ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ‘ವಿಜಯದಶಮಿ’ ಸಂದರ್ಭದಲ್ಲಿ ದುರ್ಗಾದೇವಿ ವಿಗ್ರಹ ನಿಮಜ್ಜನ ವೇಳೆ ಜಲ್ಪೈಗುರಿ ಜಿಲ್ಲೆಯ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಉಂಟಾದ ಪರಿಣಾಮ ಸುಮಾರು ಎಂಟು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ನಡೆದ ದುರ್ಘಟನೆಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ” ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಬುಧವಾರ ಸಂಜೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಮಾಲ್ ನದಿಗೆ ಅಪ್ಪಳಿಸಿದ ಹಠಾತ್ ಪ್ರವಾಹದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ತಿಳಿಸಿದ್ದಾರೆ.
Watch Video: ಬೆಂಕಿ ಹಚ್ಚಿದವರ ಮೇಲೆ ಪ್ರತೀಕಾರ ತೀರಿಸಿಕೊಂಡ ʻರಾವಣನ ಪ್ರತಿಕೃತಿʼ
BIGG NEWS : ಮೈಸೂರಿನಿಂದ ಬೆಂಗಳೂರಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ | CM Basavaraja Bommai