Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶದ ಘನತೆಗೆ ಧಕ್ಕೆ ತರುವ ‘ಟಿ20 ವಿಶ್ವಕಪ್’ನಲ್ಲಿ ಭಾಗವಹಿಸುವುದಿಲ್ಲ ; ಬಾಂಗ್ಲಾದೇಶ

07/01/2026 10:07 PM

20 ಹೊಸ ‘ಶಕ್ತಿಬಾನ್’ ರೆಜಿಮೆಂಟ್’ಗಳೊಂದಿಗೆ ‘ಡ್ರೋನ್ ಸಮರ’ಕ್ಕೆ ಭಾರತೀಯ ಸೇನೆ ಸಜ್ಜು : ವರದಿ

07/01/2026 10:00 PM

BREAKING: ಏ.1ರಿಂದ ಸೆ.30ರವರೆಗೆ ಮೊದಲ ಹಂತದಲ್ಲಿ 2027ರ ಜನಗಣತಿ: ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ

07/01/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಸುಳ್ಳು ಆರೋಪಗಳಿಗೆ ಜನತಾ ನ್ಯಾಯಾಲಯದಿಂದ ತಕ್ಕ ತೀರ್ಪು ಸಿಕ್ಕಿದೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌
KARNATAKA

ಬಿಜೆಪಿ ಸುಳ್ಳು ಆರೋಪಗಳಿಗೆ ಜನತಾ ನ್ಯಾಯಾಲಯದಿಂದ ತಕ್ಕ ತೀರ್ಪು ಸಿಕ್ಕಿದೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

By kannadanewsnow0923/11/2024 5:35 PM

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿರುವುದು ನಮ್ಮ ಸರ್ಕಾರದ ಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ.

ಉಪ ಚುನಾವಣೆಯ ಫಲಿತಾಂಶದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಉಪ ಚುನಾವಣೆ ಫಲಿತಾಂಶಗಳು 2028 ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.

ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಹಾಗೂ ಮೈಸೂರು ಕರ್ನಾಟಕ ಭಾಗದ ಚನ್ನಪಟ್ಟಣದಲ್ಲಿ ಜನರು ಕಾಂಗ್ರೆಸ್‌ ಪಕ್ಷಕ್ಕೆ ಜೈ ಎಂದಿದ್ದಾರೆ. ಇದರೊಂದಿಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಸುಳ್ಳು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ನಾಯಕರು ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ವಕ್ಫ್‌ ಕುರಿತು ಜನರನ್ನು ದಿಕ್ಕು ತಪ್ಪಿಸಲು ಬಿಜೆಪಿಗರು ಪ್ರಯತ್ನಿಸಿದರು. ಜನತಾ ನ್ಯಾಯಾಲಯದಲ್ಲಿ ಜನರೇ ತಕ್ಕ ತೀರ್ಪು ಕೊಟ್ಟಿದ್ದಾರೆ. ಇದರಿಂದ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದೆ ಎಂದು ಶರಣ್‌ ಪ್ರಕಾಶ್‌ ಪಾಟೀಲ್‌ ಕುಟುಕಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನಾವು ಅನುಷ್ಠಾನಕ್ಕೆ ತಂದಿದ್ದೇವೆ. ಒಂದೂವರೆ ವರ್ಷದಲ್ಲಿ ರಾಜ್ಯದ ಎಲ್ಲ ವರ್ಗದ ಜನರಿಗೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪಿವೆ. ಇದರ ಪ್ರತಿಫಲವೇ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ. ಅಭಿವೃದ್ಧಿ ಪರವಾಗಿರುವ ಸರ್ಕಾರಕ್ಕೆ ಜನರು ಮನ್ನಣೆ ನೀಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ತಮ್ಮ ಭದ್ರಕೋಟೆ ಎಂದು ಹೇಳಿಕೊಳ್ಳುವ ಬಿಜೆಪಿ ಮತ್ತು ಜೆಡಿಎಸ್‌ ಕ್ಷೇತ್ರಗಳಲ್ಲೇ ಕಾಂಗ್ರೆಸ್‌ ಪರವಾಗಿ ಜನರು ಬೆಂಬಲ ನೀಡಿದ್ದಾರೆ. ಅಂದರೆ ಈ ಬಿಜೆಪಿ ಮತ್ತು ಜೆಡಿಎಸ್‌ ಈ ಕ್ಷೇತ್ರಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದಕ್ಕೆ ಮತದಾರರು ತಮ್ಮ “ಮತ”ದ ಮೂಲಕ ತಿರುಗೇಟು ನೀಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಸುಳ್ಳಿನ ನಾಟಕಕ್ಕೆ ತೆರೆ ಎಳೆದಿದ್ದಾರೆ ಜನರು. ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ, ಜೆಡಿಎಸ್‌ ಅನ್ನು ಜನರು ತಿರಸ್ಕರಿಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದ ಉಭಯ ಪಕ್ಷಗಳಿಗೆ ಜನರು ಸರಿಯಾಗಿ “ಸಾಣೆ” ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ನಾಯಕತ್ವದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮುಂಬರುವ ದಿನಗಳಲ್ಲಿಯೂ ನಾವು ಜನರಿಗೆ ಉತ್ತಮ ಸೇವೆ ನೀಡುತ್ತೇವೆ. ಈ ಉಪ ಚುನಾವಣೆಯ ಫಲಿತಾಂಶವೇ ನಮಗೆ ಇನ್ನಷ್ಟು ಸ್ಫೂರ್ತಿ ನೀಡಿದೆ ಎಂದು ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ನಾನು ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಎದೆಗುಂದಲ್ಲ, ಹೋರಾಟ ಮಾಡುತ್ತೇನೆ: ನಿಖಿಲ್ ಕುಮಾರಸ್ವಾಮಿ

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

Share. Facebook Twitter LinkedIn WhatsApp Email

Related Posts

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ

07/01/2026 9:20 PM2 Mins Read

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

07/01/2026 8:51 PM1 Min Read

ಮಂಡ್ಯದಲ್ಲಿ ಪೊಲೀಸ್ ಠಾಣೆ ಹಿಂದಿನ ವಿಶ್ರಾಂತಿ ಗೃಹದಲ್ಲೇ ಪೇದೆ ಆತ್ಮಹತ್ಯೆ

07/01/2026 8:44 PM1 Min Read
Recent News

BREAKING : ದೇಶದ ಘನತೆಗೆ ಧಕ್ಕೆ ತರುವ ‘ಟಿ20 ವಿಶ್ವಕಪ್’ನಲ್ಲಿ ಭಾಗವಹಿಸುವುದಿಲ್ಲ ; ಬಾಂಗ್ಲಾದೇಶ

07/01/2026 10:07 PM

20 ಹೊಸ ‘ಶಕ್ತಿಬಾನ್’ ರೆಜಿಮೆಂಟ್’ಗಳೊಂದಿಗೆ ‘ಡ್ರೋನ್ ಸಮರ’ಕ್ಕೆ ಭಾರತೀಯ ಸೇನೆ ಸಜ್ಜು : ವರದಿ

07/01/2026 10:00 PM

BREAKING: ಏ.1ರಿಂದ ಸೆ.30ರವರೆಗೆ ಮೊದಲ ಹಂತದಲ್ಲಿ 2027ರ ಜನಗಣತಿ: ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ

07/01/2026 9:44 PM

BREAKING : AI ಟೂಲ್ ಗ್ರೋಕ್ ದುರುಪಯೋಗದ ಬಗ್ಗೆ ಸರ್ಕಾರಕ್ಕೆ X ಪ್ರತಿಕ್ರಿಯೆ : ಮೂಲಗಳು

07/01/2026 9:43 PM
State News
KARNATAKA

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ

By kannadanewsnow0907/01/2026 9:20 PM KARNATAKA 2 Mins Read

ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ…

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

07/01/2026 8:51 PM

ಮಂಡ್ಯದಲ್ಲಿ ಪೊಲೀಸ್ ಠಾಣೆ ಹಿಂದಿನ ವಿಶ್ರಾಂತಿ ಗೃಹದಲ್ಲೇ ಪೇದೆ ಆತ್ಮಹತ್ಯೆ

07/01/2026 8:44 PM

ಅರಳಿ ಮರಕ್ಕೆ ಶನಿವಾರ ಮಾತ್ರ ಪೂಜೆ ಏಕೆ ಗೊತ್ತಾ.? ಇಲ್ಲಿದೆ ಮಾಹಿತಿ

07/01/2026 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.