Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವರಲಕ್ಷ್ಮೀ ವ್ರತವೋ ಯಾವ ದಿನ ಮಾಡಬೇಕು.?

03/08/2025 6:39 PM

ಇದು ‘ವರಮಹಾಲಕ್ಷ್ಮಿ ಹಬ್ಬ’ದ ಪೂಜೆಯಲ್ಲಿ ಹಣ ವೃದ್ಧಿಗೆ ಪರಿಹಾರ

03/08/2025 6:36 PM

‘ಬಿಂದಿ’ ಇಟ್ಟಿದ್ದೇ ತಪ್ಪಾಯ್ತು ; ‘ಟ್ರೋಲ್’ಗೆ ಒಳಗಾದ ಭಾರತ ಮೂಲದ ಅಮೆರಿಕದ ಸಾಲಿಸಿಟರ್ ಜನರಲ್ ಮಥುರಾ

03/08/2025 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಡಿಸಿಎಂ ಡಿಕೆಶಿ ವಿರುದ್ಧ HDK ವಾಗ್ಧಾಳಿ
INDIA

ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಡಿಸಿಎಂ ಡಿಕೆಶಿ ವಿರುದ್ಧ HDK ವಾಗ್ಧಾಳಿ

By kannadanewsnow0920/05/2025 2:30 PM

ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು) ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಾವ ಪುರುಷಾರ್ಥಕ್ಕೆ ಗ್ರೇಟರ್‌ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್‌ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್‌.. ಬ್ರ್ಯಾಂಡ್‌.. ಎಂದು ಭಜನೆ ಮಾಡುತ್ತಿದ್ದೀರಲ್ಲ.. ಬ್ರ್ಯಾಂಡ್‌ ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ. ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ!! ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು! ಜನರ ಮೇಲೆ ತೆರಿಗೆ ಮೇಲೆ ತೆರಿಗೆ! ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ ಎಂದು ಆರೋಪಿಸಿದ್ದಾರೆ.

ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ʼಪೋರ್ಟ್‌ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್‌ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ನನ್ನ ಆಡಳಿತ ಅತ್ಯಲ್ಪ. ಹಿಂದೆ ಬಿಜೆಪಿ ಜತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ , ಓದಿಕೊಳ್ಳಿ ಎಂದಿರುವ ಅವರು; ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ್ಯಾಂಡಿಗೆ ಜನ ಅದೇ ನೀರು ಬಿಟ್ಟಾರು! ಎಂದು ಎಚ್ಚರಿಕೆ ನೀಡಿದ್ದಾರೆ.

BIG NEWS: ಕರ್ನಾಟಕದಲ್ಲಿ ‘ಹಕ್ಕುಪತ್ರ’ ವಿತರಣೆ ಮೂಲಕ ‘6ನೇ ಗ್ಯಾರಂಟಿ’ ಜಾರಿ: ರಾಹುಲ್ ಗಾಂಧಿ

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

Share. Facebook Twitter LinkedIn WhatsApp Email

Related Posts

‘ಬಿಂದಿ’ ಇಟ್ಟಿದ್ದೇ ತಪ್ಪಾಯ್ತು ; ‘ಟ್ರೋಲ್’ಗೆ ಒಳಗಾದ ಭಾರತ ಮೂಲದ ಅಮೆರಿಕದ ಸಾಲಿಸಿಟರ್ ಜನರಲ್ ಮಥುರಾ

03/08/2025 6:15 PM2 Mins Read

Viral Video : “ನನ್ನ ಸಮಾಧಿಯನ್ನ ನಾನೇ ಅಗೆಯುತ್ತೇನೆ” : ಹಮಾಸ್ ಸುರಂಗದೊಳಗೆ ಇಸ್ರೇಲಿ ಒತ್ತೆಯಾಳುವಿನ ಆಕ್ರಂದನ

03/08/2025 5:48 PM1 Min Read

ಮಹಿಳಾ ಮಣಿಗಳಿಗೆ ಗುಡ್ ನ್ಯೂಸ್ ; ‘LIC’ ಹೊಸ ಯೋಜನೆಯಡಿ, ತಿಂಗಳಿಗೆ 7000 ಲಭ್ಯ, ನೀವೂ ಅರ್ಜಿ ಸಲ್ಲಿಸಿ

03/08/2025 4:59 PM2 Mins Read
Recent News

ವರಲಕ್ಷ್ಮೀ ವ್ರತವೋ ಯಾವ ದಿನ ಮಾಡಬೇಕು.?

03/08/2025 6:39 PM

ಇದು ‘ವರಮಹಾಲಕ್ಷ್ಮಿ ಹಬ್ಬ’ದ ಪೂಜೆಯಲ್ಲಿ ಹಣ ವೃದ್ಧಿಗೆ ಪರಿಹಾರ

03/08/2025 6:36 PM

‘ಬಿಂದಿ’ ಇಟ್ಟಿದ್ದೇ ತಪ್ಪಾಯ್ತು ; ‘ಟ್ರೋಲ್’ಗೆ ಒಳಗಾದ ಭಾರತ ಮೂಲದ ಅಮೆರಿಕದ ಸಾಲಿಸಿಟರ್ ಜನರಲ್ ಮಥುರಾ

03/08/2025 6:15 PM

SHOCKING: ಧರ್ಮಸ್ಥಳದಲ್ಲಿ ಕೇಸ್: ಪಾಯಿಂಟ್ ನಂ.6ರಲ್ಲಿ ಸಿಕ್ಕ ಮೂಳೆ 40 ವರ್ಷ ಹಳೆಯದ್ದು

03/08/2025 5:54 PM
State News
KARNATAKA

ವರಲಕ್ಷ್ಮೀ ವ್ರತವೋ ಯಾವ ದಿನ ಮಾಡಬೇಕು.?

By kannadanewsnow0903/08/2025 6:39 PM KARNATAKA 2 Mins Read

ಎರಡನೇ ಶುಕ್ರವಾರ ಅಥವಾ ಮೂರನೇ ಶುಕ್ರವಾರ ಮಾಡಬೇಕಾ? ಎಂದು ಎಲ್ಲರಿಗೂ ಗೊಂದಲ ಉಂಟಾಗಿದೆ ಇದರಲ್ಲಿ ಯಾವುದೇ ತರ ಸಂಶಯವಿಲ್ಲ ಈ…

ಇದು ‘ವರಮಹಾಲಕ್ಷ್ಮಿ ಹಬ್ಬ’ದ ಪೂಜೆಯಲ್ಲಿ ಹಣ ವೃದ್ಧಿಗೆ ಪರಿಹಾರ

03/08/2025 6:36 PM

SHOCKING: ಧರ್ಮಸ್ಥಳದಲ್ಲಿ ಕೇಸ್: ಪಾಯಿಂಟ್ ನಂ.6ರಲ್ಲಿ ಸಿಕ್ಕ ಮೂಳೆ 40 ವರ್ಷ ಹಳೆಯದ್ದು

03/08/2025 5:54 PM

ಶಿವಮೊಗ್ಗ ಜೈಲಿನಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು

03/08/2025 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.