ ಪತಿ!

04/04/2026 5:09 PM

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ

04/04/2026 5:08 PM

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM
State News
KARNATAKA

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ

By kannadanewsnow0904/04/2026 5:08 PM KARNATAKA 2 Mins Read

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು…

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM

ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/04/2026 4:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.