ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ಸಿಬಿ ಪಂದ್ಯಕ್ಕೆ ನಿನ್ನ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸರ್ಕಾರ ಅನುಮತಿ ನೀಡಿದ್ದು ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು ಎಂದು ತಿಳಿಸಿದರು.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ನ್ಯಾಯಮೂರ್ತಿ ಕುನ್ಹಾ ಅವರ ಶಿಫಾರಸುಗಳು ಅನುಷ್ಠಾನ ಆಗಬೇಕು ಸೆಲೆಬ್ರೇಶನ್ ಅನುಮತಿ ನೀಡವ ಎನ್ನುವುದರ ಕುರಿತು ಯೋಚಿಸುತ್ತೇವೆ . ಹಾಗಾಗಿ ಪಂದ್ಯ ಆರಂಭಕ್ಕೂ ಮುನ್ನ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಸಮಯ ನೀಡಿ ಪಂದ್ಯಗಳು ಆರಂಭ ಮಾಡುವುದಕ್ಕೆ ಮುಂಚೆ ಇಂತಹ ಕ್ರಮಗಳು ಆಗಬೇಕು ಎಂದು ಈಗಾಗಲೇ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.
ಅದಕ್ಕಾಗಿ ಈಗಾಗಲೇ ಒಂದು ಸಮಿತಿ ಕೂಡ ರಚನೆ ಮಾಡಲಾಗಿದೆ ಅದರಲ್ಲಿ ಜಿಬಿಎ ಚೀಫ್ ಕಮಿಷನರ್ ಮಹೇಶ್ವರರಾವ್ ಹಾಗೂ ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆ ಗಳನ್ನು ಸೇರಿಸಿ ಒಂದು ಸಮಿತಿ ಮಾಡಲಾಗಿದೆ. ಒಂದಕ್ಕಿನ ನಾಲ್ಕರಷ್ಟು ಹೆಚ್ಚಿನ ಭದ್ರತೆ ನೀಡಲಾಗುತ್ತದೆ ಎಂದು ತಿಳಿಸಿದರು.








