ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ ರೂಪಿಸಲಾಗುವುದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ಎಲ್ಲಾ ದಲಿತ ಸಂಘಟನೆಗಳ ಸಭೆಯ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ದಲಿತ ಸಂಘಟನೆಗಳು ಇದಕ್ಕಾಗಿ 10 ತಂಡಗಳನ್ನು ರಚಿಸಲಿವೆ. ಇನ್ನೊಂದು ವಾರದ ಒಳಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದರು. ರಾಜ್ಯದೆಲ್ಲೆಡೆ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಸಮುದಾಯದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರನ್ನು … Continue reading ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ: ಛಲವಾದಿ ನಾರಾಯಣಸ್ವಾಮಿ