Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ: ಅಫಿಡವಿಟ್ ಗಳ ಗಡುವು ನಿಗದಿ ಮಾಡಿದ ಸುಪ್ರೀಂಕೋರ್ಟ್

26/11/2025 7:54 AM

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಬೈಕ್ ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.ದಂಡ.!

26/11/2025 7:38 AM

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರೇ ಗಮನಿಸಿ : ಹೀಗಿವೆ ನಿಮ್ಮ ಕೆಲಸದ ಜವಾಬ್ದಾರಿಗಳು.!

26/11/2025 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಸರ್ಕಾರ ಯಾವ ‘ಗ್ಯಾರಂಟಿ’ ಯೋಜನೆಗಳನ್ನೂ ನಿಲ್ಲಿಸಲ್ಲ, ಇದಕ್ಕೆ ನಾನೇ ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ
KARNATAKA

ನಮ್ಮ ಸರ್ಕಾರ ಯಾವ ‘ಗ್ಯಾರಂಟಿ’ ಯೋಜನೆಗಳನ್ನೂ ನಿಲ್ಲಿಸಲ್ಲ, ಇದಕ್ಕೆ ನಾನೇ ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ

By kannadanewsnow0511/11/2024 6:31 PM

ಚನ್ನಪಟ್ಟಣ : ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ದೊಡ್ಡ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ.ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಮತಯಾಚನೆ ಮಾಡಿದ ಅವರು, ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು,ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ ಮೇಲೆ, ಇಲ್ಲಿನ ರೈತ ಸಮುದಾಯ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ, ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ಧಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು.ಈಗ ಯೋಗೇಶ್ವರ್ ಅವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಚನ್ನಪಟ್ಟಣದ ಜನ ಮಾಡಬೇಕು.

ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ @hd_kumaraswamy ಅವರ ಬಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಬಂದಾಗ ಕೈ ಕೊಟ್ಟರು.‌

ದೇವೇಗೌಡರು ಮತ್ತು @hd_kumaraswamy ಅವರು ಒಬ್ಬೇ ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡಲ್ಲ. ನಾನು ಹಿಂದುಳಿದವನು ಅಂತ ನನ್ನನ್ನು ವಿರೋಧಿಸ್ತಾರೆ, ಓಕೆ. ಆದರೆ, ವೈ.ಕೆ.ರಾಮಯ್ಯ, ನಾಗೇಗೌಡ, ಬಚ್ಚೇಗೌಡ, ವರದೇಗೌಡ, ಪುಟ್ಟಣ್ಣ, ಚಲುವರಾಯಸ್ವಾಮಿ, ಬಾಲಕೃಷ್ಣ, ಭೈರೇಗೌಡ, ಕೆ.ಆರ್.ಪೇಟೆ ಚಂದ್ರಶೇಖರ್ ಸೇರಿ ಸಾಲು ಸಾಲು ಒಕ್ಕಲಿಗರನ್ನು ರಾಜ್ಯದಲ್ಲಿ ಮುಗಿಸಿದರು. ರಾಜ್ಯದಲ್ಲಿ ಒಕ್ಕಲಿಗ ನಾಯಕತ್ವವೇ ಬೆಳೆಯದಂತೆ ಮಾಡುತ್ತಿದ್ದಾರೆ.

ಬುದ್ದಿವಂತ ಒಕ್ಕಲಿಗರನ್ನು, ರಾಜಕೀಯ ಪ್ರಜ್ಞೆ ಇರುವ ಒಕ್ಕಲಿಗರನ್ನು ಯಾರನ್ನೂ ದೇವೇಗೌಡರು ಬೆಳೆಯಲು ಬಿಡದೆ ಮುಗಿಸ್ತಾರೆ. ಈಗ @DKShivakumar, @DKSureshINC ಅವರನ್ನೂ ಮುಗಿಸುವ ಪ್ರಯತ್ನ ಮಾಡ್ತಿದ್ದಾರೆ. ಆದರೆ ಇದು ಆಗಲ್ಲ. ನಾನು ಜಿ.ಟಿ.ದೇವೇಗೌಡರಿಗೂ ಎಚ್ಚರಿಸಿದ್ದೀನಿ. ಅಲ್ಲಿದ್ದರೆ ಮುಗಿಸ್ತಾರೆ, ಬೇಗ ಹೊರಗೆ ಬಂದ್ರೆ ನಿಮಗೆ ಒಳ್ಳೆಯದು ಎಂದು ಎಚ್ಚರಿಸಿದ್ದೀನಿ. ಮನೆ ಮಗ ಅಂತಿದ್ದ ಬಿ.ಎಲ್.ಶಂಕರ್, ವೈ.ಕೆ.ರಾಮಯ್ಯ ಅವರನ್ನೇ ಮುಗಿಸಿದವರು ಇನ್ನು ಯೋಗೇಶ್ವರ್ ಅವರನ್ನು ಸಹಿಸ್ತಾರಾ?ಭಾರತ ಮೋದಿಯವರಂತಹಾ ಸುಳ್ಳ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. @narendramodi ಅವರು ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು. ಈಗ ಮೋದಿಯವರನ್ನು ಯದ್ವಾತದ್ವಾ ಹೊಗಳುತ್ತಿದ್ದಾರೆ.‌

ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ 1994 ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್.ಬೊಮ್ಮಾಯಿ ಸಿದ್ಧರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರ್ಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರವಾಗಿ ನಿಂತೆವು. ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಇದು ಪಾಳೇಗಾರಿಕೆ ಅಲ್ವಾ ದೇವೇಗೌಡರೇ?

ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ?ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಿದ್ರಾ ? ಎನ್‌ಡಿಎ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ?

ಇರಲಿ, ಚನ್ನಪಟ್ಟಣಕ್ಕೆ ಏನು ಮಾಡಿದ್ದೀರಿ ಎನ್ನುವುದನ್ನು ಕ್ಷೇತ್ರದ ಜನತೆ ಕೇಳಬೇಕು. ಬರೀ ಕಣ್ಣೀರು ಹಾಕೋದಲ್ಲ. ಅತ್ಯಾಚಾರಕ್ಕೆ ಒಳಗಾದ ಹಾಸನದ ಹೆಣ್ಣು‌ಮಕ್ಕಳ ಪರವಾಗಿ ಪಾಪ ದೇವೇಗೌಡರಿಗೆ ಕಣ್ಣೀರೇ ಬರಲಿಲ್ಲ. ನಾನು ಎರಡನೇ ಬಾರಿ ಮುಖ್ಯಮಂತ್ರಿ ಆದೆ ಎಂದು ದೇವೇಗೌಡರಿಗೆ ಹೊಟ್ಟೆಯುರಿ. ಅದಕ್ಕೇ ನಮ್ಮ ಸರ್ಕಾರ ಕಿತ್ತಾಕುತ್ತೇವೆ ಎನ್ನುತ್ತಿದ್ದಾರೆ. ರಾಜ್ಯದ ಜನತೆ ಆರಿಸಿರುವ ನಮ್ಮ‌ ಸರ್ಕಾರವನ್ನು @hd_kumaraswamy, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ. ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ದೇವೇಗೌಡರೇ.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ. @hd_kumaraswamy ಅವರೇ, ನೀವು ಏನು ಸಾಧನೆ ಮಾಡಿದ್ದೀರಿ? ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ?400 ಕೋಟಿ ವೆಚ್ಚದ ಹಾಲಿನ ಪುಡಿ ಘಟಕ ಮಾಡಿದ್ದು ನಾವು. ಕನಕಪುರದಲ್ಲಿ 2016 ರಲ್ಲಿ ಡೈರಿ ಸಂಕೀರ್ಣವನ್ನು 700 ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದು ನಾವು. ಇಂಥವು ಇನ್ನೂ ಪಟ್ಟಿ ದೊಡ್ಡದಿದೆ. ಕುಮಾರಸ್ವಾಮಿ ಅವರು ಇಂಥಾ ಒಂದೇ ಒಂದನ್ನು ಮಾಡಿದ್ದಾರಾ ಹೇಳಿ ದೇವೇಗೌಡರೇ . ಇದನ್ನು ಚನ್ನಪಟ್ಟಣ ಜನತೆ ಕೂಡ ಕೇಳಬೇಕು.

ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ದೊಡ್ಡ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ.

ವಕ್ಫ್… pic.twitter.com/cxHtGvntns

— Siddaramaiah (@siddaramaiah) November 11, 2024

Share. Facebook Twitter LinkedIn WhatsApp Email

Related Posts

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಬೈಕ್ ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.ದಂಡ.!

26/11/2025 7:38 AM1 Min Read

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರೇ ಗಮನಿಸಿ : ಹೀಗಿವೆ ನಿಮ್ಮ ಕೆಲಸದ ಜವಾಬ್ದಾರಿಗಳು.!

26/11/2025 7:33 AM2 Mins Read

SHOCKING : ಪೋಷಕರೇ ಎಚ್ಚರ : ನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಸಾವು.!

26/11/2025 7:33 AM1 Min Read
Recent News

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ: ಅಫಿಡವಿಟ್ ಗಳ ಗಡುವು ನಿಗದಿ ಮಾಡಿದ ಸುಪ್ರೀಂಕೋರ್ಟ್

26/11/2025 7:54 AM

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಬೈಕ್ ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.ದಂಡ.!

26/11/2025 7:38 AM

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರೇ ಗಮನಿಸಿ : ಹೀಗಿವೆ ನಿಮ್ಮ ಕೆಲಸದ ಜವಾಬ್ದಾರಿಗಳು.!

26/11/2025 7:33 AM

SHOCKING : ಪೋಷಕರೇ ಎಚ್ಚರ : ನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಸಾವು.!

26/11/2025 7:33 AM
State News
KARNATAKA

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಬೈಕ್ ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.ದಂಡ.!

By kannadanewsnow5726/11/2025 7:38 AM KARNATAKA 1 Min Read

ಕೊಪ್ಪಳ : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.…

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರೇ ಗಮನಿಸಿ : ಹೀಗಿವೆ ನಿಮ್ಮ ಕೆಲಸದ ಜವಾಬ್ದಾರಿಗಳು.!

26/11/2025 7:33 AM

SHOCKING : ಪೋಷಕರೇ ಎಚ್ಚರ : ನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಸಾವು.!

26/11/2025 7:33 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಸಿಂಚಾಯಿ ಯೋಜನೆ’ಗೆ ಅರ್ಜಿ ಆಹ್ವಾನ

26/11/2025 7:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.