Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿ ಅಧಿವೇಶನವನ್ನು 1 ವಾರ ವಿಸ್ತರಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ಪತ್ರ ಬರೆದು ಆರ್.ಅಶೋಕ್ ಆಗ್ರಹ

15/12/2025 2:35 PM

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್

15/12/2025 2:31 PM

KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

15/12/2025 2:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್
KARNATAKA

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್

By kannadanewsnow0915/12/2025 2:31 PM

ಮೈಸೂರು: ಇಂದು ನೈರುತ್ಯ ರೈಲ್ವೆಯ ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಅಖಿಲ ಭಾರತ ಪಿಂಚಣಿ ಅದಾಲತ್ – 2025 ಅನ್ನು ಆಯೋಜಿಸಿತು. ಇಂದಿನ ಅಖಿಲ ಭಾರತ ಪಿಂಚಣಿ ಅದಾಲತ್ ಯಶಸ್ವಿಯಾಗಿ ನಡೆಯಿತು.

ಈ ಪಿಂಚಣಿ ಅದಾಲತ್‌ಗೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಷ್ಣು ಗೌಡ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ/ಸಮನ್ವಯಕ/ಮೈಸೂರು, ಹರ್ಷವರ್ಧನ, ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ/ಮೈಸೂರು ಹಾಗೂ ಪೃಥ್ವಿ ಎಸ್. ಹುಲ್ಲತ್ತಿ, ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ/ಮೈಸೂರು ಅವರು ಭಾಗವಹಿಸಿ, ಪಿಂಚಣಿದಾರರ ಅಹವಾಲುಗಳಿಗೆ ಪರಿಹಾರ ಒದಗಿಸಿದರು.

ಒಟ್ಟು 47 ಪಿಂಚಣಿದಾರರು ಈ ಪಿಂಚಣಿ ಅದಾಲತ್‌ನಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅದಾಲತ್ ದಿನದಂದು ಪ್ರತಿನಿಧಿಸಲಾದ ಎರಡು ಹೊಸ ಪ್ರಕರಣಗಳು ಸೆರಿದಂತೆ ಒಟ್ಟು 32 ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಯಿತು. ಈ ಪೈಕಿ 16 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು ಉಳಿದ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ರೈಲ್ವೆ ಪಿಂಚಣಿದಾರರ ಕಲ್ಯಾಣ ಸಂಘ ಮೈಸೂರು, ಇದರ ಅಧ್ಯಕ್ಷರಾದ ಶ್ರೀ ಪಾರ್ಥಸಾರಥಿ ಅವರು, ಪಿಂಚಣಿದಾರರ ಅಹವಾಲುಗಳನ್ನು ಮೈಸೂರು ವಿಭಾಗವು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪರಿಹರಿಸುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಉಳಿದಿರುವ ಎಲ್ಲ ಅಹವಾಲುಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಭರವಸೆ ನೀಡಿದರು.

ರೈಲ್ವೆ ಪಿಂಚಣಿದಾರರ ಕಲ್ಯಾಣ ಸಂಘ, ಮೈಸೂರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಜಿ. ಎಸ್. ಸ್ವಾಮಿನಾಥನ್ ಹಾಗೂ ಸಂಘದ ಇತರ ಸದಸ್ಯರು ಕೂಡ ಪಿಂಚಣಿ ಅದಾಲತ್‌ನಲ್ಲಿ ಉಪಸ್ಥಿತರಿದ್ದರು.

ಪಿಂಚಣಿದಾರರು ಅದಾಲತ್‌ನಲ್ಲಿ ತಮ್ಮ ಅಹವಾಲುಗಳನ್ನು ಮಂಡಿಸಿದ್ದು, ರೈಲ್ವೆ ಅಧಿಕಾರಿಗಳು ಅವುಗಳಿಗೆ ಸಮರ್ಪಕವಾಗಿ ಸ್ಪಷ್ಟನೆ ನೀಡಿದ್ದು, ಸಮಸ್ಯೆಗಳಿಗೆ ಪರಿಹಾರ ಒದಗಿಸಿದರು.

KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

ಬೆಳಗಾವಿ ಅಧಿವೇಶನವನ್ನು 1 ವಾರ ವಿಸ್ತರಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ಪತ್ರ ಬರೆದು ಆರ್.ಅಶೋಕ್ ಆಗ್ರಹ

15/12/2025 2:35 PM1 Min Read

KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

15/12/2025 2:24 PM1 Min Read

ALERT : ಬೆಂಗಳೂರಲ್ಲಿ ಸೈಬರ್ ವಂಚಕರ ಜಾಲಕ್ಕೆ ಹಿರಿಯ ಉದ್ಯಮಿ ಬಲಿ : 8.5 ಕೋಟಿ ಕಳೆದುಕೊಂಡ ರಾಮನ ಭಕ್ತ!

15/12/2025 1:57 PM1 Min Read
Recent News

ಬೆಳಗಾವಿ ಅಧಿವೇಶನವನ್ನು 1 ವಾರ ವಿಸ್ತರಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ಪತ್ರ ಬರೆದು ಆರ್.ಅಶೋಕ್ ಆಗ್ರಹ

15/12/2025 2:35 PM

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್

15/12/2025 2:31 PM

KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

15/12/2025 2:24 PM

ALERT : ಬೆಂಗಳೂರಲ್ಲಿ ಸೈಬರ್ ವಂಚಕರ ಜಾಲಕ್ಕೆ ಹಿರಿಯ ಉದ್ಯಮಿ ಬಲಿ : 8.5 ಕೋಟಿ ಕಳೆದುಕೊಂಡ ರಾಮನ ಭಕ್ತ!

15/12/2025 1:57 PM
State News
KARNATAKA

ಬೆಳಗಾವಿ ಅಧಿವೇಶನವನ್ನು 1 ವಾರ ವಿಸ್ತರಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ಪತ್ರ ಬರೆದು ಆರ್.ಅಶೋಕ್ ಆಗ್ರಹ

By kannadanewsnow0915/12/2025 2:35 PM KARNATAKA 1 Min Read

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ…

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್

15/12/2025 2:31 PM

KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

15/12/2025 2:24 PM

ALERT : ಬೆಂಗಳೂರಲ್ಲಿ ಸೈಬರ್ ವಂಚಕರ ಜಾಲಕ್ಕೆ ಹಿರಿಯ ಉದ್ಯಮಿ ಬಲಿ : 8.5 ಕೋಟಿ ಕಳೆದುಕೊಂಡ ರಾಮನ ಭಕ್ತ!

15/12/2025 1:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.