ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರಿಗೆ ಲೈಂಕಿಗ ಕಿರುಕುಳ ಆರೋಪದಲ್ಲಿ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್.ಐಆರ್ ದಾಖಲಾಗಿದೆ. ಎಫ್ಐಆರ್ ಪ್ರತಿಯಲ್ಲಿ ಏನ್ ಇದೆ ಎನ್ನುವ ಬಗ್ಗೆ ಮುಂದೆ ಓದಿ..

ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಚಿತ್ರದುರ್ಗದ ಪ್ರಸಿದ್ಧ ಮಠಗಳಲ್ಲಿ ಒಂದಾದಂತ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

BIG BREAKING NEWS: ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಆರೋಪ: ಚಿತ್ರದುರ್ಗದ ಮಾಜಿ ಶಾಸಕ ಎಸ್.ಕೆ ಬಸವರಾಜನ್ ವಿರುದ್ಧ FIR ದಾಖಲು

ಪೊಲೀಸರು ದಾಖಲಿರುವಂತ ದೂರಿನಲ್ಲಿ ದಿನಾಂಕ 26-08-2022ರಂದು ಠಾಣೆಗೆ ಹಾಜರಾದಂತ ದೂರುದಾರ ಮೈಸೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಚಂದ್ರಕುಮಾರ್ ಸಿ ಅವರು, ಒಡನಾಡಿ ಸಂಸ್ಥೆಯವರು, ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲಿದ್ದಂತ ಪ್ರಿಯದರ್ಶಿನಿ ಶಾಲೆಯಲ್ಲಿ ಓದುತ್ತಿದ್ದಂತ ಇಬ್ಬರು ವಿದ್ಯಾರ್ಥಿನಿಯರು ಅಕ್ಕಮಹಾದೇವಿ ವಸತಿ ನಿಲಯದಲ್ಲಿ ನಿವಾಸಿಗಳಾಗಿರುತ್ತಾರೆ.

ಈ ಸಂಸ್ಥೆಗಳ ಮುಖ್ಯಸ್ಥರಾದ ಹಾಗೂ ಮಠದ ಮುಖ್ಯ ಸ್ವಾಮೀಜಿಗಳಾದ ಡಾ.ಶಿವಮೂರ್ತಿ ಮುರುಘಾಶರಣರು, ಒರ್ವ ಬಾಲಕಿಗೆ ಮೂರುವರೆ ವರ್ಷದಿಂದ ಹಾಗೂ ಮತ್ತೋರ್ವ ಬಾಲಕಿಗೆ ಒಂದೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಮಾಡುತ್ತಿರುವುದಾಗಿ, ಇವರಿಗೆ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿಗಳಾದ ಬಸವಾದಿತ್ಯ, ಲಾಯರ್ ಗಂಗಾಧರಯ್ಯ, ಲೀಡರ್ ಪರಮಶಿವಯ್ಯನವರುಗಳು ಸಹಾಯ ಮಾಡಿರುತ್ತಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ, ಮೈಸೂರು ಅವರ ಮುಂದೆ ಹಾಜರುಪಡಿಸಿದಾಗ ಹೇಳಿರುತ್ತಾರೆ.

BIGG NEWS : ‘Meesho’ ಉದ್ಯೋಗಿಗಳಿಗೆ ಬಿಗ್‌ ಶಾಕ್‌ ; ‘ದಿನಸಿ ವ್ಯಾಪಾರ’ ಸ್ಥಗಿತ, 300 ಮಂದಿ ಕೆಲಸದಿಂದ ವಜಾ

ಮಕ್ಕಳನ್ನು ಆಪ್ತ ಸಮಾಲೋಚನೆಯಲ್ಲಿ ಮೇಲೆ ವಿವರಿಸಿದಂತೆ ತಮಗೆ ಲೈಂಗಿಕ ದೌರ್ಜನ್ಯವಾಗಿರುವುದಾಗಿ ಹೇಳಿಕೆ ನೀಡಿರುತ್ತಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮಕ್ಕಳ ರಕ್ಷಣಾಧಿಕಾರಿಯವರಿಗೆ ಆದೇಶಿಸಿರುತ್ತಾರೆ. ನಂತ್ರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರು ದೂರು ಸಲ್ಲಿಸಿದ್ದಾರೆ.

ಸದರಿಯವರ ದೂರಿನ ಹಿನ್ನಲೆಯಲ್ಲಿ ತಪ್ಪಿತಸ್ಥರಾದ ಡಾ.ಶಿಮೂರ್ತಿ ಮುರುಘಾಶರಣರು, ವಾರ್ಡನ್ ರಶ್ಮಿ, ಬಸವಾದಿತ್ಯ, ಲಾಯರ್ ಗಂಗಾಧರಯ್ಯ, ಲೀಡರ್ ಪರಮಶಿವಯ್ಯ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಕೋರಲಾಗಿದೆ.

ಈ ದೂರಿನ ಹಿನ್ನಲೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಎ.1 ಆರೋಪಿಯಾಗಿ ಡಾ.ಶಿವಮೂರ್ತಿ ಮುರುಘಾಶರಣರು, ಎ.2 ಆರೋಪಿಯಾಗಿ ವಾರ್ಡನ್ ರಶ್ಮಿ, ಎ3 ಆರೋಪಿಯಾಗಿ ಬಸವಾದಿತ್ಯ, ಎ4 ಆರೋಪಿಯಾಗಿ ಪರಮಶಿವಯ್ಯ ಹಾಗೂ ಎ5 ಆರೋಪಿಯಾಗಿ ಲಾಯರ್ ಗಂಗಾಧರಯ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Share.
Exit mobile version