ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ನಾನು ಸೇರಿದಂತೆ ವಿರೋಧ ಪಕ್ಷದ ಎಲ್ಲಾ ನಾಯಕರ ಫೋನ್ ಟ್ಯಾಪಿಂಗ್ ನಡೆಯುತ್ತಿದೆ.ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಫೋಟಕವಾದ ಹೇಳಿಕೆ ನೀಡಿದರು.
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಪ್ರಕರಣದ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಸಿಎಂ ಸಿದ್ದರಾಮ್ಮಯ್ಯ ಕುಮ್ಮಕ್ಕಿನಿಂದಲೇ ಹನಿಟ್ರ್ಯಾಪ್ ನಡೆದಿದೆ. ನಾವು ತನಿಖೆ ನಡೆಸಿ ಎಂದು ಪ್ರತಿಭಟನೆ ನಡೆಸಿದೆವು. ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನಮ್ಮ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ, ರಾಜ್ಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ನಾಯಕರು, ಎಲ್ಲಾ ಶಾಸಕರುಮ ನನ್ನ ಫೋನ್ ಕರೆಗಳನ್ನು ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.