ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ( Bus Accident ) ಪರಿಣಾಮ, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಹಲವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ತೋಟದಕೆರೆ ಕ್ರಾಸ್ ಬಳಿ ನಡೆದಿದೆ.
ದೇವೇಗೌಡರ ಆರೋಗ್ಯದ ಬಗ್ಗೆ ಹಗುರ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಕ್ಷಮೆ ಕೇಳಬೇಕು – ಡಿ.ಕೆ ಸಹೋದರರ ಆಗ್ರಹ
ಶಿವಮೊಗ್ಗ ದಿಂದ ಎನ್ ಆರ್ ಪುರ ಕೊಪ್ಪ ಕಡೆಗೆ ಹೋಗುವ ಕೆ ಕೆ ಬಿ ಬಸ್ ಹಾಗೂ ಎನ್ ಆರ್ ಪುರ ದಿಂದ ಶಿವಮೊಗ್ಗ ಕ್ಕೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಉಬಲೇಬೈಲು ಗ್ರಾಮ ಪಂಚಾಯಿತಿಯ ತೋಟದಕೆರೆ ಕ್ರಾಸ್ ಬಳಿ ಮುಕಾಮುಕಿ ಡಿಕ್ಕಿಯಾಗಿದೆ. ಇದರಿಂದ ಬಸ್ ನಲ್ಲಿದ್ದಂತ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
BIG NEWS: ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣಗೆ ತಕ್ಕ ಪಾಠ ಕಲಿಸುತ್ತೇನೆ – ಮಾಜಿ ಸಿಎಂ HDK ಗುಡುಗು
ಇನ್ನೂ ಗಾಯಾಳುಗಳನ್ನು ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಇವರಲ್ಲದೇ ಇನ್ನೂ ಹಲವು ಪ್ರಯಾಣಿಕರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಈ ವಿಷಯ ತಿಳಿದು ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.