ಬೆಂಗಳೂರು: ಪ್ರಧಾನ ಮಂತ್ರಿಗಳು ನಾಳೆ (ಮೇ 10, 2026) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕನಕಪುರ ರಸ್ತೆಯ ಊದಿಪಾಳ್ಯದ ಬಳಿ ಇರುವ ‘ಆರ್ಟ್ ಆಫ್ ಲಿವಿಂಗ್’ ಇಂಟರ್ ನ್ಯಾಷನಲ್ ಕೇಂದ್ರಕ್ಕೆ ಪ್ರಧಾನಿಗಳು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಸಾರ್ವಜನಿಕರ ಗಮನಕ್ಕೆ ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಿನಂತಿಸಿದ್ದಾರೆ:
ಸಂಚಾರ ಬದಲಾವಣೆ ಸಮಯ:
ದಿನಾಂಕ 10.05.2026 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಈ ಬದಲಾವಣೆ ಜಾರಿಯಲ್ಲಿರುತ್ತದೆ.
ಪರ್ಯಾಯ ಮಾರ್ಗಗಳ ವಿವರ:
-
ಬೆಂಗಳೂರಿನಿಂದ ಕನಕಪುರದ ಕಡೆಗೆ ಸಂಚರಿಸುವ ವಾಹನಗಳು: ಬೆಂಗಳೂರಿನಿಂದ ಕನಕಪುರಕ್ಕೆ ಹೋಗುವ ವಾಹನಗಳು ಬೆಂಗಳೂರು – ಕೆಂಗೇರಿ – ಬಿಡದಿ – ರಾಮನಗರ – ಕನಕಪುರ ಮಾರ್ಗವಾಗಿ ಸಂಚರಿಸಬೇಕು.
-
ಕನಕಪುರದಿಂದ ಬೆಂಗಳೂರಿನ ಕಡೆಗೆ ಸಂಚರಿಸುವ ವಾಹನಗಳು: ಕನಕಪುರದಿಂದ ಬೆಂಗಳೂರಿಗೆ ಬರುವ ವಾಹನಗಳು ಕನಕಪುರ – ಹಾರೋಹಳ್ಳಿ – ಕಗ್ಗಲೀಪುರ ರಸ್ತೆ – ಬನ್ನೇರುಘಟ್ಟ ಮೂಲಕ ಬೆಂಗಳೂರಿಗೆ ಸಂಚರಿಸುವಂತೆ ಕೋರಲಾಗಿದೆ.
ಪ್ರಧಾನಿಗಳ ಭೇಟಿಯ ಸಂದರ್ಭದಲ್ಲಿ ಸುಗಮ ಸಂಚಾರ ಮತ್ತು ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








