ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ಪೊಲೀಸರ ತನಿಖೆ ಚುರುಕುಗೊಳ್ಳುತ್ತಿದ್ದಂತೇ, ಡಾ.ಶಿವಮೂರ್ತಿ ಶಿವಶರಣರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ನಿನ್ನೆ ಬಾಲಕಿಯನ್ನು ವಿಚಾರಣೆ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಂತ ಪೊಲೀಸರು, ಇಂದು ಸ್ಥಳ ಮಹಜರು ನಡೆಸಲಿದ್ದಾರೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿಯೇ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ, ಸಮಾಜದ ಮುಖಂಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಏಷ್ಯಾಕಪ್‌ನಲ್ಲಿ ಪಾಕ್‌ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ

ಮತ್ತೊಂದೆಡೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಉಮೇಶ್ ಕತ್ತಿ ಅವರು,  ಮುರುಘಾ ಶರಣರ ವಿರುದ್ಧ ಎಫ್ಐಆರ್ ಆಗಲ್ಲ. ಎಫ್ಐಆರ್ ಆದ್ರೇ ನೋಡೋಣ.  ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ಪ್ರಕರಣ ಮಠದ ಒಳ ಜಗಳವಾಗಿದೆ. ಈಗ ಈ ಜಗಳ ಎಲ್ಲೆಲ್ಲೋ ಹೋಗುತ್ತಿದೆ ಅಷ್ಟೇ ಎಂದರು.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಬಿಎಸ್ ವೈ ಭೇಟಿಯಾಗಿ ಸಿಎಂ ಬೊಮ್ಮಾಯಿ ಚರ್ಚೆ.?

ಮಾಜಿ ಶಾಸಕ ಎಸ್ ಕೆ ಬಸವರಾಜನ್ ಹಾಗೂ ಸ್ವಾಮೀಜಿಗಳ ಜಗಳದಿಂದ ಹೀಗೆ ಆಗಿದೆ. ಕೋರ್ಟ್ ಏನ್ ತೀರ್ಮಾನ ಕೈಗೊಳ್ಳುತ್ತೋ ನೋಡೋಣ. ಸ್ವಾಮೀಜಿಗಳ ಮೇಲೆ ಆರೋಪ ಮಾಡಿರುವುದು ತಪ್ಪು ಎಂದರು.

ರಾಜ್ಯದಲ್ಲಿ ಒಂದಿಬ್ಬರು ಸ್ವಾಮೀಜಿಗಳು ಉಳಿದುಕೊಂಡಿದ್ದಾರೆ. ಅವರು ಸಮಾಜವನ್ನು ತಿದ್ದುವಂತ ಪ್ರಯತ್ನ ಮಾಡುತ್ತಿದ್ದಾರೆ. ಅಂತಹ ಪ್ರಯತ್ನಗಳಿಗೆ ತೊಂದರೆ ನೀಡಬಾರದು ಎಂದು ಹೇಳಿದರು.

ಏಷ್ಯಾಕಪ್‌ನಲ್ಲಿ ಪಾಕ್‌ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ

ಅಂದಹಾಗೇ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬಳಿಕ ತನಿಖೆ ಆರಂಭಿಸಿದ್ದಂತ ಪೊಲೀಸರು ನಿನ್ನೆ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ವೈದ್ಯಕೀಯ ಪರೀಕ್ಷೆಗೂ ಹಾಜರುಪಡಿಸಿದ್ದರು.

BIG NEWS: ದೇಶಾದ್ಯಂತ ಕೋವಿಡ್ ಕೇಸ್ ಹೆಚ್ಚಳ: ಇಂದು 7,591 ಮಂದಿಗೆ ಕೊರೋನಾ ಪಾಸಿಟಿವ್ | India Covid19 Report

Share.
Exit mobile version