Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್
KARNATAKA

ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್

By kannadanewsnow0917/02/2026 7:05 PM

ಬೆಂಗಳೂರು: ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ. ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಶ್ಲಾಘಸಿದರು.

ಗಾಂಧಿ ಭವನದಲ್ಲಿ ನಡೆದ ಹಿರಿಯ ಪತ್ರಕರ್ತ ದಿವಂಗತ ಪಿ.ರಾಮಯ್ಯ ಅವರ ಶ್ರದ್ದಾಂಜಲಿ ಹಾಗೂ “ನಾನು ಹಿಂದೂ ರಾಮಯ್ಯ” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಆಗುಹೋಗುಗಳನ್ನು, ಒಳಿತು ಕೆಡುಕುಗಳನ್ನೇ ಧ್ಯಾನಿಸುವ ಪತ್ರಕರ್ತರು ಸದಾ ಈ ಧಾವಂತದಲ್ಲಿಯೇ ಉಳಿದು ಕ್ರಮೇಣ ಅಸೂಕ್ಮರಾಗುವ, ಸಂವೇದನೆಗಳನ್ನು‌ ಕಳೆದುಕೊಳ್ಳುವ ಅಪಾಯ ಹೆಚ್ಚು. ಇದನ್ನು ಪ್ರಜ್ಞಾಪೂರ್ವಕಾಗಿ ಮೀರುವ ಪ್ರಯತ್ನ ಮಾಡಿದಾಗಷ್ಟೆ ವೃತ್ತಿ ಘನತೆ ಹೆಚ್ಚುತ್ತದೆ. ನಮ್ಮೆಲ್ಲ‌ರ ವೈಯುಕ್ತಿಕ ಹಳಹಳಿಕೆ , ಧಾವಂತಗಳ ನಡುವೆಯೂ ಇತರರ ಘನತೆಗೆ ಕುಂದು ಬಾರದಂತೆ ವೃತ್ತಿಪರರಾಗುವುದು, ಪತ್ರಿಕೋದ್ಯಮ ನಡೆಸುವುದು, ಪತ್ರಕರ್ತರಾಗಿ ಉಳಿಯುವುದು ನಮ್ಮ ಮುಂದಿರುವ ದೊಡ್ಡ ಸವಾಲು ಎಂದರು.

ಅಗಲಿದ ಹಿರಿಯ ಚೇತನ ಪಿ. ರಾಮಯ್ಯ ಈ ವಿಚಾರದಲ್ಲಿ ನಮ್ಮೆಲ್ಲರಿಗೂ ಮಾದರಿಯಾಗಿದ್ದರು. ಪತ್ರಕರ್ತರಾಗುವುದು ಒಂದು ನಮೂನೆಯ ದೀಕ್ಷೆ ಇದ್ದಂತೆ. ಒಮ್ಮೆ ನೀವು ಪತ್ರಕರ್ತರೆಂದು ಗುರುತಿಸಿಕೊಂಡ ಮೇಲೆ ಕೆಲವು ನಿಷ್ಠುರ ಗುಣಗಳು ಅನಾಯಸವಾಗಿ ಬಂದುಬಿಡುತ್ತವೆ. ಮುಂದೆ ರಾಜಕಾರಣಿಯಾದರೂ ಸರಿಯೇ, ಉದ್ಯಮಿಯಾದರೂ ಸರಿಯೇ. ಒಮ್ಮೆ ಪತ್ರಕರ್ತರಾದವರು ಮಾಜಿಯಾಗಲಾರರು, ನಿವೃತ್ತರಾಗಲಾರರು.ಚಲನಶೀಲತೆಯನ್ನುಮುಕ್ತ ಮನಸ್ಸಿನಿಂದ ಸ್ವೀಕರಿಸುವ ಮನೋಭಾವ ಇದ್ದ ಪತ್ರಕರ್ತರಿಗೆ ಸಾವು ಇರದು ಎಂದು ಅಭಿಪ್ರಾಯಪಟ್ಟರು.

ಕಾಲವನ್ನು ಒಪ್ಪಿಕೊಳ್ಳುತ್ತಲೇ ಸಮಾಜದಲ್ಲಿರುವ ಹುಳಕನ್ನು ನಯವಾಗಿ ತೋರಿಸಿ ತಿದ್ದಬಲ್ಲವರು ಮಾತ್ರ ಜನಮಾನಸದಲ್ಲಿ ಉಳಿಯಬಲ್ಲರು.‌ ಅವರಿಗೂ ಆತ್ಮತೃಪ್ತಿ ತರಬಲ್ಲವು. ಇಂಥಾ ಆತ್ಮತೃಪ್ತಿ ಗಳಿಸಿದ್ದಾಗಿ ತಮ್ಮ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದ ರಾಮಯ್ಯ ಅವರು, ತಾವು ಸಾರ್ಥಕ್ಯವಾಗಿ ಬಾಳಿ, ತಮ್ಮೊಡನಿರುವ ವೃತ್ತಿಪರರ ಘನತೆಯನ್ನು ಎತ್ತಿ ಹಿಡಿದು ಪತ್ರಕರ್ತರಾಗಿ ಅಷ್ಟೆ ಅಲ್ಲ ವ್ಯಕ್ತಿತ್ಚ ದೃಷ್ಟಿಯಿಂದಲೂ ಅನುಸರಣೀಯರಾಗಿದ್ದರು ಎಂದು ಧನ್ಯತೆ ಅರ್ಪಿಸಿದರು.

ಸಾರ್ವಜನಿಕ‌ ಜೀವನ ವಿಪರೀತ ಕಲುಷಿತ ಮತ್ತು ಕಳಪೆ ಆಗುತ್ತಿರುವ ಹೊತ್ತಿನಲ್ಲಿ ಪಿ.ರಾಮಯ್ಯ ಅವರಂತಹ ಒಂದು ಅಪ್ಪಟ ಮಾದರಿ ನಮ್ಮನ್ನೆಲ್ಲಾ ಅಗಲಿದೆ.
ರಾಮಯ್ಯ ಅವರು ಪತ್ರಕರ್ತರಾಗಿ ಪತ್ರಿಕಾ ವೃತ್ತಿಯ ಘನತೆ-ಮೌಲ್ಯ-ನೈತಿಕ ಶಕ್ತಿ ಹೆಚ್ಚಿಸಲು ಶ್ರಮಿಸಿದರು ಎಂದು ವಿವರಿಸಿದರು.

ಹಾಗೆಯೇ ಪಿ.ರಾಮಯ್ಯ ಅವರು ರಾಜಕಾರಣಿಯಾಗಿ ರಾಜಕಾರಣದ ಉದ್ದೇಶ, ಕಾಳಜಿಯ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನ ಮಾಡಿ ಸಾರ್ವಜನಿಕ ಜೀವನದ ಮೌಲ್ಯವನ್ನು ಉನ್ನತ ಮಟ್ಟದಲ್ಲಿ ಉಳಿಸುವ ಪ್ರಯತ್ನ ಮಾಡಿದ್ದರು. ಹೀಗಾಗಿ ಪಿ.ರಾಮಯ್ಯ ಪತ್ರಕರ್ತರಾಗಿ, ರಾಜಕಾರಣಿಯಾಗಿಅವರು ತಮ್ಮ ಕಾಲದ ಸಾರ್ವಜನಿಕ ಬದುಕಿನ ಮೌಲ್ಯಗಳ ಪ್ರತಿರೂಪವಾಗಿದ್ದರು. ವೃತ್ತಿಪರತೆ ಮತ್ತು ಸಾಮಾಜಿಕ ಬದ್ಧತೆ ರಾಮಯ್ಯನವರ ವ್ಯಕ್ತಿತ್ವದ ಎರಡು ಕಣ್ಣುಗಳಾಗಿದ್ದವು. ಸುದ್ದಿಯನ್ನು ಅವರು ಗ್ರಹಿಸುತ್ತಿದ್ದ ರೀತಿಯೇ, ಅವರು ಸಮಾಜಮುಖಿ ಆಗಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿತ್ತು. ಆಗ ಸಮಾಜಮುಖಿಯಲ್ಲದ ಪತ್ರಕರ್ತರಿಗೆ ವೃತ್ತಿಯಲ್ಲಿ ಜಾಗ ಇರಲಿಲ್ಲ, ಸಮಾಜಮುಖಿಯಲ್ಲದ ಬರಹಗಳಿಗೆ ಪುಟಗಳಲ್ಲಿ ಜಾಗವೂ ಸಿಗುತ್ತಿರಲಿಲ್ಲ. ಈ ಹೊತ್ತಿನಲ್ಲಿ ಇವೆರಡೂ ಮಾದರಿಗಳೂ ಸವಕಲಾಗಿ ಕಾಣುತ್ತಿರುವುದು ಬೇಸರದ ಸಂಗತಿ ಎಂದರು.

“ರಾಮಯ್ಯನವರಂತಹ ಹಿರಿಯರು ಪತ್ರಿಕೋದ್ಯಮದ ನೈತಿಕ ಸ್ಥೈರ್ಯದಂತೆ ಇದ್ದರು. ಅವರು ನಿರ್ಗಮಿಸಿದಾಗ ಕೇವಲ ಒಬ್ಬ ಪತ್ರಕರ್ತನ ನಿರ್ಗಮನವಲ್ಲ, ಬದಲಿಗೆ ಒಂದು ಕಾಲಘಟ್ಟದ ಪತ್ರಿಕಾ ಮೌಲ್ಯಗಳ ಅಂತ್ಯದಂತೆ ಭಾಸವಾಗುತ್ತದೆ” ಎಂದು ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಅವರು ದಾಖಲಿಸಿದ್ದನ್ನು ಉಲ್ಲೇಖಿಸಿದರು.

ಪಿ. ರಾಮಯ್ಯ ಅವರು ಬರೆದ “ನಾನು ಹಿಂದೂ ರಾಮಯ್ಯ” ಪುಸ್ತಕ ಅವರ ಆತ್ಮಕಥೆಯಾಗಿರದೆ, ಅರ್ಧ ಶತಮಾನದ ಚರಿತ್ರೆಯೂ ಆಗಿದೆ. ಹಳೆಯ ಮೈಸೂರು ಭಾಗದ ಸಾಮಾಜಿಕ ಮತ್ತು ರಾಜಕೀಯ ಬದುಕು ಮತ್ತು ಬದಲಾವಣೆಗಳ ದಾಖಲೆಯಾಗಿದೆ ಎಂದರು.

ಅಂದಿನ ಕಾಲದ ಪತ್ರಿಕೋದ್ಯಮದಲ್ಲಿ ಅನಿವಾರ್ಯವಾಗಿದ್ದ ನೈತಿಕತೆ, ಸವಾಲುಗಳು ಮತ್ತು ವರದಿಗಾರಿಕೆಯಲ್ಲಿನ ಬದ್ಧತೆಯ ವಿಲ್ ಬರೆದಿಟ್ಟಂತಿದೆ.
ಪಿ.ರಾಮಯ್ಯನವರಿಗೆ ದೇವರಾಜ ಅರಸು ಅವರಿಂದ ಹಿಡಿದು ಅನೇಕ ಮುಖ್ಯಮಂತ್ರಿಗಳೊಂದಿಗೆ ಇದ್ದ ಆಪ್ತ ಒಡನಾಟವನ್ನು ರಾಜ್ಯ ಧರ್ಮ/ ವೃತ್ತಿಧರ್ಮವನ್ನು ಕಾಪಾಡಲು ಕಟ್ಟುನಿಟ್ಟಾಗಿ ಬಳಸಿದ್ದನ್ನು ಸ್ಮರಿಸಿದರು.

ಮೇಲ್ಮನೆಯಲ್ಲಿ (ವಿಧಾನ ಪರಿಷತ್) ನಡೆಯುತ್ತಿದ್ದ ಚರ್ಚೆಗಳಲ್ಲಿ ಗಂಭೀರತೆ ಮತ್ತು ಮೌಲ್ಯಗಳನ್ನು ತರುವಲ್ಲಿ ಇವರು ಶ್ರಮಿಸಿದರು. ಹೀಗಾಗಿ ರಾಮಯ್ಯ ಅವರು ತಾವು ತೊಡಗಿಸಿಕೊಂಡಿದ್ದ ಎಲ್ಲಾ ಕ್ಷೇತ್ರಗಳ ಘನತೆ ಹೆಚ್ಚಿಸುವ ಕೆಲಸ ಮಾಡಿ ಆ ಮಾದರಿಗಳನ್ನು ನಮ್ಮೆದುರಿಗೆ ಬಿಟ್ಟು ಹೋಗಿದ್ದಾರೆ. ಈ ಮಾದರಿಗಳನ್ನು ಇವತ್ತಿನ ಪತ್ರಕರ್ತರು ಮುಂದುವರೆಸಬೇಕು ಎಂದು ಕರೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಚಲುವರಾಯಸ್ವಾಮಿ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೋಡೆ ಪಿ ಕೃಷ್ಣ, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಈ ಸಂಜೆ ಸಂಪಾದಕರಾದ ಟಿ.ವೆಂಕಟೇಶ್, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠ್ಠಲ್ ಮೂರ್ತಿ, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ಗಾಂಧಿ ಸ್ಮಾರದ ನಿಧಿ ಕೋಶಾಧ್ಯಕ್ಷರಾದ ದಿನೇಶ್, ರಾಮಯ್ಯ ಅವರ ಪುತ್ರ ಡಾ.ಬಾಲಾಜಿ ಅವರುಗಳು ಉಪಸ್ಥಿತರಿದ್ದರು.

ಹಾಸನದ ಸೈಟ್ ಜಟಾಪಟಿ: ಎಸ್ಪಿಗೆ ದೂರು ನೀಡಿದ ನಟ ಯಶ್ ತಾಯಿ

ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಸಭೆ ಕರೆಯುತ್ತೇವೆ : ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ

Share. Facebook Twitter LinkedIn WhatsApp Email

Related Posts

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM2 Mins Read

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM1 Min Read

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM2 Mins Read
Recent News

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM
State News
KARNATAKA

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

By kannadanewsnow0906/04/2026 2:42 PM KARNATAKA 2 Mins Read

ಬೆಳಗಾವಿ: “ಪ್ರೀತಿ ಕುರುಡು” ಎನ್ನುವ ಮಾತಿದೆ. ಆದರೆ ಇಂದಿನ ಕಾಲದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳನ್ನು ನೋಡಿದರೆ, ಪ್ರೀತಿ ಮಾಡುವಾಗ…

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM

PUC ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎನ್ನುವ ಗೊಂದಲದಲ್ಲಿದ್ದೀರಾ? : ಹಾಗಾದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ!

06/04/2026 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.