ನವದೆಹಲಿ: ಮಧ್ಯಪ್ರದೇಶದ ಬೇತುಲ್ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ11 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಮತ್ತು ಗಾಯಾಳುವಿಗೆ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಿ ಕಾರ್ಯಾಲಯದ ಪ್ರಕಾರ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ʻಮಧ್ಯಪ್ರದೇಶದ ಬೆತುಲ್ನಲ್ಲಿ ನಡೆದ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ನೋವಾಗಿದೆ. ಮೃತರಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ. ಮೃತರ ಕುಟುಂಬಕ್ಕೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ರೂ 50,000 ನೀಡಲಾಗುವುದುʼ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Pained by the loss of lives due to an accident in Betul, MP. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. Rs. 50,000 would be given to the injured: PM @narendramodi
— PMO India (@PMOIndia) November 4, 2022
BIGG NEWS : ಭಾರತದಲ್ಲಿ ನಿರುದ್ಯೋಗ ದರ ಶೇ. 7.7ಕ್ಕೆ ಹೆಚ್ಚಳ : ಸಿಎಂಐಇ ವರದಿ | unemployment Increase
BIG NEWS: ಇಂದಿನಿಂದಲೇ ʻಟ್ವಿಟರ್ʼ ಉದ್ಯೋಗಿಗಳ ಸಾಮೂಹಿಕ ವಜಾ ಪ್ರಾರಂಭ | mass layoffs at Twitter
BIGG NEWS : ಭಾರತದಲ್ಲಿ ನಿರುದ್ಯೋಗ ದರ ಶೇ. 7.7ಕ್ಕೆ ಹೆಚ್ಚಳ : ಸಿಎಂಐಇ ವರದಿ | unemployment Increase