ಹುಬ್ಬಳ್ಳಿ : ಮಕ್ಕಳ ಕೈಗೆ ಮೊಬೈಲ್ ಕೊಡುವ ಪೋಷಕರೇ ಎಚ್ಚರವಾಗಿರಿ, ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೌದು, ಹುಬ್ಬಳ್ಳಿಯ ಬೈರಿದೇವರ ಕೊಪ್ಪದಲ್ಲಿ ಪಾಲಕರು ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದು 13 ವರ್ಷದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಮೃದ್ಧ (13) ಮೃತ ಬಾಲಕನಾಗಿದ್ದು, ಮೊಬೈಲ್ ಬಳಕೆ ಬಿಟ್ಟು ಸರಿಯಾಗಿ ಓದುವಂತೆ ಪೋಷಕರು ಬುದ್ಧಿ ಹೇಳಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.