ಕುಶಾಲನಗರ : ಕುಶಾಲನಗರ ಸಮೀಪದ ಕೊಪ್ಪದಲ್ಲಿ ಬೀಗರ ಊಟದಲ್ಲಿ ಪಾಲ್ಗೊಂಡ 500 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಗೆ ತುತ್ತಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕರಣ ನಡೆದಿದೆ.
ಗುರುವಾರ ಸಂಜೆ ಬೀಗರ ಊಟದಲ್ಲಿ ಪಾಲ್ಗೊಂಡಿದ್ದ ಮಧು ಮಕ್ಕಳೂ ಸೇರಿದಂತೆ ಸುಮಾರು 1,000 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಬಳಿಕ ಅಸ್ವಸ್ಥರಾಗಿದ್ದು, ಪಿರಿಯಾಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಪ್ಪದ ಖಾಸಗಿ ರೆಸಾರ್ಟ್ ನಲ್ಲಿ ಬೀಗರ ಊಟ ನಡೆದಿದ್ದು, ಸಮಾರಂಭದಲ್ಲಿ ಸಾವಿರಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡಿದ್ದರು. ಸಂಜೆ 5 ಗಂಟೆಗೆ ವೇಳೆಗೆ ಆಹಾರ ಸೇವಿಸಿದ ಮಂದಿಯ್ಲಿ ವಾಂತಿ ಭೇದಿ ಕಂಡುಬಂದಿದೆ. ಕೂಡಲೇ ಅಸ್ವಸ್ಥರನ್ನು ಕುಶಾಲನಗರ, ಪರಿಯಾಪಟ್ಟಣ ಸೇರಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.