ತಿರುವನಂತಪುರಂ: ಸಮುದ್ರತೀರದಲ್ಲಿ ಅದ್ದೂರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದಂತೆ ಬಿಯರ್ ಬಾಟಲಿಗಳನ್ನು ಪೊಲೀಸರ ಮೇಲೆ ತೂರಿ ಹಲ್ಲೆಗೈದ ಘಟನೆ ನಡೆದಿದ್ದು, ಓರ್ವನನ್ನು ಬಂಧಿಸಿ 50 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
BREAKING NEWS : ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಸಹೋದರನ ಪುತ್ರ ಅಪಘಾತದಲ್ಲಿ ಸಾವು
ಘಟನಾ ಸ್ಥಳದಲ್ಲಿ ಪರಿಸ್ಥಿತಿ ವಿಕೋಪಗೊಂಡು ಸಂಗೀತ ಕಾರ್ಯಕ್ರಮದ ವೇಳೆ ಸ್ಥಳದಲ್ಲಿ ನಿಲ್ಲಲಾಗದವರು ಗಲಾಟೆ ಮಾಡಿದ್ದರು. ಭದ್ರತೆಗಾಗಿ ಹಾಕಿದ್ದ ಬ್ಯಾರಿಕೇಡ್ಗಳನ್ನು ತಳ್ಳಿದಕ್ಕಾಗಿ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ.
ಅಲ್ಲಿ ನೆರೆದಿದ್ದ ಗುಪೊಂದು ಕಲ್ಲು ಹಾಗೂ ಬಿಯರ್ ಬಾಟಲಿಗಳನ್ನು ಪೊಲೀಸರ ಮೇಲೆ ತೂರಿ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು.ಘಟನೆಯಲ್ಲಿ 6 ಪೊಲೀಸರು ಹಾಗೂ 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಕುರಿತು ವೆಲ್ಲಾಯಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS : ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಸಹೋದರನ ಪುತ್ರ ಅಪಘಾತದಲ್ಲಿ ಸಾವು
ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆಸರಿಯಾದ ಸೌಲಭ್ಯಗಳಿಲ್ಲದೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರು ಹಾಗೂ ಜೆಡಿಟಿ ಕಾಲೇಜಿನವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.