Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `K-SET’ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

23/11/2025 6:36 AM

SHOCKING : ಪ್ರತಿ 9 ಭಾರತೀಯರಲ್ಲಿ ಒಬ್ಬರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ ; ‘ICMR’ ಶಾಕಿಂಗ್ ವರದಿ

23/11/2025 6:25 AM

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

23/11/2025 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಸಾಗರೋತ್ತರ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ್
KARNATAKA

ಶೀಘ್ರವೇ ಸಾಗರೋತ್ತರ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ್

By kannadanewsnow0907/04/2025 7:37 PM

ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ವಿವಿಧೆಡೆ ಉದ್ಯೋಗ ಮೇಳಗಳನ್ನು ಆಯೋಜಿಸುವುದರ ಜತೆಗೆ ಆರೋಗ್ಯ ವೃತ್ತಿಪರರಿಗಾಗಿ ಸಾಗರೋತ್ತರ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. “ಜರ್ಮನಿ, ಜಪಾನ್, ಇಟಲಿ ಮತ್ತಿತರ ರಾಷ್ಟ್ರಗಳಿಂದ ನರ್ಸ್, ಅರೆ ವೈದ್ಯಕೀಯ ಮುಂತಾದ ಆರೋಗ್ಯ ವೃತ್ತಿಪರರಿಗೆ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ಈ ಆರೋಗ್ಯ ವೃತ್ತಿಪರರಿಗಾಗಿಯೇ ಸಾಗರೋತ್ತರ ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಎಂದಿದ್ದಾರೆ.

“ರಾಜ್ಯದ ಆರೋಗ್ಯ ವೃತ್ತಿಪರರಿಗೆ ವಿದೇಶಗಳಲ್ಲಿ ಸಾಕಷ್ಟು ಬೇಡಿಕೆ ಇದ್ದರೂ ಭಾಷೆ ಎಂಬುದು ಅವರಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಜರ್ಮನ್ ಮತ್ತು ಜಾಪಾನೀಸ್ ಭಾಷೆಯನ್ನು ಪರಿಚಯಿಸಲು ಕೂಡ ನಿರ್ಧರಿಸಲಾಗಿದೆ. ಆ ಮೂಲಕ ಭಾಷಾ ಸಮಸ್ಯೆಯನ್ನು ಬಗೆಹರಿಸಲಾಗುವುದು” ಎಂದು ತಿಳಿಸಿದ್ದಾರೆ.

ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮಾತನಾಡಿ, “ದೇಶದಲ್ಲಿ ಶಿಕ್ಷಣಕ್ಕೆ ಮಾತ್ರ ಆದ್ಯತೆ ನೀಡುತ್ತಿದ್ದುದರಿಂದ ಶಿಕ್ಷಣ ಮುಗಿಸಿ ಹೊರಬರುತ್ತಿರುವವರ ಪೈಕಿ ಶೇ. 85 ಮಂದಿಯಲ್ಲಿ ಕೌಶಲ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಉದ್ಯೋಗ ಮೇಳಗಳ ಮೂಲಕ ಕಂಪನಿ, ಕೈಗಾರಿಕೆಗಳಿಂದ ಬರುವ ಕೌಶಲ ಬೇಡಿಕೆ ಆಧರಿಸಿ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಬೆಂಗಳೂರು ಹೊರತುಪಡಿಸಿ (ಬಿಯಾಂಡ್ ಬೆಂಗಳೂರು) ಇತರೆ ಪ್ರದೇಶಗಳಲ್ಲೂ ಕೌಶಲ್ಯಾಧರಿತ ಶಿಕ್ಷಣಕ್ಕೆ ಗಮನ ಹರಿಸಲಾಗುತ್ತಿದೆ. ಇದಕ್ಕೆ ಎಫ್ ಕೆಸಿಸಿಐ ಸಹಕಾರ ನೀಡಬೇಕು” ಎಂದರು.

ಎಫ್ ಕೆಸಿಸಿಐ ಕೌಶಲ್ಯಾಭಿವೃದ್ಧಿ ಸಮಿತಿ ಅಧ್ಯಕ್ಷ ಅಭಿಷೇಕ್ ಬಿ.ಎ. ಮಾತನಾಡಿ, “ಎಫ್ ಕೆಸಿಸಿಐ ಉದ್ಯೋಗ ಉತ್ಸವ್ ನಲ್ಲಿ 120ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಉದ್ಯೋಗಾಂಕ್ಷಿಗಳಿಗೆ ಆವಕಾಶ ಮಾಡಿಕೊಡಲಿವೆ. ಈ ಪೈಕಿ 55 ಕಂಪನಿಗಳು ಎಫ್ ಕೆಸಿಸಿಐ ಸದಸ್ಯರದ್ದಾಗಿರುವುದು ವಿಶೇಷ. 9000 ಮಂದಿ ಇಲ್ಲಿ ನೋಂದಣಿ ಮಾಡಿಕೊಂಡಿದ್ದು,5000 ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದಾರೆ. ಬ್ಯಾಂಕಿಂಗ್, ಸೇವಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಕೊಡಿಸಲು ಪ್ರಯತ್ನ ಮಾಡಾಗುತ್ತಿದೆ,” ಎಂದು ತಿಳಿಸಿದರು.

ಏ. 16ಕ್ಕೆ ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

“ಉದ್ಯೋಗದಾತರ ಮೂಲಕ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಈಗಾಗಲೇ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಏ.16ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದಾದ ಬಳಿಕ ಮೈಸೂರು, ಹುಬ್ಬಳ್ಳಿ, ಬೆಳಗಾವಿಗಳಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು”, ಎಂದು ಹೇಳಿದರು.

“ರಾಜ್ಯದಲ್ಲಿ ಉದ್ಯೋಗ ಸಮಸ್ಯೆಗಿಂತಲೂ ಕೌಶಲ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಕೌಶಲಭರಿತ ಶಿಕ್ಷಣ ನೀಡುವ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಕಲಬುರಗಿ, ಕೊಪ್ಪಳ ಮತ್ತು ಮೈಸೂರನ್ನು ಕೇಂದ್ರೀಕರಿಸಿ ‘ಮಲ್ಟಿ ಸ್ಕಿಲ್ ಡೆವಲಪ್ ಮಂಟ್ ಸೆಂಟರ್’ಗಳನ್ನು ಸ್ಥಾಪಿಸಲಾಗುವುದು”, ಎಂದು ತಿಳಿಸಿದರು.

ದೇಶದಲ್ಲೇ ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ

BIG NEWS: ರಾಜ್ಯದ 208 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ: ರಾಜ್ಯ ಸರ್ಕಾರ ಅಧಿಕೃತ ಆದೇಶ.!

BREAKING: ನಾಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

Share. Facebook Twitter LinkedIn WhatsApp Email

Related Posts

BREAKING : `K-SET’ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

23/11/2025 6:36 AM1 Min Read

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

23/11/2025 6:15 AM1 Min Read

GOOD NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜನವರಿಯಿಂದ ‘ ಇಂದಿರಾ ಆಹಾರ ಕಿಟ್’ ವಿತರಣೆ

23/11/2025 6:09 AM5 Mins Read
Recent News

BREAKING : `K-SET’ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

23/11/2025 6:36 AM

SHOCKING : ಪ್ರತಿ 9 ಭಾರತೀಯರಲ್ಲಿ ಒಬ್ಬರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ ; ‘ICMR’ ಶಾಕಿಂಗ್ ವರದಿ

23/11/2025 6:25 AM

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

23/11/2025 6:15 AM

GOOD NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜನವರಿಯಿಂದ ‘ ಇಂದಿರಾ ಆಹಾರ ಕಿಟ್’ ವಿತರಣೆ

23/11/2025 6:09 AM
State News
KARNATAKA

BREAKING : `K-SET’ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

By kannadanewsnow5723/11/2025 6:36 AM KARNATAKA 1 Min Read

ಬೆಂಗಳೂರು: ಕಳೆದ ನವೆಂಬರ್ 2ರಂದು ನಡೆಸಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ…

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

23/11/2025 6:15 AM

GOOD NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜನವರಿಯಿಂದ ‘ ಇಂದಿರಾ ಆಹಾರ ಕಿಟ್’ ವಿತರಣೆ

23/11/2025 6:09 AM

ಸಾರ್ವಜನಿಕರೇ ಗಮನಿಸಿ : ನೀವು ತಪ್ಪದೇ ಈ ಕಾರ್ಡ್ ಗಳನ್ನು ಮಾಡಿಸಿಕೊಂಡ್ರೆ ಸರ್ಕಾರದಿಂದ ಸಿಗಲಿವೆ ಹಲವು ಸೌಲಭ್ಯಗಳು.!

23/11/2025 6:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.