ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮವಾಗಿದೆ. ರಸ್ತೆ ನಿರ್ಮಾಣ ಕಾರ್ಯಕ್ಕೆ ಬೆಟ್ಟದಲ್ಲಿದ್ದ ಮರಗಳನ್ನು ಇದೀಗ ಕಡಿಯಲಾಗಿದೆ. ಬೆಟ್ಟದಲ್ಲಿ ಇದ್ದಂತ ಹತ್ತಕ್ಕೂ ಹೆಚ್ಚು ಮರಗಳನ್ನು ಪ್ರಾಧಿಕಾರ ಕಡಿದು ಹಾಕಿದೆ..
ಅರಣ್ಯ ಇಲಾಖೆ ಅನುಮತಿ ಪಡೆಯದೆ ಪ್ರಾಧಿಕಾರದಿಂದ ಮರ ತೆರವುಗೊಳಿಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಯಿಂದ ಇದೀಗ ಪ್ರಾಧಿಕಾರದ ಇಂಜಿನಿಯರ್ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ದಾಖಲಾಗಿದೆ. ಕಾರ್ಯದರ್ಶಿ ವಿರುದ್ಧ ಅರಣ್ಯ ಇಲಾಖೆ ಅಪಾಯದ ಕಳಿಸಲು ಅನುಮತಿ ಕೋರಿದೆ.








