ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಆರೋಪಿಯಾಗಿರುವಂತ ಮುರುಘಾ ಮಠದ ಶಿವಮೂರ್ತಿ ಶರಣರು, ಇಂದು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಏಪ್ರಿಲ್.22ರಂದು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನೀಡಿದ್ದಂತ ಷರತ್ತು ಬದ್ದ ಜಾಮೀನಿಗೆ ನಾಲ್ಕು ತಿಂಗಳು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು.
ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 2.20ಕ್ಕೆ ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲದೇ ಜಿಲ್ಲಾ ನ್ಯಾಯಾಲಯಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣರು ಶರಣಾದರು.