ನವದೆಹಲಿ : ತಮಿಳುನಾಡಿನ ಕೂನೂರ್ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಸೇರಿ ಇತರ 11 ವೀರಾ ಸೇನಾನಿಗಳಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ರು.
ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ರಕ್ಷಣಾ ಅಧಿಕಾರಿಗಳ ಪಾರ್ಥಿವ ಶರೀರವನ್ನು ಭಾರತೀಯ ವಾಯುಪಡೆಯ ಸಿ-130ಜೆ ವಿಮಾನದಲ್ಲಿ ಗುರುವಾರ ಸಂಜೆ ರಾಷ್ಟ್ರ ರಾಜಧಾನಿಗೆ ತರಲಾಯಿತು. ಅಂತಿಮ ದರ್ಶನಕ್ಕಾಗಿ ದೆಹಲಿಯ ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದ್ದು, ಅವರ ಕುಟುಂಬಗಳು ಸೇರಿ ಸಂಬಂಧಿಕರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಸಧ್ಯ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಎನ್ ಎಸ್ ಎ ಅಜಿತ್ ದೋವಲ್ ಅಂತಿಮ ನಮನ ಸಲ್ಲಿಸಿದ್ರು. ನಂತ್ರ ಕುಟುಂಬ ಸದಸ್ಥರಿಗೆ ಸಂತ್ವಾನ ಹೇಳುವ ಪ್ರಯತ್ನ ಮಾಡಿದ್ರು. ಈ ಮಧ್ಯೆ ಎಲ್ಲರ ಕಣ್ಣು ತೇವವಾಗಿಯೇ ಉಳಿದಿತ್ತು.
#WATCH PM Narendra Modi leads the nation in paying tribute to CDS General Bipin Rawat, his wife Madhulika Rawat and other 11 Armed Forces personnel who lost their lives in the military chopper crash yesterday pic.twitter.com/6FvYSyJ1g6
— ANI (@ANI) December 9, 2021
ಶಾಲೆಗಳಲ್ಲಿ ಮೊಟ್ಟೆ ನೀಡುವ ವಿಚಾರದ ಕುರಿತು ಪೇಜಾವರ ಶ್ರೀಗಳು ಹೇಳಿದ್ದೇನು ಗೊತ್ತಾ..?
ಮಧುಚಂದ್ರ ಕೋಣೆಗೆ ಹೋದ ನವ ವಿವಾಹಿತೆಗೆ ಬಿಗ್ ಶಾಕ್.. ನಿದ್ದೆ ಮಾತ್ರೆ ತಿನ್ನಿಸಿ, ಗಂಡನಿಂದ ನೀಚ ಕೃತ್ಯ