Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 5:52 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

23/12/2025 5:51 PM

BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ: ಜಾಮೀನು ಅರ್ಜಿ ವಜಾ

23/12/2025 5:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿಯಿಂದ ಮಾತ್ರ ಭಾರತ ಮುನ್ನಡೆಸಲು ಸಾಧ್ಯ ಅಂತ ಜನ ಒಪ್ಪಿದ್ದಾರೆ: ಬಿವೈ ವಿಜಯೇಂದ್ರ
KARNATAKA

ಮೋದಿಯಿಂದ ಮಾತ್ರ ಭಾರತ ಮುನ್ನಡೆಸಲು ಸಾಧ್ಯ ಅಂತ ಜನ ಒಪ್ಪಿದ್ದಾರೆ: ಬಿವೈ ವಿಜಯೇಂದ್ರ

By kannadanewsnow0907/09/2025 5:19 PM

ಬೆಂಗಳೂರು: ಒಂದು ದೇಶ ಒಂದು ಚುನಾವಣೆಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಮಲ್ಲೇಶ್ವರದ ಹವ್ಯಕ ಭವನದಲ್ಲಿ ಇಂದು ಏರ್ಪಡಿಸಿದ್ದ ಒಂದು ದೇಶ ಒಂದು ಚುನಾವಣೆ ಕುರಿತ ವಿದ್ಯಾರ್ಥಿ ಪ್ರಮುಖರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಆಡಳಿತ ಸುಧಾರಣೆ ಜೊತೆಗೇ ಸಾವಿರಾರು ಕೋಟಿ ಹಣವನ್ನು ಉಳಿಸುವ ಕ್ರಮ ಇದು ಎಂದು ಮೆಚ್ಚುಗೆ ಸೂಚಿಸಿದರು.

ಕೆಟ್ಟ ವಿಚಾರಗಳು ಬಹಳ ಬೇಗ ಜನರನ್ನು ತಲುಪುತ್ತವೆ. ಒಳ್ಳೆಯ ವಿಚಾರ ಜನರನ್ನು ತಲುಪಲು ಸ್ವಲ್ಪ ತಡ ಆಗುತ್ತದೆ. ಆದ್ದರಿಂದ ನಾವು ನಮ್ಮ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಲ್ಲಿ ಈ ಒಳ್ಳೆಯ ವಿಚಾರದ ಕುರಿತು ಜಾಗೃತಿ ಮೂಡಿಸಬೇಕು. ವಿವಿಧ ಕ್ಷೇತ್ರಗಳ ಸಮಾಜದ ಗಣ್ಯರ ಮಧ್ಯೆ ಚರ್ಚೆ ಮಾಡಬೇಕು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವೆ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದರು.

ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವದಲ್ಲಿ ಭಾರತವು ಅತ್ಯಂತ ವೇಗದಲ್ಲಿ ಬೆಳವಣಿಗೆ ಸಾಧಿಸುತ್ತಿದೆ. ಕೆಲವೇ ಕೆಲವು ವರ್ಷಗಳಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿ ಜಗತ್ತಿನ ಎರಡನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ. ಇದನ್ನು ಮತ್ತು ಭಾರತದ ಏಳಿಗೆಯನ್ನು ಅಮೆರಿಕ ಸಹಿಸಿಕೊಳ್ಳದಿದ್ದರೆ ಒಪ್ಪಬಹುದು; ಆದರೆ, ಈ ದೇಶದ ಮಣ್ಣಿನ ಋಣ, ಅನ್ನದ ಋಣ ಪಡೆದ ರಾಹುಲ್ ಗಾಂಧಿ, ನಮ್ಮ ಮುಖ್ಯಮಂತ್ರಿಯವರಿಗೆ ಇವನ್ನು ಸಹಿಸಲು ಆಗುತ್ತಿಲ್ಲ ಎಂದರೆ ಇದು ಈ ದೇಶದ ದುರಂತ ಎಂದು ಟೀಕಿಸಿದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ಮಾತನಾಡಿ, ಒಂದೇ ಚುನಾವಣೆ ಕುರಿತು ಅಧ್ಯಯನ ನಡೆಸಿ ವರದಿ ಪಡೆಯಲಾಗಿದೆ. ಇದು ಅನುಷ್ಠಾನಯೋಗ್ಯ ಎಂಬ ವರದಿ ಲಭಿಸಿದೆ ಎಂದು ವಿವರಿಸಿದರು. 370ನೇ ವಿಧಿಯನ್ನು ತಾತ್ಕಾಲಿಕ ನೆಲೆಯಲ್ಲಿ ಹೇರಲಾಗಿತ್ತು. ಮತಬ್ಯಾಂಕ್, ತುಷ್ಟೀಕರಣದ ಸಲುವಾಗಿ ಅದನ್ನು ಖಾಯಂ ಮಾಡಿದ್ದರು. ಬಿಜೆಪಿ, 370ನೇ ವಿಧಿಯನ್ನು ತನ್ನ ಆಶ್ವಾಸನೆಯಂತೆ ರದ್ದು ಮಾಡಿತು ಎಂದು ಹೇಳಿದರು. ಜಿಎಸ್‍ಟಿ ಸರಳೀಕರಣದ ಮಹತ್ವದ ನಿರ್ಧಾರವನ್ನೂ ಮೋದಿಜೀ ಅವರ ಮಾರ್ಗದರ್ಶನದಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೆಗೆದುಕೊಂಡಿದ್ದಾರೆ ಎಂದರು.

ಹಿಂದೆ ದೇಶದಲ್ಲಿ ಒಂದು ರಾಷ್ಟ್ರ ಒಂದೇ ಚುನಾವಣೆ ಪದ್ಧತಿ ಇತ್ತು. ಆದರೆ, ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ಅನೇಕ ರಾಜ್ಯಗಳಲ್ಲಿ ಚುನಾಯಿತ ಸರಕಾರವನ್ನು ರದ್ದು ಮಾಡಿ, ರಾಷ್ಟ್ರಪತಿ ಆಳ್ವಿಕೆ ಹೇರಿ ಈ ಗಿಟಾರ್‍ನ ತಂತಿ ಕಡಿದು ಹಾಕಿದರು ಎಂದು ಟೀಕಿಸಿದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಮತ್ತು ಒಗ್ಗಟ್ಟಿನ ಸಂದೇಶವನ್ನು ನಾವು ಒಂದು ರಾಷ್ಟ್ರ- ಒಂದು ಚುನಾವಣೆ ಎಂಬ ಸುಧಾರಣೆ ಮೂಲಕ ನೀಡಲು ಸಾಧ್ಯವಿದೆ ಎಂದು ತಿಳಿಸಿದರು. ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು; ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ವಿನಂತಿಸಿದರು. ಇದೊಂದು ಅಭಿಯಾನ ಆಗಬೇಕಿದೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಒಂದು ದೇಶ ಒಂದು ಚುನಾವಣೆಯ ದಕ್ಷಿಣ ಭಾರತದ ಉಸ್ತುವಾರಿ ಅನಿಲ್ ಕೆ. ಆಂಟೋನಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಒಂದು ದೇಶ ಒಂದು ಚುನಾವಣೆಯ ರಾಜ್ಯ ಸಂಚಾಲಕ ಮತ್ತು ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ಸಹ-ಸಂಚಾಲಕ ಮತ್ತು ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ್ ಬಾಳೆಕಾಯಿ, ಸಂಗೀತಗಾರ ಪ್ರವೀಣ್ ಗೋಡ್ಖಿಂಡಿ, ಭಾರತದ ಮಾಜಿ ಮಹಿಳಾ ಕ್ರಿಕೆಟರ್ ಶ್ರೀಮತಿ ವೇದಾ ಕೃಷ್ಣಮೂರ್ತಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರದಲ್ಲಿ ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು

SHOCKING : ವಿವಾಹಿತನಿಂದ ನಿರಂತರ ಅತ್ಯಾಚಾರ :  ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ.!

Share. Facebook Twitter LinkedIn WhatsApp Email

Related Posts

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 5:52 PM2 Mins Read

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

23/12/2025 5:51 PM1 Min Read

BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ: ಜಾಮೀನು ಅರ್ಜಿ ವಜಾ

23/12/2025 5:51 PM1 Min Read
Recent News

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 5:52 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

23/12/2025 5:51 PM

BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ: ಜಾಮೀನು ಅರ್ಜಿ ವಜಾ

23/12/2025 5:51 PM

ಬೆಂಗಳೂರಲ್ಲಿ ಕೋರ್ಟ್ ಆವರಣದಲ್ಲೇ ಲಾಂಗ್ ತೋರಿಸಿ ಆರೋಪಿಗೆ ಜೀವ ಬೆದರಿಕೆ : ರೌಡಿಶೀಟರ್ ಅರೆಸ್ಟ್!

23/12/2025 5:44 PM
State News
KARNATAKA

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0923/12/2025 5:52 PM KARNATAKA 2 Mins Read

ಶಿವಮೊಗ್ಗ: ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಲ್ಲಿ ಕಾರ್ಯನಿರ್ವಹಿಸುವ ಅಧ್ಯಾಪಕ ವೃಂದ ಪ್ರಮುಖ ಕಾರಣವಾಗುತ್ತದೆ. ಒಂದು ಕಾಲದಲ್ಲಿ ದೊಡ್ಡಿ ಎಂದು…

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

23/12/2025 5:51 PM

BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ: ಜಾಮೀನು ಅರ್ಜಿ ವಜಾ

23/12/2025 5:51 PM

ಬೆಂಗಳೂರಲ್ಲಿ ಕೋರ್ಟ್ ಆವರಣದಲ್ಲೇ ಲಾಂಗ್ ತೋರಿಸಿ ಆರೋಪಿಗೆ ಜೀವ ಬೆದರಿಕೆ : ರೌಡಿಶೀಟರ್ ಅರೆಸ್ಟ್!

23/12/2025 5:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.