Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

ಪ್ರತೀಕ್ ಯಾದವ್ ಸಾವು ವಿವಾದ: ಮರಣೋತ್ತರ ಪರೀಕ್ಷೆ ವರದಿ ನಡುವೆಯೇ ‘ವಿಷಪ್ರಾಶನ’ದ ಆರೋಪ ಮಾಡಿದ ಎಸ್‌ಪಿ ಶಾಸಕ

BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
KARNATAKA

BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

By ವಸಂತ ಬಿ ಈಶ್ವರಗೆರೆ

ಹರಿಹರ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರ ವಿರುದ್ಧ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಎಫ್‌ಐಆರ್:

ಬಾಲಕನ ತಾಯಿ ಮೇ 7ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು. ಘಟನೆ ನಡೆದ ಸ್ಥಳ ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಬರುವುದರಿಂದ, ಅಲ್ಲಿ ಮೊದಲು ‘ಜೀರೋ ಎಫ್‌ಐಆರ್’ ದಾಖಲಿಸಿ ನಂತರ ಹರಿಹರಕ್ಕೆ ಪ್ರಕರಣವನ್ನು ವರ್ಗಾಯಿಸಲಾಯಿತು. ಮೇ 8ರಂದು ಹರಿಹರ ಪೊಲೀಸರು ಪೋಕ್ಸೋ ಕಾಯ್ದೆಯ ಸೆಕ್ಷನ್ 8, 12 ಹಾಗೂ ಐಪಿಸಿ ಕಲಂ 323, 506ರ ಅಡಿಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಿಸಿದ್ದಾರೆ.

ದೂರಿನಲ್ಲಿರುವ ಭೀಕರ ಅಂಶಗಳು:

ಬಾಲಕನ ತಾಯಿ ನೀಡಿರುವ ದೂರಿನ ಪ್ರಕಾರ:

  • ಹರಿಹರ ಮಠದಲ್ಲಿ ವಿದ್ಯಾಭ್ಯಾಸಕ್ಕೆ ಇದ್ದ ಮಗನಿಗೆ 2021ರಿಂದ 2024ರವರೆಗೆ ದೌರ್ಜನ್ಯ ನಡೆಸಲಾಗಿದೆ.

  • ಸ್ವಾಮೀಜಿಯವರು ಸ್ನಾನದ ಗೃಹದಲ್ಲಿ ಮಕ್ಕಳನ್ನು ಬೆತ್ತಲೆಗೊಳಿಸಿ ತಮ್ಮ ಖಾಸಗಿ ಅಂಗಗಳಿಗೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು.

  • ಮಕ್ಕಳು ಪ್ರತಿಭಟಿಸಿದರೆ ದೈಹಿಕವಾಗಿ ಹಲ್ಲೆ ನಡೆಸಿ, ಆಹಾರ ನೀಡದೆ ಕೂಡಿ ಹಾಕುತ್ತಿದ್ದರು.

  • ಘಟನೆಯ ಬಗ್ಗೆ ಯಾರಿಗಾದರೂ ಬಾಯಿ ಬಿಟ್ಟರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.

ನಿರೀಕ್ಷಣಾ ಜಾಮೀನು ಪಡೆದ ಶ್ರೀಗಳು:

ಪೋಕ್ಸೋ ಪ್ರಕರಣ ದಾಖಲಾಗುವ ಮುನ್ಸೂಚನೆ ಅರಿತಿದ್ದ ಸ್ವಾಮೀಜಿ, ಏಪ್ರಿಲ್ 21ರಂದೇ ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಮೇ 2ರಂದು ಜಾಮೀನು ಮಂಜೂರು ಮಾಡಿದ್ದರಿಂದ ಸದ್ಯಕ್ಕೆ ಶ್ರೀಗಳಿಗೆ ಬಂಧನದ ಭೀತಿ ಇಲ್ಲ. ಆದರೂ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ಸಾಕ್ಷ್ಯಧಾರಗಳ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳ ಹೇಳಿಕೆ: ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಎಚ್.ಟಿ. ಶೇಖರ್ ಅವರು ಪ್ರಕರಣದ ತನಿಖೆ ಆರಂಭವಾಗಿದ್ದು, ಶೀಘ್ರದಲ್ಲೇ ಬಾಲಕನ ಹೇಳಿಕೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈ ನಡುವೆ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಶ್ರೀಗಳು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪೀಠದ ಟ್ರಸ್ಟ್ ಇತ್ತೀಚೆಗಷ್ಟೇ ವಚನಾನಂದ ಶ್ರೀಗಳನ್ನು ಪೀಠಾಧಿಪತಿ ಸ್ಥಾನದಿಂದ ಪದಚ್ಯುತಗೊಳಿಸಿತ್ತು ಎಂಬುದು ಗಮನಾರ್ಹ.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

1 Min Read

ರಾಜ್ಯ ಸರ್ಕಾರದಿಂದ 400 ಬಿಂದುಗಳ ಹೊಸ ರೋಸ್ಟರ್ ಪ್ರಕಟ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್

2 Mins Read

BIG NEWS : ಪತ್ನಿಗೆ ಜೀವನಾಂಶ ಪಾವತಿಸದಿದ್ದರೆ `ಅರೆಸ್ಟ್ ವಾರಂಟ್’ ಜಾರಿ ಮಾಡಬಹುದು: ಹೈಕೋರ್ಟ್ ಮಹತ್ವದ ತೀರ್ಪು | Karnataka High Court

1 Min Read
Recent News

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

ಪ್ರತೀಕ್ ಯಾದವ್ ಸಾವು ವಿವಾದ: ಮರಣೋತ್ತರ ಪರೀಕ್ಷೆ ವರದಿ ನಡುವೆಯೇ ‘ವಿಷಪ್ರಾಶನ’ದ ಆರೋಪ ಮಾಡಿದ ಎಸ್‌ಪಿ ಶಾಸಕ

BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕೇರಳ ಸಿಎಂ ಆಯ್ಕೆ ಕಗ್ಗಂಟು ಅಂತ್ಯ: ಇಂದು ಅಂತಿಮ ಹೆಸರು ಘೋಷಿಸಲಿದೆ ಕಾಂಗ್ರೆಸ್ ಹೈಕಮಾಂಡ್

State News
KARNATAKA

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಸುಲಭವಾಗಿ ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು…

BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರಾಜ್ಯ ಸರ್ಕಾರದಿಂದ 400 ಬಿಂದುಗಳ ಹೊಸ ರೋಸ್ಟರ್ ಪ್ರಕಟ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್

BIG NEWS : ಪತ್ನಿಗೆ ಜೀವನಾಂಶ ಪಾವತಿಸದಿದ್ದರೆ `ಅರೆಸ್ಟ್ ವಾರಂಟ್’ ಜಾರಿ ಮಾಡಬಹುದು: ಹೈಕೋರ್ಟ್ ಮಹತ್ವದ ತೀರ್ಪು | Karnataka High Court

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.