ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ  ಖಾಸಗಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರೋ ಘಟನೆ ನಡೆದಿದೆ.

BREAKING NEWS: ಹುಬ್ಬಳ್ಳಿಯಲ್ಲಿ ಬಾಲಕನನ್ನು ಅಪಹರಿಸಿ 1 ಕೋಟಿಗೆ ಬೇಡಿಕೆ ಇಟ್ಟಿದ್ದ 7 ಅಪಹರಣಕಾರರ ಬಂಧನ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.

ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets

ಇನ್ನೂ ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Funny Video: ಮೇವು ಹಾಕಲು ಬಂದು ಡಾನ್ಸ್‌ ಮಾಡುತ್ತಿದ್ದವಳಿಗೆ ಗುಮ್ಮಿದ ಹಸು!…

ಅಂದಹಾಗೇ ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Share.
Exit mobile version