ಕೊಡಗು: ಜಿಲ್ಲೆಯ ಪ್ರಸಿದ್ಧ ಕಾವೇರಿ ನಿಸರ್ಗಧಾಮದಲ್ಲಿ ಮೂವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಉಂಟಾಗಿದ್ದು, ಚಾಕು ಇರಿತ ಕೂಡ ಉಂಟಾಗಿದೆ. ತ್ರಿಕೋನ ಪ್ರೇಮ ಪ್ರಕರಣ ಸಂಬಂಧ ನಡೆದಂತ ಚಾಕು ಇರಿತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಮೂಲಕ ಕೊಡಗಿನಲ್ಲಿ ಇಂದು ಜನತೆ ಬೆಚ್ಚಿ ಬೀಳುವಂತ ಘಟನೆ ನಡೆದಿದೆ. 

ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದಂತ ಕಾವೇರಿ ನಿಸರ್ಗಧಾಮದಲ್ಲಿ ಇಂದು ಮೂವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಒಬ್ಬಳೇ ಹುಡುಗಿ ಸಂಬಂಧ ಮೂವರು ವಿದ್ಯಾರ್ಥಿಗಳು ಕಿತ್ತಾಡಿಕೊಂಡು, ಹೊಡೆದಾಡಿದ್ದಾರೆ.

BIG NEWS: ಬಿಜೆಪಿ ಶಾಸಕರಿಂದ ‘ರಾಷ್ಟ್ರಧ್ವಜ’ಕ್ಕೆ ಅಪಮಾನ: ‘ತಿರಂಗ’ದ ಹೊದ್ದ ಆನೆ ಮೇಲೆ ಮಗನನ್ನು ಕೂರಿಸಿ ಸವಾರಿ

ಇನ್ನೂ ವಿದ್ಯಾರ್ಥಿಗಳ ಹೊಡೆದಾಟ, ಮಾರಾಮಾರಿ ತಾರಕ್ಕೇರಿದ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಇಬ್ಬರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದಿರೋದಾಗಿ ತಿಳಿದು ಬಂದಿದೆ.

ಸೋನಿಕಾ, ಪ್ರವೀಣ್ ಎಂಬಾತನಿಗೆ ವಿಜಯ್ ಎಂಬುವರು ಚಾಕುವಿನಿಂದ ಇರಿದಿದ್ದಾರೆ. ಹಲವು ಜನರ ನಡುವೆ ವಿದ್ಯಾರ್ಥಿಗಳ ಚಾಕು ಇರಿತ ಕಂಡು, ಜನರು ಬೆಚ್ಚಿ ಬಿದ್ದಿದ್ದಾರೆ.

BIGG NEWS : ಸ್ವಾತಂತ್ರ್ಯ ಸಂಗ್ರಾಮ ಇತಿಹಾಸ ʼಇಂದಿನ ಯುವ ಸಮೂಹʼ ಅರಿತುಕೊಳ್ಳಬೇಕು : ಸಚಿವ ವಿ.ಸೋಮಣ್ಣ

ಚಾಕು ಇರಿತಕ್ಕೆ ಒಳಗಾದಂತ ಸೋನಿಕಾ, ಪ್ರವೀಣ್ ನನ್ನು ಕುಶಾಲನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರೇ ಚಾಕು ಇರಿದಂತ ವಿಜಯ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version