ಶಿವಮೊಗ್ಗ: ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಪಿಎಫ್ಐ ಸಿದ್ದರಾಮಯ್ಯನವರ ಪಾಪದ ಕೂಸು. ಅವರ ಅಪರಾಧದಿಂದ ಇಷ್ಟೆಲ್ಲಾ ಅನಾಹುತ ಆಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LPG Alert : ದೇಶದ ಜನತೆಗೆ ಮತ್ತೊಂದು ಬಿಗ್‌ ಶಾಕ್‌ -ಒಂದು ವರ್ಷದಲ್ಲಿ ಕೇವಲ 15 ಮಾತ್ರ ಸಿಲಿಂಡರ್‌ ಬುಕ್‌ ಮಾಡಲು ಸಾಧ್ಯ

ನಗರದಲ್ಲಿ ಮಾತನಾಡಿದ ಅವರು, ಇಡೀ ದೇಶದ ಜನ ನಮ್ಮ ಜತೆಗಿದ್ದಾರೆ. ಅದನ್ನು ನೋಡಿ ಸಿದ್ದರಾಮಯ್ಯನವರಿಗೆ ಸಹಿಸಲಾಗುತ್ತಿಲ್ಲ. ಏನೂ ತೋಚದೆ ಹುಚ್ಚರಂತೆ ಮಾತನಾಡುತ್ತಿದ್ದಾರೆ. ತಮ್ಮ ತಪ್ಪಿನ ಅರಿವಾಗಿ ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಈಗಲಾದರೂ ಸಿದ್ದರಾಮಯ್ಯನವರು ಜಾಗೃತರಾಗಬೇಕು ಎಂದು ಹೇಳಿದರು.

LPG Alert : ದೇಶದ ಜನತೆಗೆ ಮತ್ತೊಂದು ಬಿಗ್‌ ಶಾಕ್‌ -ಒಂದು ವರ್ಷದಲ್ಲಿ ಕೇವಲ 15 ಮಾತ್ರ ಸಿಲಿಂಡರ್‌ ಬುಕ್‌ ಮಾಡಲು ಸಾಧ್ಯ

ಇನ್ನು ಸೊರಬ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಬಿಜೆಪಿ ಪಕ್ಷ ಸೇರ್ಪಡೆಯಾದರು. ಮಡಿವಾಳ ಸಮಾಜದ ಮುಖಂಡರಾಗಿದ್ದಾರೆ. ಅವರು ಬಿಜೆಪಿಯ ಪಕ್ಷ ಸೇರ್ಪಡೆಯಿಂದ ನಾಲ್ಕು ಐದು ಕ್ಷೇತ್ರಕ್ಕೆ ಅನುಕೂಲ. ಯಾವುದೇ ಬೇಡಿಕೆ ಇಲ್ಲದೇ ಅವರು ಬಿಜೆಪಿ ಪಕ್ಷ ಸೇರ್ಪಡೆ ಆಗಿದ್ದಾರೆ. ರಾಜು ತಲ್ಲೂರು ಬಿಜೆಪಿ ಪಕ್ಷ ಸೇರ್ಪಡೆಯಿಂದ ಸೊರಬ ಕ್ಷೇತ್ರದಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು. ರಾಜ್ಯ ಪ್ರವಾಸ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಒಂದೆರಡು ದಿನಗಳಲ್ಲಿ ತೀರ್ಮಾನವಾಗಲಿದೆ. ಮುಂದಿನ ನಾಲ್ಕು ದಿನಗಳಲ್ಲಿ ಪ್ರವಾಸ ಕೈಗೊಳುತ್ತೇನೆ ಎಂದು ಹೇಳಿದರು.

Share.
Exit mobile version