ಬೆಂಗಳೂರು: ಶಾಸಕ ಎಂ.ಪಿ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ.
BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ
ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ. ನೀವು ದೊಡ್ಡವರು, ಮಂತ್ರಿಯಾಗಿದ್ದವರು. ಶಾಸಕರಾಗಿ ಬಹಳ ವರ್ಷ ಕೆಲಸ ಮಾಡಿದವರು. ಇಂತಹ ದುಃಖದ ಮನೆಗಳಿಗೆ ಹೋಗಿ ಸಾಕಷ್ಟು ಬಾರಿ ಸಾಂತ್ವನ ಹೇಳಿದ್ದೀರಿ. ಭಾವೋದ್ವೇಗ ಬೇಡ ಎಂದು ಚಂದ್ರು ಅನುಮಾನಾಸ್ಪದ ಸಾವು ಪ್ರಕರಣ ತನಿಖೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡಿದ್ದಾರೆ.
BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ
ನಗರದಲ್ಲಿ ಮಾತನಾಡಿದ ಅವರು, ಮನಗನ್ನು ಕಳೆದುಕೊಂಡು ಭಾವುಕರಾಗಿದ್ದಾರೆ. ನಾನು ಅವರ ಮನೆಗೆ ಭೇಟಿ ಕೊಟ್ಟಿದ್ದೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದಾರೆ. ಪೋಸ್ಟ್ ಮಾರ್ಟಂ ರಿಪೋರ್ಟ್ ಬರಬೇಕು. ತನಿಖೆ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ಆಗುತ್ತದೆ. ರಿಪೋರ್ಟ್ ಬಂದ ಮೇಲೆ ಎಲ್ಲಾ ತಿಳಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.