ಬೆಂಗಳೂರು: ಪಿಎಫ್ಐ ನಿಷೇಧದ ಬಳಿಕ ಕಾರ್ಯಾಚರಣೆ ಮುಂದುವರೆಸುವ ಎನ್ ಐ ಎ ಅಧಿಕಾರಿಗಳು ಹಲವು ಸ್ಪೋಟಕ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪಿಎಫ್ಐ ತನ್ನ ಕಾರ್ಯಕರ್ತರಿಗೆ ಉಗ್ರ ತರಬೇತಿ ನೀಡುತ್ತಿದ್ದ ಜಾಗದ ಬಗ್ಗೆ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಪಿಎಫ್ಐ ನಿಷೇಧದ ಬಳಿಕ ಕಾರ್ಯಾಚರಣೆ ಮುಂದುವರೆಸುವ ಎನ್ ಐ ಎ ಅಧಿಕಾರಿಗಳು ಹಲವು ಸ್ಪೋಟಕ ಮಾಹಿತಿ ಹೊರ ಬೀಳುತ್ತಿದ್ದು, ಅಘಾತಕಾರಿ ಮಾಹಿತಿಗಳು ಹೊರಬೀಳುತ್ತಿದೆ. ಈ ಪೈಕಿ ಕಾರ್ಯಕರ್ತರಿಗೆ ಉಗ್ರ ತರಬೇತಿ ನೀಡುತ್ತಿದ್ದ ಸಂಗತಿ ಕೂಡ ಬಯಲಾಗಿದೆ.
ಹೊನ್ನಾವರದಲ್ಲಿ ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಬಿಐ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದೆ. ಈ ವಿಚಾರವಾಗಿ ರಾಜಕೀಯ ವಲಯದಲ್ಲಿ ಸಿಕ್ಕಾಪಟ್ಟೆ ಚರ್ಚೆ ಗ್ರಾಸವಾಗಿತ್ತು. ಸಾವಿನ ವಿಷಯದಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕ ಫೈಟಿಂಗ್ ಜೋರಾಗಿತ್ತು. ಇದಕ್ಕೆ ರಾಜಕೀಯ ನಾಯಕರು ಮರು ತನಿಖೆಗೆ ಆಗ್ರಹಿಸಿದ್ದರು.
ಇದೀಗ ಪರೇಶ್ ಮೇಸ್ತ ಸಾವಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅವರ ಹೊರಾಟಕ್ಕೆ ಕುಟುಂಬಸ್ಥರಿಗೆ ಜಯ ಸಿಕ್ಕನಂತೆ ಆಗಿದೆ. ಸದ್ಯ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪರೇಶ್ ಮೇಸ್ತ ಪ್ರಕರಣವನ್ನು ಮರು ತನಿಖೆ ನಿಶ್ಚಿತವಾಗಿದೆ. ಶೀಘ್ರವೇ ಪರೇಶ್ ಮೇಸ್ತ ಕುಟುಂಬದಿಂದ ಕಾನೂನು ಹೋರಾಟ ಮಾಡಲಿದ್ದಾರೆ. ಸಿಬಿಐ ವರದಿ ಬೆನ್ನಲ್ಲೇ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಾರ್ವಜನಿಕರೇ ಎಚ್ಚರ ; ವಂಚಕರ ಹೊಸ ‘ವಾಟ್ಸಾಪ್ ಹಗರಣ’ಕ್ಕೆ ಬಲಿಯಾಗ್ಬೇಡಿ, ಸರ್ಕಾರದ ಈ ‘ಸಲಹೆ’ ಪಾಲಿಸಿ
SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ