ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳದ್ದೇ ದರ್ಬಾರು ಹೆಚ್ಚಾಗಿದ್ದು, ಹಲವು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಕೂಡ. ಖುದ್ದು ಹೈಕೋರ್ಟ್ ಕೂಡ ಚಾಟಿ ಬೀಸಿದ್ದರು ಕೂಡ ಬಿಬಿಎಂಪಿ ನಿದ್ದೆಯಿಂದ ಎದ್ದಿಲ್ಲ. ಸಾರ್ವಜನಿಕರು ಹೋರಾಟ ನಡೆಸಿದ್ರು ಕೂಡ ನಮಗೂ ಇದಕ್ಕೂ ಸಂಬಂಧವಿಲ್ಲ ಅನ್ನೋ ರೀತಿ ನಡೆದುಕೊಳ್ಳುತ್ತಾ ಇದ್ದಾರೆ.
ಈ ನಡುವೆ ನವೆಂಬರ್ 11ಕ್ಕೆ ಬೆಂಗಳೂರಿಗೆ ಮೋದಿ ಅವರು ನಗರಕ್ಕೆ ಒಂದು ದಿನದ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ದಾರಿಯಲ್ಲಿ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಅಗತ್ಯವಿರುವ ಸಮಯದಲ್ಲಿ ಮಾಡದೇ ಈಗ ಮಾಡುತ್ತಿರುವ ಬಿಬಿಎಂಪಿ ಕೆಲಸದ ಬಗ್ಗೆ ತೀವ್ರ ಟೀಕೆ ಕೇಳಿ ಬಂದಿದೆ.
ಇನ್ನೂ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.ಮೋದಿಯವರು ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಉದ್ಘಾಟನೆಯನ್ನು ಮಾಡಲಿದ್ದಾರೆ.ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.