Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಶೀಘ್ರವೇ ‘ಋತುಚಕ್ರ ರಜೆ’ಗೆ ನೀತಿ-ನಿಯಮ ರೂಪಿಸಿ, ಆದೇಶ: ಸಚಿವ ಸಂತೋಷ್ ಲಾಡ್

13/10/2025 8:28 PM

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ

13/10/2025 8:23 PM

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ ; ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ

13/10/2025 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ
KARNATAKA

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ

By kannadanewsnow0913/10/2025 8:23 PM

ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು.

ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ

ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ. ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು ಕೇಳುವುದಿಲ್ಲ. ಗುಣಮುಖರಾದ ನಂತರ ಯಾವ ಜಾತಿ ಎಂದು ಕೇಳುವುದು ನ್ಯಾಯವೇ ಎಂದು ಸಿಎಂ ಪ್ರಶ್ನಿಸಿದರು. ಬಸವಣ್ಣನವರು ದಯೆ ಇಲ್ಲದ ಧರ್ಮ ಯಾವುದಯ್ಯ? ದಯೆಯೇ ಧರ್ಮದ ಮೂಲ ಎಂದು ಹೇಳಿದ್ದಾರೆ. ಇದನ್ನು ತಿಳಿದುಕೊಳ್ಳಬೇಕು. ಯಾರೂ ಹುಟ್ಟುವಾಗ ಇಂಥ ಜಾತಿಯಲ್ಲೇ ಹುಟ್ಟಬೇಕೆಂದು ಅರ್ಜಿ ಹಾಕಿಕೊಳ್ಳುವುದಿಲ್ಲ. ಮೂಲಭೂತವಾಗಿ ನಾವೆಲ್ಲರೂ ಮನುಷ್ಯರು. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ದ್ವೇಷಿಸುತ್ತೇವೆ. ಜಾತಿ ವ್ಯವಸ್ಥೆಯಿಂದ ಗುಲಾಮಗಿರಿ ಮನೆ ಮಾಡಿಕೊಂಡಿದೆ ಎಂದರು. ವಿದ್ಯಾವಂತರಾದ ಮೇಲೂ ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ ಎಂದರು.

ವಿದ್ಯೆ ಯಾರ ಸ್ವತ್ತೂ ಅಲ್ಲ

ನಮ್ಮ ಸಮಾಜದ ಬಹುತೇಕ ಜನ ಅವಿದ್ಯಾವಂತರಾಗಿದ್ದಾರೆ. ಶೂದ್ರರಿಗೆ ಹಾಗೂ ಮಹಿಳೆಯರಿಗೆ ವಿದ್ಯೆ ಕಲಿಯುವ ಅವಕಾಶವಿರಲಿಲ್ಲ. ವಿದ್ಯೆ ಯಾರ ಸ್ವತ್ತೂ ಅಲ್ಲ. ಈ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಬಸವಣ್ಣನವರು ವಚನಗಳನ್ನು ರಚಿಸಿದ್ದಾರೆ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಡತ್ವವಿರುವ ವ್ಯವಸ್ಥೆಯಾಗಿರುವುದರಿಂದ ಇಷ್ಟು ವರ್ಷಗಳಾದರೂ ಬದಲಾವಣೆಯಾಗಿಲ್ಲ. ಜಾತ್ಯತೀತ ಸಮಾಜ ನಿರ್ಮಾಣವಾಗಲು ಸಾಧ್ಯವಾಗಿಲ್ಲ ಎಂದರು. ಸಮಾಜದ ಅಸಮಾನತೆಯನ್ನು ತೊಡೆದುಹಾಕುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ ಎಂದರು. ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆಗಳನ್ನು ತೊಡೆದುಹಾಕದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ ಎಂದು ತಿಳಿಸಿದರು.

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಖಂಡಿಸಬೇಕು

ಇತ್ತೀಚೆಗೆ ಸನಾತನ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದಾರೆ. ಯಾವ ಧರ್ಮವೂ ದ್ವೇಷಿಸಬೇಕು ಎಂದು ಹೇಳುವುದಿಲ್ಲ. ಕಾನೂನು ಓದಿರುವ ವಕೀಲನೊಬ್ಬ ರೀತಿ ಮಾಡುವುದನ್ನು ನಾವು ಖಂಡಿಸಬೇಕು. ಸಹಿಸಿಕೊಳ್ಳಬಾರದು. ಇಂಥವೆಲ್ಲಾ ನಡೆದರೆ ಸಮಾಜದಲ್ಲಿ ಶಾಂತಿ ಎಲ್ಲಿ ನೆಲೆಸುತ್ತದೆ ಎಂದರು.

ಚಕ್ರವರ್ತಿ ದಾನೇಶ್ವರ ಸ್ವಾಮೀಜಿ, ಅಬಕಾರಿ ಸಚಿವ ಬಿ. ಬಿ ತಿಮ್ಮಾಪುರ, ಮಾಜಿ ಸಚಿವರು ಹಾಗೂ ಮೇಲ್ಮನೆ ಸದಸ್ಯೆ ಉಮಾಶ್ರೀ, ವಿಜಯಾನಂಧ ಕಾಶಪ್ಪನವರ್, ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂಜಯ್ಯ್ ಮಠ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮಾಜಿ ಶಾಸಕ ನಂದ ನ್ಯಾಮದಾಳ, ಮೊದಲಾದವರು ಉಪಸ್ಥಿತರಿದ್ದರು.

BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

Share. Facebook Twitter LinkedIn WhatsApp Email

Related Posts

GOOD NEWS: ಶೀಘ್ರವೇ ‘ಋತುಚಕ್ರ ರಜೆ’ಗೆ ನೀತಿ-ನಿಯಮ ರೂಪಿಸಿ, ಆದೇಶ: ಸಚಿವ ಸಂತೋಷ್ ಲಾಡ್

13/10/2025 8:28 PM1 Min Read

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

13/10/2025 7:13 PM2 Mins Read
cough syrup

BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

13/10/2025 7:06 PM1 Min Read
Recent News

GOOD NEWS: ಶೀಘ್ರವೇ ‘ಋತುಚಕ್ರ ರಜೆ’ಗೆ ನೀತಿ-ನಿಯಮ ರೂಪಿಸಿ, ಆದೇಶ: ಸಚಿವ ಸಂತೋಷ್ ಲಾಡ್

13/10/2025 8:28 PM

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ

13/10/2025 8:23 PM

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ ; ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ

13/10/2025 7:43 PM

‘ಸೆಲೆಬ್ರಿಟಿ’ಗಳು ತಿನ್ನುವ ಸೂಪರ್ ಫುಡ್ ಇದು.! ತಿಂದ್ರೆ ಸಿಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ.?

13/10/2025 7:34 PM
State News
KARNATAKA

GOOD NEWS: ಶೀಘ್ರವೇ ‘ಋತುಚಕ್ರ ರಜೆ’ಗೆ ನೀತಿ-ನಿಯಮ ರೂಪಿಸಿ, ಆದೇಶ: ಸಚಿವ ಸಂತೋಷ್ ಲಾಡ್

By kannadanewsnow0913/10/2025 8:28 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ತಿಂಗಳಲ್ಲಿ ಒಂದು ದಿನ ಸರ್ಕಾರಿ, ಖಾಸಗಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಲಾಗಿತ್ತು.…

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ

13/10/2025 8:23 PM

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

13/10/2025 7:13 PM
cough syrup

BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

13/10/2025 7:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.