BREAKING: ತುಮಕೂರಲ್ಲಿ ರಾಮನವಮಿ ಮಜ್ಜಿಗೆ ಸೇವಿಸಿದ 45ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ತುಮಕೂರು: ಜಿಲ್ಲೆಯಲ್ಲಿ ನಿನ್ನೆ ರಾಮನವಮಿ ಪ್ರಯುಕ್ತ ಮಾಡಲಾಗಿದ್ದಂತ ಮಜ್ಜಿಗೆ ಸೇವಿಸಿದಂತ 45ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ, ಪಲ್ಲಾರ ಮಾಡಲಾಗಿತ್ತು. ನಿನ್ನೆ ಸಂಜೆ ದೇವಸ್ಥಾನದ ಮುಂದೆ ನೆರೆದಿದ್ದಂತ ಗೊಲ್ಲರಹಟ್ಟಿಯ ಜನತೆಗೆ ಮಜ್ಜಿಗೆಯನ್ನು ವಿತರಿಸಲಾಗಿತ್ತು. ರಾಮನವಮಿ ಪ್ರಯುಕ್ತ ನೀಡಲಾಗಿದ್ದಂತ ಮಜ್ಜಿಗೆ ಸೇವಿಸಿದಂತ 45ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ಅನೇಕರು … Continue reading BREAKING: ತುಮಕೂರಲ್ಲಿ ರಾಮನವಮಿ ಮಜ್ಜಿಗೆ ಸೇವಿಸಿದ 45ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು