ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದಂತ ಪೋಕ್ಸೋ ಕೇಸ್ ಪ್ರಕರಣವನ್ನು ಇದೀಗ, ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ನಿನ್ನೆ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.

BIG NEWS: ಅ.7 ರಿಂದ ಪ್ರೊ ಕಬಡ್ಡಿ ಲೀಗ್‌ನ 9ನೇ ಸೀಸನ್‌ ಆರಂಭ!| Pro Kabaddi Leag

ಇನ್ನೂ ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. ಇದಲ್ಲದೇ ಮಠದ ಭಕ್ತರೆನ್ನಲಾದಂತ ಮೈಸೂರಿನ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ ನಾಲ್ಕು, ಐದನೇ ಆರೋಪಿಗಳಾಗಿದ್ದಾರೆ.

ಅಂದಹಾಗೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ ಚಂದ್ರಕುಮಾರ್ ನೀಡಿದಂತ ದೂರಿನ ಮೇರೆಗೆ, ಮೈಸೂರಿನ ನಜರಾಬಾದ್ ಠಾಣೆಯಲ್ಲಿ ನಾಡಿನ ಪ್ರತಿಷ್ಠಿತ ಮಠವಾದಂತ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಎಫ್ ಐ ಆರ್ ದಾಖಲಾಗಿದೆ.

BIGG NEWS : ‘Meesho’ ಉದ್ಯೋಗಿಗಳಿಗೆ ಬಿಗ್‌ ಶಾಕ್‌ ; ‘ದಿನಸಿ ವ್ಯಾಪಾರ’ ಸ್ಥಗಿತ, 300 ಮಂದಿ ಕೆಲಸದಿಂದ ವಜಾ

ಇಬ್ಬರು ವಿದ್ಯಾರ್ಥಿನಿಯರಲ್ಲಿ ಒಬ್ಬರಿಗೆ ಮೂರೂವರೆ ವರ್ಷಗಳಿಂದ, ಮತ್ತೊಬ್ಬ ವಿದ್ಯಾರ್ಥಿನಿಗೆ ಒಂದೂವರೆ ವರ್ಷದಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಮಾಡುತ್ತಿರೋದಾಗಿ ದೂರಿನಲ್ಲಿ ಉಲ್ಲೇಘಿಸಲಾಗಿದೆ. ಇದಕ್ಕೆ ಸಹಕರಿಸಿದಂತ ಉಳಿದ ಆರೋಪಿಗಳ ಬಗ್ಗೆಯೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತ ಸಮಾಲೋಚನೆ ಸಮಯದಲ್ಲಿ ವಿದ್ಯಾರ್ಥಿನಿಯರು ಹೇಳಿಕೆ ಆದರಿಸಿ ದೂರು ಸಲ್ಲಿಸಲಾಗಿತ್ತು.

ಇದೀಗ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಾಗಿದ್ದಂತ ದೂರನ್ನು, ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದಂತ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಂತೆ ಆಗಿದೆ.

BIG NEWS: ಅ.7 ರಿಂದ ಪ್ರೊ ಕಬಡ್ಡಿ ಲೀಗ್‌ನ 9ನೇ ಸೀಸನ್‌ ಆರಂಭ!| Pro Kabaddi Leag

Share.
Exit mobile version