Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುಮಕೂರಿನ `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಫಸ್ಟ್ ರಿಯಾಕ್ಷನ್.!

22/05/2025 10:06 AM

‘ಪಾಕಿಸ್ತಾನ ಭಯೋತ್ಪಾದನೆಯನ್ನು ಪೋಷಿಸುತ್ತಿದೆ’: ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತೀಯ ರಾಜತಾಂತ್ರಿಕರ ತೀವ್ರ ಖಂಡನೆ

22/05/2025 10:04 AM

BREAKING : ಗ್ರೀಸ್ ನಲ್ಲಿ ಬೆಳ್ಳಂಬೆಳಗ್ಗೆ 6.0 ತೀವ್ರತೆಯ ಪ್ರಬಲ ಭೂಕಂಪ : ಬೆಚ್ಚಿ ಬಿದ್ದ ಜನರು | Earthquake in Greece

22/05/2025 9:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರೇ ಗಮನಿಸಿ : ಯಶಸ್ವಿನಿ ಕಾರ್ಡ್’ ನೋಂದಣಿಗೆ ಡಿ.31 ಕೊನೆಯ ದಿನ.!
KARNATAKA

ರಾಜ್ಯದ ಜನರೇ ಗಮನಿಸಿ : ಯಶಸ್ವಿನಿ ಕಾರ್ಡ್’ ನೋಂದಣಿಗೆ ಡಿ.31 ಕೊನೆಯ ದಿನ.!

By kannadanewsnow5706/12/2024 1:09 PM

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು.

ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ.

ಯಶಸ್ಸಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ ಸಹಕಾರ ಸಂಘಗಳ ಸದಸ್ಯರ ಆರೋಗ್ಯ ರಕ್ಷಣೆ (CO-operative Society Members Health Assurance Scheme)ಯೋಜನೆಯಾಗಿದ್ದು, ಸಹಕಾರ ಸಂಘಗಳ ಸದಸ್ಯರು ನಿಗದಿತ ವಾರ್ಷಿಕ ವಂತಿಗೆಯನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳುತ್ತಾರೆ. ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಅನುದಾನ ಒದಗಿಸುವ ಮೂಲಕ ಯೋಜನೆಯಲ್ಲಿ ಭಾಗವಹಿಸುತ್ತದೆ. ಯಶಸ್ವಿನಿ ಯೋಜನೆಯನ್ನು 2024-25ನೇ ಸಾಲಿಗೂ ಮುಂದುವರೆಸಲು ಅನುವಾಗುವಂತೆ ಸದಸ್ಯರ ನೋಂದಣಿಯನ್ನು ಪ್ರಾರಂಭಿಸಲು ಯೋಜನೆಯ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದ್ದು, ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, “ಯಶಸ್ಸಿನಿ” ಯೋಜನೆಯನ್ನು 2024-25ನೇ ಸಾಲಿನಲ್ಲಿ ಮುಂದುವರೆಸಿ ಜಾರಿಗೊಳಿಸಲು ಈ ಕೆಳಕಂಡ ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸುವಂತೆ ನಿಬಂಧಕರು ಕೋರಿರುತ್ತಾರೆ.

ಯೋಜನೆಯ ಮಾರ್ಗಸೂಚಿಗಳು

ಯಾವುದೇ ಸಹಕಾರ ಸಂಘಗಳ ಕಾಯ್ದೆಗಳಡಿ (ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997 ಅಥವಾ ಬಹು ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002) ನೋಂದಾಯಿಸಿ, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಹಕಾರ ಸಂಘ / ಬ್ಯಾಂಕುಗಳ (ಗ್ರಾಮೀಣ ಮತ್ತು ನಗರ ಸಹಕಾರ ಸಂಘಗಳು ಒಳಗೊಂಡಂತೆ) ಸದಸ್ಯರು ಅಥವಾ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು, ಸದಸ್ಯರಾಗಿ ಒಂದು ತಿಂಗಳು ಪೂರ್ಣಗೊಂಡಿದ್ದಲ್ಲಿ ಅಂತಹ ಸದಸ್ಯರು ಅಥವಾ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರಡಿ ನೋಂದಣಿಯಾಗಿ ಕಾರ್ಯನಿರತ ಸಹಕಾರ ಸಂಘಗಳಲ್ಲಿ ಕನಿಷ್ಠ ಮೂರು ವರ್ಷ ಸೇವೆ ಪೂರ್ಣಗೊಳಿಸಿ ಮಾಸಿಕ ರೂ.30,000/- ಮತ್ತು ಅದಕ್ಕಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ನೌಕರರು ಮತ್ತು ಅವರ ಅರ್ಹ ಕುಟುಂಬ ಸದಸ್ಯರು ನಿಗದಿತ ವಾರ್ಷಿಕ ವಂತಿಗೆಯನ್ನು ಪಾವತಿಸಿ ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುತ್ತಾರೆ (ನೌಕರರಾಗಿದ್ದಲ್ಲಿ ಕನಿಷ್ಟ ಮೂರು ವರ್ಷ ಸೇವೆ ಮತ್ತು ರೂ.30,000/- ಮತ್ತು ಅದಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವ ಬಗ್ಗೆ ಸಂಬಂಧಿಸಿದ ಸಹಕಾರ ಸಂಘದ ಆಡಳಿತ ಮಂಡಳಿ ದೃಢೀಕರಣ ಪತ್ರ ಲಗತ್ತಿಸಬೇಕು)

ಸಮಾಪನೆ / ನಿಷ್ಕ್ರಿಯಗೊಂಡಿರುವ ಸಹಕಾರ ಸಂಘಗಳ ಹಾಗೂ ನೌಕರರ ಸಹಕಾರ ಸಂಘಗಳ ಸದಸ್ಯರು ಅಥವಾ ಪ್ರಧಾನ ಅರ್ಜಿದಾರರು ಮತ್ತು ಅವನ ಕುಟುಂಬದ ಯಾವುದೇ ಸದಸ್ಯನು ಸರ್ಕಾರಿ ನೌಕರರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಅದೇ ರೀತಿ ಒಬ್ಬ ವ್ಯಕ್ತಿ ಖಾಸಗಿ ಕಂಪನಿ ಅಥವಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಾಸಿಕ ರೂ.30,000/-ಕ್ಕಿಂತ ಹೆಚ್ಚು ಒಟ್ಟು ವೇತನ ಪಡೆಯುತ್ತಿದ್ದಲ್ಲಿ ಅಥವಾ ಒಬ್ಬ ವ್ಯಕ್ತಿ ಯಾವುದೇ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಸದಸ್ಯರಾಗಿದ್ದಲ್ಲಿ ಅಂತಹವರು ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುವುದಿಲ್ಲ. ಅಂತಹವರನ್ನು ಯಶಸ್ವಿನಿ ಯೋಜನೆಯ ‘ಫಲಾನುಭವಿಯಾಗಿ ನೋಂದಾಯಿಸಬಾರದು. ಆದಾಗ್ಯೂ ಯಾವುದೇ ಕಾರಣಕ್ಕೆ ನೋಂದಾಯಿಸಿದ್ದಲ್ಲಿ ಸಹಿತ ಅವರು ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗುವುದಿಲ್ಲ. ಅಂತಹ ವ್ಯಕ್ತಿಗಳು ಪಾವತಿಸಿದ ವಂತಿಗೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

People of the state should note: December 31 is the last date for registration of Yashaswini Card. ರಾಜ್ಯದ ಜನರೇ ಗಮನಿಸಿ : ಯಶಸ್ವಿನಿ ಕಾರ್ಡ್’ ನೋಂದಣಿಗೆ ಡಿ.31 ಕೊನೆಯ ದಿನ.!
Share. Facebook Twitter LinkedIn WhatsApp Email

Related Posts

BREAKING : ತುಮಕೂರಿನ `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಫಸ್ಟ್ ರಿಯಾಕ್ಷನ್.!

22/05/2025 10:06 AM1 Min Read

BREAKING : ಬೆಂಗಳೂರಿನಲ್ಲಿ ಗನ್ ಹಿಡಿದು ಪಬ್ ಗೆ ನುಗ್ಗಿ ಕಳ್ಳತನ ಪ್ರಕರಣ : ಒಡಿಶಾ ಮೂಲದ ಆರೋಪಿ ಅರೆಸ್ಟ್.!

22/05/2025 9:35 AM1 Min Read

ನಿಮ್ಮ ಗೃಹಸ್ಥ ಜೀವನ ಸಮೃದ್ಧವಾಗಲು, ಕುಟುಂಬದಲ್ಲಿ ಸಂತೋಷವು ಉಂಟಾಗಲು ಈ ಪರಿಹಾರ ಮಾಡಿ

22/05/2025 9:18 AM3 Mins Read
Recent News

BREAKING : ತುಮಕೂರಿನ `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಫಸ್ಟ್ ರಿಯಾಕ್ಷನ್.!

22/05/2025 10:06 AM

‘ಪಾಕಿಸ್ತಾನ ಭಯೋತ್ಪಾದನೆಯನ್ನು ಪೋಷಿಸುತ್ತಿದೆ’: ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತೀಯ ರಾಜತಾಂತ್ರಿಕರ ತೀವ್ರ ಖಂಡನೆ

22/05/2025 10:04 AM

BREAKING : ಗ್ರೀಸ್ ನಲ್ಲಿ ಬೆಳ್ಳಂಬೆಳಗ್ಗೆ 6.0 ತೀವ್ರತೆಯ ಪ್ರಬಲ ಭೂಕಂಪ : ಬೆಚ್ಚಿ ಬಿದ್ದ ಜನರು | Earthquake in Greece

22/05/2025 9:59 AM

Share market : ಕೆಂಪು ಬಣ್ಣದಲ್ಲಿ ಐಟಿ ಷೇರುಗಳು ಓಪನ್ : ಸೆನ್ಸೆಕ್ಸ್, ನಿಫ್ಟಿ ಕುಸಿತ

22/05/2025 9:52 AM
State News
KARNATAKA

BREAKING : ತುಮಕೂರಿನ `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಫಸ್ಟ್ ರಿಯಾಕ್ಷನ್.!

By kannadanewsnow5722/05/2025 10:06 AM KARNATAKA 1 Min Read

ಬೆಂಗಳೂರು : ತುಮಕೂರಿನ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳ ದಾಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ…

BREAKING : ಬೆಂಗಳೂರಿನಲ್ಲಿ ಗನ್ ಹಿಡಿದು ಪಬ್ ಗೆ ನುಗ್ಗಿ ಕಳ್ಳತನ ಪ್ರಕರಣ : ಒಡಿಶಾ ಮೂಲದ ಆರೋಪಿ ಅರೆಸ್ಟ್.!

22/05/2025 9:35 AM

ನಿಮ್ಮ ಗೃಹಸ್ಥ ಜೀವನ ಸಮೃದ್ಧವಾಗಲು, ಕುಟುಂಬದಲ್ಲಿ ಸಂತೋಷವು ಉಂಟಾಗಲು ಈ ಪರಿಹಾರ ಮಾಡಿ

22/05/2025 9:18 AM
vidhana soudha

BIG NEWS : ರಾಜ್ಯಾದ್ಯಂತ ಭಾರಿ ಮಳೆ : ರಾಜ್ಯ ಸರ್ಕಾರದಿಂದ `ಗ್ರಾಮೀಣ ಭಾಗದ ಜನರಿಗೆ’ ಮಹತ್ವದ ಪ್ರಕಟಣೆ.!

22/05/2025 9:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.